Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶರಣಬಸವ ವಿಶ್ವವಿದ್ಯಾಲಯದಲ್ಲಿ...

ಕಲಬುರಗಿ | ಶರಣಬಸವ ವಿಶ್ವವಿದ್ಯಾಲಯದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ21 Jun 2026 7:34 PM IST
share
ಕಲಬುರಗಿ | ಶರಣಬಸವ ವಿಶ್ವವಿದ್ಯಾಲಯದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕಲಬುರಗಿ: ಹೆಚ್ಚು ಕಾಲ ಬದುಕುವುದು ಮುಖ್ಯವಲ್ಲ, ಉತ್ತಮ ಆರೋಗ್ಯ ಮತ್ತು ಗುಣಮಟ್ಟದ ಜೀವನದೊಂದಿಗೆ ಹೆಚ್ಚು ಕಾಲ ಬದುಕುವುದು ಮುಖ್ಯವಾಗಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ರವಿವಾರ ಆಯೋಜಿಸಿದ್ದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ಇಂದಿನ ಭಾರತ ಸರಕಾರದ ಪ್ರಮುಖ ಆರೋಗ್ಯ ನೀತಿಗಳಲ್ಲಿ ಒಂದಾಗಿದ್ದು, 2047ರ ವೇಳೆಗೆ ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸಲಿರುವ ದೇಶವು ಆರೋಗ್ಯವಂತ ಹಾಗೂ ಸಮೃದ್ಧ ರಾಷ್ಟ್ರವಾಗಿ ರೂಪುಗೊಳ್ಳಬೇಕಾಗಿದೆ ಎಂದು ಹೇಳಿದರು.

ಆರ್ಥಿಕತೆ ಮತ್ತು ಮಿಲಿಟರಿ ಶಕ್ತಿ ರಾಷ್ಟ್ರದ ಭದ್ರತೆಗೆ ಪ್ರಮುಖವಾದರೂ, ಆರೋಗ್ಯವಂತ ನಾಗರಿಕರೇ ರಾಷ್ಟ್ರದ ನಿಜವಾದ ಶಕ್ತಿಯಾಗಿದ್ದಾರೆ. ಹಣ ಮತ್ತು ಅಧಿಕಾರ ಮಾತ್ರ ರಾಷ್ಟ್ರದ ಸಾಮರ್ಥ್ಯವನ್ನು ನಿರ್ಧರಿಸುವುದಿಲ್ಲ; ಉತ್ತಮ ಆರೋಗ್ಯವೇ ವ್ಯಕ್ತಿ ಹಾಗೂ ದೇಶದ ಪ್ರಗತಿಗೆ ಮೂಲಾಧಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರು ಅತ್ಯುತ್ತಮ ಯೋಗಪಟುವಾಗಿದ್ದು, ಪ್ರತಿದಿನ ಸುಮಾರು 100 ಸೂರ್ಯನಮಸ್ಕಾರಗಳನ್ನು ಮಾಡುತ್ತಿದ್ದರು. ನಿಯಮಿತ ಯೋಗಾಭ್ಯಾಸದಿಂದ ಅವರು ಎಂದಿಗೂ ದಣಿದಿರುವುದನ್ನು ತಾವು ನೋಡಿಲ್ಲ ಎಂದು ಸ್ಮರಿಸಿದರು.

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿತು. ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೇಹ ಸದೃಢವಾಗಿರುವುದರೊಂದಿಗೆ ಕೆಲಸದಲ್ಲಿ ಚೈತನ್ಯ ಮತ್ತು ಏಕಾಗ್ರತೆ ಹೆಚ್ಚುತ್ತದೆ. ಶಿಕ್ಷಕರು ಹಾಗೂ ವೃತ್ತಿಪರರು ಹೆಚ್ಚು ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಿಸಲು ಯೋಗ ನೆರವಾಗುತ್ತದೆ ಎಂದು ಹೇಳಿದರು.

“ಜೀವಂತವಾಗಿರುವವರೆಗೆ ನಮ್ಮ ದೇಹವನ್ನು ಪ್ರೀತಿಸಬೇಕು, ಕಾಳಜಿ ವಹಿಸಬೇಕು. ಆರೋಗ್ಯಕರ ಹಾಗೂ ಗುಣಮಟ್ಟದ ಜೀವನ ನಡೆಸಲು ಯೋಗ ಅತ್ಯಗತ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಸ್ವಾಭಿಮಾನ ಭಾರತ ಸಂಸ್ಥೆಯ ಜಂಟಿ ಕಾರ್ಯದರ್ಶಿ ಮಂಜುಳಾ ಅವರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯೋಗವನ್ನು ಜಗತ್ತಿಗೆ ಪರಿಚಯಿಸಿದವರು ಭಾರತೀಯರು ಎಂಬುದು ಹೆಮ್ಮೆಯ ವಿಷಯವಾಗಿದೆ. ಇಂದು ಸುಮಾರು 180ಕ್ಕೂ ಹೆಚ್ಚು ದೇಶಗಳಲ್ಲಿ ಯೋಗಾಭ್ಯಾಸ ನಡೆಯುತ್ತಿದ್ದು, ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾಲಯದ ಎಂ.ಎಸ್‌ಸಿ ಯೋಗ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನೀಡಿ, ಯೋಗದ ಆರೋಗ್ಯಕಾರಿ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕುಲಸಚಿವೆ ಡಾ. ಲಕ್ಷ್ಮಿ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್.ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ, ಹಣಕಾಸು ಅಧಿಕಾರಿ ಡಾ. ಕಿರಣ ಮಾಕಾ ಸೇರಿದಂತೆ ವಿವಿಧ ವಿಭಾಗಗಳ ಡೀನರು, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

Tags

KalaburagiYogaSharanbasava University
share
ವಾರ್ತಾಭಾರತಿ
ವಾರ್ತಾಭಾರತಿ
Next Story
X