ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಭಯೋತ್ಪಾದನಾ ವಿರೋಧಿ ದಿನದ ನಿಮಿತ್ತ ಪ್ರಮಾಣ ವಚನ ಸ್ವೀಕಾರ

ಕಲಬುರಗಿ: ನಗರದ ಹೊರವಲಯದಲ್ಲಿ ಇರುವ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ಭಯೋತ್ಪಾದನಾ ದಿನದ ಪ್ರಯುಕ್ತ ಮುಖ್ಯ ಅಧೀಕ್ಷಕರಾದ ಮುಖ್ಯಸ್ಥರಾದ ಡಾ.ಅನಿತಾ ಆರ್. ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ/ ಸಿಬ್ಬಂದಿಗಳೊಂದಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನವನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಅನಿತಾ ಆರ್. ಮಾತನಾಡಿದರು.
ಈ ಸಂದರ್ಭದಲ್ಲಿ ಕಚೇರಿಯ ಸಹಾಯಕ ಅಧೀಕ್ಷಕರಾದ ಚನ್ನಪ್ಪ, ಸಂಸ್ಥೆಯ ವೈದ್ಯಾಧಿಕಾರಿ ಡಾ.ರವೀಂದ್ರ ಬನ್ನೇರ್, ಜೈಲರ್ ಸಾಗರ ಪಾಟೀಲ್, ಶ್ರೀಮಂತಗೌಡ ಪಾಟೀಲ್ ಹಾಗೂ ಅಧೀಕ್ಷಕರಾದ ಗುರುಶೇಶ್ವರ ಶಾಸ್ತ್ರಿ, ಸಂಸ್ಥೆಯ ಶಿಕ್ಷಕ ನಾಗರಾಜ ಮುಲಗೆ ಸೇರಿ ಅಧಿಕಾರಿ/ ಸಿಬ್ಬಂದಿಗಳು ಭಾಗವಹಿಸಿದರು.
Next Story





