Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕಾವಿ ಯಾರಪ್ಪನ ಆಸ್ತಿಯಲ್ಲ;...

ಕಲಬುರಗಿ | ಕಾವಿ ಯಾರಪ್ಪನ ಆಸ್ತಿಯಲ್ಲ; ಆಂದೋಲಾ ಶ್ರೀ

ವಾರ್ತಾಭಾರತಿವಾರ್ತಾಭಾರತಿ18 March 2025 6:36 PM IST
share
Photo of Press meet

ಕಲಬುರಗಿ : ಚಿತ್ತಾಪುರದ ದಂಡಗುಂಡ ಬಸವೇಶ್ವರ ಅಭಿವೃದ್ಧಿ ಟ್ರಸ್ಟ್ ಅನಧಿಕೃತವಾಗಿದೆ ಎಂದು ಹೇಳಿದ್ದಕ್ಕೆ ಕೆಲ ಟ್ರಸ್ಟಿಗಳು ಸುದ್ದಿಗೋಷ್ಠಿ ನಡೆಸಿ ಆಂದೋಲಾ ಸ್ವಾಮಿ ಕಾವಿಬಿಟ್ಟು ಖಾದಿ ತೊಡಲಿ ಎಂದು ಹೇಳಿದ್ದಾರೆ. 'ಕಾವಿ ಎನ್ನುವುದು ಅವರು ಕೊಟ್ಟ ಭಿಕ್ಷೆಯಲ್ಲ, ಇದು ಯಾರಪ್ಪನ ಆಸ್ತಿಯಲ್ಲ. ಹಾಗಾಗಿ ಯಾರದ್ದೋ ಆಸ್ತಿ ಕಬಳಿಸಲು ನಾನು ಬಿಡುವುದಿಲ್ಲ' ಎಂದು ಆಂದೋಲಾದ ಸಿದ್ದಲಿಂಗ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ದಂಡಗುಂಡ ಬಸವಣ್ಣ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‌ನ ಮೊದಲ ಸ್ಥಾನ ದಲ್ಲಿದ್ದ ಶ್ರೀಗಳನ್ನು ಕುತಂತ್ರದಿಂದ ಹೊರದಬ್ಬಿದ್ದಾರೆ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ಸಂಸ್ಥೆಗಳ ಹೆಸರಿನಲ್ಲಿ ಅನಧಿಕೃತವಾಗಿ ಭಕ್ತಾದಿಗಳಿಂದ ಹಣ ವಸೂಲಿ ಮಾಡುತ್ತಿರುವುದು ನಿಲ್ಲಿಸಲು ಆದೇಶ ಹೊರಡಿಸಿದ್ದರೂ ಜಿಲ್ಲಾಧಿಕಾರಿಗಳು ಯಾಕೆ ಸುಮ್ಮನೆ ಕುಳಿತಿದ್ದಾರೆ, ಹೈಕೋರ್ಟ್ ಆದೇಶವನ್ನು ಪಾಲಿಸದೆ ಕಣ್ಮುಚ್ಚಿ ಕುಳಿತಿದ್ದು ಸಾಕು. ಈಗ ಜಿಲ್ಲಾಧಿಕಾರಿಗಳು ಯಾರ ಒತ್ತಡಕ್ಕೆ ಮಣಿಯದೆ ಕಾನೂನು ಪ್ರವೃತ್ತರಾಗಬೇಕೆಂದು ಮನವಿ ಮಾಡಿದರು.

ಟ್ರಸ್ಟ್‌ನ್ ವೈಟ್ ಕಾಲರ್ ಲೀಡರ್ ಅವರು ಟ್ರಸ್ಟ್‌ನ ಲೆಕ್ಕಪತ್ರವನ್ನು ಪ್ರತಿವರ್ಷ ಅಡಿಟ್ ಮಾಡುತ್ತೇವೆಂದು ಹೇಳಿದ್ದಾರೆ, ಅದು ತಾವು ಮತ್ತು ಇತರರು ಹೇಳಿದಂತೆ ಅಡಿಟ್ ಮಾಡುವ ಸಿಎ(ಚಾರ್ಟೆಡ್ ಅಕೌಂಟೆಂಟ್) ಅವರಿಂದ ಅಡಿಟ್ ಮಾಡಿಸಿದ್ದಾರೆ, ಇದು ಸಂಪೂರ್ಣ ಅನಧೀಕೃತವಾಗಿದೆ. ಜಿಎ(ಮಹಾಲೇಖ ಪಾಲಕರಿಂದ) ಅವರಿಂದ ಅಡಿಟ್ ಮಾಡಿಸಲಿ ಎಂದು ಸವಾಲು ಎಸೆದಿದ್ದಾರೆ.

ಟ್ರಸ್ಟಿನಲ್ಲಿರುವ ವೈಟ್‌ ಕಾಲರ್‌ಗಳು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪತ್ರಿಕಾಗೋಷ್ಠಿ ಮಾಡಿದರೆ ಭಾರೀ ಮಾತನಾಡಿದ್ದೀರಿ ಸ್ವಾಮಿಜಿ ಎಂದು ಹೇಳುವರು, ಇದೀಗ ಅದೇ ಅನಧಿಕೃತವಾಗಿರುವ ಟ್ರಸ್ಟ್ ಬಗ್ಗೆ ಸವಾಲು ಎತ್ತಿದರೆ ಕಾವಿ ಬಿಟ್ಟು ಖಾದಿ ಹಾಕಿ ಅಂತೀರಾ? ಗ್ರಾಮದ ಜನರಿಗೆ ಪಾಳೇಗಾರಿಕೆಯಿಂದ ಹೆದರಿಸಿ ಸುಮ್ಮನಾಗಿಸಿದಂತೆ ನನ್ನನ್ನು ಸುಮ್ಮನಾಗಿಸಲು ಸಾಧ್ಯವಿಲ್ಲ, ಟ್ರಸ್ಟ್ ಅನಧಿಕೃತವೇ ಆಗಿದೆ ಎಂದು ಸಾಕಷ್ಟು ದಾಖಲೆಗಳು ಇವೆ ಎಂದರು.

ಯಾವುದೇ ಸಂದರ್ಭದಲ್ಲಿ ಮಾತನಾಡುವಾಗ ಸ್ವಾಮಿಗಳ ಬಗ್ಗೆ ಗೌರವದಿಂದ ಮಾತನಾಡುವುದನ್ನು ಕಲಿಯಬೇಕು ಏಕವಚನದಲ್ಲಿ ಮಾತನಾಡಿದರೆ ಮುಂದಿನ ಪರಿಣಾಮ ನೆಟ್ಟಗಿರಲ್ಲ, ಇದು ಜನರೇ ತೋರಿಸುತ್ತಾರೆಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಗನಬಸವ ಶಿವಾಚಾರ್ಯರು, ರೇವಣಸಿದ್ದ ಶಿವಾಚಾರ್ಯರು, ಚನ್ನವೀರ ಮಹಾಸ್ವಾಮಿ, ಗುರುಮುತ್ಯ ನದಿ ಸಿನ್ನೂರ, ಗುರುಶಾಂತ, ಸಂತೋಷ, ರಾಕೇಶ ಜಮಾದಾರ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X