Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನೀರನ್ನು ಮುಂದಿನ ಪೀಳಿಗೆಗೆ ಉಳಿಸುವುದು...

ನೀರನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮ ಕರ್ತವ್ಯ : ಡಾ.ದೇವರಾಜರೆಡ್ಡಿ

ದಿ.ರುಕ್ಮಯ್ಯ ಗುತ್ತೇದಾರ 12ನೇ ಪುಣ್ಯಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ23 Dec 2024 7:46 PM IST
share
ನೀರನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮ ಕರ್ತವ್ಯ : ಡಾ.ದೇವರಾಜರೆಡ್ಡಿ

ಕಲಬುರಗಿ : ಜಲ ಸಂರಕ್ಷಣೆಗಾಗಿ ಕೆರೆ ನಿರ್ಮಾಣ, ಈಗಾಗಲೇ ಇರುವ ಕೆರೆಗಳ ಹೂಳೆತ್ತುವುದು, ಚೆಕ್ ಡ್ಯಾಂ ಹಾಗೂ ಕೃಷಿ ಹೊಂಡಗಳ ನಿರ್ಮಾಣ ಹಾಗೂ ನಿರ್ವಹಣೆ ಸೇರಿದಂತೆ ಜಲ ಮರುಪೂರಣಕ್ಕೆ ಸಂಬಂಧಿಸಿದ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಇದರಲ್ಲಿ ಸಾರ್ವಜನಿಕರೂ ಸ್ವಯಂ ಪ್ರೇರಿತರಾಗಿ ಜಲ ಸಂರಕ್ಷಣೆ ಹಾಗೂ ಮರುಪೂರಣ ಕಾರ್ಯಕ್ರಮಕ್ಕೆ ಸಹಕರಿಸಬೇಕು ಎಂದು ಚಿತ್ರದುರ್ಗದ ಜಲತಜ್ಞ ಡಾ.ದೇವರಾಜರೆಡ್ಡಿ ಅಭಿಪ್ರಾಯಪಟ್ಟರು.

ಆಳಂದ ತಾಲೂಕಿನ ತಡಕಲ ಗ್ರಾಮದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಆವರಣದಲ್ಲಿ ಸೋಮವಾರ ಜರುಗಿದ ದಿ.ರುಕ್ಮಯ್ಯ ಗುತ್ತೇದಾರರ 12ನೇ ಪುಣ್ಯಸ್ಮರಣೆ, ರೈತ ದಿನಾಚರಣೆ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಉಪನ್ಯಾಸ ನೀಡಿದರು.

ರೈತರ ಖಾಸಗಿ ಜಮೀನು, ಸಮುದಾಯ ಅಥವಾ ಸರಕಾರಿ ಗೋಮಾಳಗಳಲ್ಲಿ 1 ರಿಂದ 2 ಅಡಿ ಅಂತರದಲ್ಲಿ 1*1 ಅಗಲ ಮತ್ತು 4 ಅಡಿ ಆಳದ ಗುಂಡಿಗಳನ್ನು ತೋಡುವ ಮೂಲಕ ಮಳೆ ನೀರು ಇಲ್ಲಿ ಸಂಗ್ರಹವಾಗುವಂತೆ ಮಾಡಬೇಕು, ಹೀಗೆ ಗುಂಡಿಗಳಲ್ಲಿ ಸಂಗ್ರಹವಾದ ನೀರನ್ನು ರೈತರು ತಮ್ಮ ಬೆಳೆಗಳಿಗೆ ಬಳಸಿಕೊಳ್ಳುವ ಜೊತೆಗೆ ನೀರು ನಿರಂತರವಾಗಿ ಅಲ್ಲಿಯೇ ನಿಂತಿರುವುದರಿಂದ ಅಂತರ್ಜಲ ಹೆಚ್ಚಳಕ್ಕೂ ಸಹಕಾರಿಯಾಗಿದೆ ಎಂದರು.

ಮನೆಗಳ ಸುತ್ತಲಿನ 1 ಅಥವಾ 2 ಕಿ.ಮೀ ವ್ಯಾಪ್ತಿಯಲ್ಲಿ ಬೀಳುವ ಮಳೆ ನೀರಿನ ಹರಿವು ಈ ನಾಲಾ ಬದುವಿಗೆ ಬಂದು ಸೇರುವಂತೆ ವ್ಯವಸ್ಥೆ ಮಾಡಬೇಕು. ಲಭ್ಯವಿರುವ ರೈತರ ಭೂಮಿ ಅಥವಾ ಸರಕಾರಿ ಜಾಗಗಳಲ್ಲಿ ಬೃಹತ್ತಾದ ಕಟ್ಟೆಯಂತಹ ಬದುವೊಂದನ್ನು ನಿರ್ಮಿಸಿ ಅತಿ ಹೆಚ್ಚು ನೀರು ಸಂಗ್ರಹವಾಗುವಂತೆ ಮಾಡಬೇಕು. ಇಲ್ಲಿ ಸಂಗ್ರಹವಾದ ನೀರನ್ನು ಸುಮಾರು 15 ರಿಂದ 20 ರೈತರು ತಮ್ಮ ತೋಟಗಳಿಗೆ/ಬೆಳೆಗಳಿಗೆ ಬಳಸಿಕೊಳ್ಳಬಹುದಾಗಿದ್ದು, ಜಾನುವಾರುಗಳು ಸಹ ಈ ನೀರನ್ನು ಕುಡಿಯಬಹುದಾಗಿರುತ್ತದೆ. ಇದೊಂದು ಬೃಹತ್ ಕಟ್ಟೆಯ ರೀತಿಯಲ್ಲಿರುವುದರಿಂದ ಇದರಲ್ಲಿ ಸಂಗ್ರಹವಾದ ನೀರು ಹಲವು ದಿನಗಳ ವರೆಗೆ ಶೇಖರಣೆಯಾಗಿ ಕ್ರಮೇಣ ಇಂಗಿ ಅಂತರ್ಜಲ ಸೇರಿಕೊಳ್ಳುವುದರಿಂದ ಸುತ್ತಮುತ್ತಲಿನ ಅಂತರ್ಜಲ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಿದೆ ತಿಳಿಸಿದರು.

ಮಾಜಿ ಶಾಸಕ ಸುಭಾಷ ಗುತ್ತೆದಾರ ಮಾತನಾಡಿ, ಹಿಂದಿನಿಂದಲೂ ಗ್ರಾಮಗಳನ್ನು ಸುಭೀಕ್ಷವಾಗಿಡಲು ಪಾರಂಪರಿಕವಾಗಿ ನಿರ್ಮಾಣ ಮಾಡಿರುವ ಕೆರೆಗಳು ಮಾನವನ ದುರಾಸೆಯಿಂದ ಅಳಿವಿನಂಚಿಗೆ ತಲುಪಿವೆ. ಅತಿಯಾದ ಒತ್ತುವರಿಯಿಂದಾಗಿ ಎಕರೆಗಳಷ್ಟಿದ್ದ ಕರೆಗಳು ಗುಂಟೆಗಳಲ್ಲಿವೆ. ಇದರಿಂದಾಗಿ ನೀರಿನ ಶೇಖರಣೆಯ ಪ್ರಮಾಣ ಕುಗ್ಗಿ ಹೋಗಿದ್ದು, ಇಂತಹ ಕೆರೆಗಳ ಪುನಶ್ಚೇತನಕ್ಕೂ ಕ್ರಮ ವಹಿಸಬೇಕು ಎಂದರು.

ಮಾದನಹಿಪ್ಪರ್ಗಾದ ಅಭಿನವ ಶಿವಲಿಂಗ ಸ್ವಾಮೀಜಿ ಮಾತನಾಡಿ, ಜಲ ಸಂರಕ್ಷಣೆ ಕೇವಲ ಸರಕಾರಗಳ ಜವಾಬ್ದಾರಿಯಾಗಿರದೆ, ಪ್ರತಿಯೊಬ್ಬ ಮಾನವನ ಕರ್ತವ್ಯವೂ ಆಗಿದೆ. ಮುಂದಿನ ಪೀಳಿಗೆಗೆ ನೀರನ್ನು ಉಳಿಸಿ ಮತ್ತು ಅಂತರ್ಜಲ ಹೆಚ್ಚಿಸುವ ಕೆಲಸಕ್ಕೆ ಪ್ರತಿಯೊಬ್ಬ ನಾಗರಿಕನೂ ಇಂದೇ ಕೈಜೋಡಿಸಲಿ ಎಂದರು.

ಕಾರ್ಯಕ್ರಮದಲ್ಲಿ ನಂದಗಾಂವದ ರಾಜಶೇಖರ ಸ್ವಾಮೀಜಿ ಆಶೀವರ್ಚನ ನೀಡಿದರು. ಕಡಗಂಚಿಯ ವೀರಭದ್ರ ಶಿವಾಚಾರ್ಯರು, ಮುತ್ಯಾನ ಬಬಲಾದನ ಗುರುಪಾದಲಿಂಗ ಸ್ವಾಮೀಜಿ, ಮಾಡಿಯಾಳದ ಒಪ್ಪತ್ತೇಶ್ವರ ಸ್ವಾಮೀಜಿ, ಮಾದನಹಿಪ್ಪರ್ಗಾದ ಅಭಿನವ ಶಿವಲಿಂಗ ಸ್ವಾಮೀಜಿ, ಶಾಂತವೀರ ಶಿವಾಚಾರ್ಯರು, ಚಿಣಮಗೇರಿಯ ವೀರಮಹಾಂತ ಶಿವಾಚಾರ್ಯರು, ಯಳಸಂಗಿಯ ಪರಮಾನಂದ ಸ್ವಾಮೀಜಿ, ಕೇಸರ ಜವಳಗಾದ ವೀರಂತೇಶ್ವರ ಶಿವಾಚಾರ್ಯರು, ಕಿಣ್ಣಿಸುಲ್ತಾನದ ಶಿವಶಾಂತಲಿಂಗ ಶಿವಾಚಾರ್ಯರು, ಆಳಂದನ ಸಿದ್ದೇಶ್ವರ ಶಿವಾಚಾರ್ಯರು, ಚೆನ್ನಬಸವ ಪಟ್ಟದೇವರು, ನಿಂಬರ್ಗಾದ ಶಿವಲಿಂಗ ದೇವರು, ತಡಕಲನ ಸಿದ್ಧಮಲ್ಲ ಶಿವಾಚಾರ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಾಲೂಕಿನ 5 ಜನ ಪ್ರಗತಿಪರ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಅಮರನಾಥ ಪಾಟೀಲ, ಹರ್ಷಾ ಗುತ್ತೇದಾರ, ಸಂತೋಷ ಗುತ್ತೇದಾರ, ಹಿರಿಯ ಮುಖಂಡರಾದ ವೀರಣ್ಣಾ ಮಂಗಾಣೆ, ಆನಂದರಾವ ಗಾಯಕವಾಡ, ಮಾಣಿಕ ಜಾಧವ, ಮಲ್ಲಿಕಾರ್ಜುನ ತಡಕಲ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X