Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಭೀಮಾ ನದಿಗೆ 2.50 ಲಕ್ಷ‌...

ಕಲಬುರಗಿ | ಭೀಮಾ ನದಿಗೆ 2.50 ಲಕ್ಷ‌ ಕ್ಯೂಸೆಕ್ಸ್ ನೀರು ಬಿಡುಗಡೆ: ನದಿಪಾತ್ರದ ಜನರು ಎಚ್ಚರಿಕೆಯಂದಿರುವಂತೆ ಡಿ.ಸಿ ಬಿ.ಫೌಝಿಯಾ ತರನ್ನುಮ್ ಮನವಿ

ವಾರ್ತಾಭಾರತಿವಾರ್ತಾಭಾರತಿ24 Sept 2025 10:40 PM IST
share
ಕಲಬುರಗಿ | ಭೀಮಾ ನದಿಗೆ 2.50 ಲಕ್ಷ‌ ಕ್ಯೂಸೆಕ್ಸ್ ನೀರು ಬಿಡುಗಡೆ: ನದಿಪಾತ್ರದ ಜನರು ಎಚ್ಚರಿಕೆಯಂದಿರುವಂತೆ ಡಿ.ಸಿ ಬಿ.ಫೌಝಿಯಾ ತರನ್ನುಮ್ ಮನವಿ

ಕಲಬುರಗಿ : ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಒಟ್ಟಾರೆ 2.50 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಗುರುವಾರ ಸಂಜೆ ಅಫಜಲಪುರ ತಾಲ್ಲೂಕಿನ ಸೊನ್ನಿ ಬ್ಯಾರೇಜಿಗೆ ತಲುಪಿದ ನೀರು ಒಳ ಹರಿವು ಹೆಚ್ಚಿಸಲಿದೆ. ನದಿ ದಂಡೆಯ ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್‌ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ಶನಿವಾರ ಮತ್ತು ರವಿವಾರಗಳಲ್ಲಿ ಸತತ ಮಳೆಯಾದರೆ, ಭೀಮಾ ನದಿಗೆ ನೆರೆಯ ರಾಜ್ಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಮಾನವ ಮತ್ತು ಪ್ರಾಣಿ ಹಾನಿ ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ ಎಂದು ಹೇಳಿದರು.

2025 ಜನವರಿಯಿಂದ ಸೆಪ್ಟೆಂಬರ್ ವರೆಗೆ ನಿಯಮಿತವಾಗಿ 609 ಮಿ.ಮೀ ಮಳೆ ಬರಬೇಕಾಗಿತ್ತು. ಆದರೇ, ಶೇ.48 ಹೆಚ್ಚಾಗಿ 900 ಮಿ.ಮೀ ಮಳೆ ದಾಖಲಾಗಿದೆ. ಆಗಸ್ಟ್‌ನಲ್ಲಿ ವಾಡಿಕೆಯ ಮಳೆಯಿಗಿಂತ ಶೇ.69 ಹೆಚ್ಚಿದೆ. ಸೆಪ್ಟೆಂಬರ್‌ನಲ್ಲಿ ಇದುವರೆಗೆ 241 ಮಿ.ಮೀ ಮಳೆ ದಾಖಲಾಗಿದೆ, ಇದು ಸಹ ಶೇ.43 ಹೆಚ್ಚಾಗಿದೆ. ಈ ಮಳೆಯೇ ಬೆಳೆ ಹಾನಿಗೆ ಪ್ರಮುಖ ಕಾರಣವಾಗಿದೆ ಎಂದರು.

ಸತತ ಮಳೆಯಿಂದ ಆಗಸ್ಟ್‌ನಲ್ಲಿ 1.05 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ವರದಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಸೆಪ್ಟೆಂಬರ್‌ನಲ್ಲಿ ನಡೆಯುತ್ತಿರುವ ಮಳೆಯ ಕಾರಣ ಸಮೀಕ್ಷೆ ತಡವಾಗಿದೆ. 7 ತಾಲ್ಲೂಕಿನ ಸಮೀಕ್ಷೆ ಪೂರ್ಣಗೊಂಡಿದ್ದು, ಉಳಿದ 4 ತಾಲ್ಲೂಕಿನ ವರದಿ ಕೂಡ ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು. 2025ರ ಮುಂಗಾರು ಹಂಗಾಮಿನಲ್ಲಿ 3.01 ಲಕ್ಷ ರೈತರು ಬೆಳೆ ವಿಮೆ ನೋಂದಣಿ ಮಾಡಿದ್ದು, 1.78 ಲಕ್ಷ ಪ್ರಕರಣಗಳು ಸ್ಥಳೀಯ ವಿಕೋಪದಡಿ ದಾಖಲಾಗಿದೆ. ಸರ್ಕಾರ ಶೀಘ್ರದಲ್ಲೇ ಪರಿಹಾರ ನೀಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದರು.

ಪ್ರವಾಹದಿಂದ ತೊಂದರೆ ಉಂಟಾಗುವ 153 ಗ್ರಾಮಗಳಲ್ಲಿ 90 ಸ್ಥಳಗಳಲ್ಲಿ ಕಾಳಜಿ ಕೇಂದ್ರ ತೆರೆಯಲು ಗುರುತಿಸಲಾಗಿದೆ. ಈಗಾಗಲೆ 7 ಕಾಳಜಿ ಕೇಂದ್ರ ತೆರೆಯಲಾಗಿದೆ. ಪ್ರಾಣಿಗಳಿಗಾಗಿ ತಾತ್ಕಾಲಿಕ 40 ಗೋಶಾಲೆ ತೆರೆಯಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

2025–26ನೇ ಸಾಲಿನಲ್ಲಿ ಸಿಡಿಲು, ಮನೆ ಕುಸಿತ ಮತ್ತು ನೀರಿನಲ್ಲಿ ಕೊಚ್ಚಿಹೋದ ಪ್ರಕರಣಗಳಲ್ಲಿ 8 ಜನ ಮೃತರಾಗಿದ್ದು, ತಲಾ 5 ಲಕ್ಷ ರೂ. ಮತ್ತು ಒಟ್ಟು 40 ಲಕ್ಷ ರೂ. ಪರಿಹಾರ ಸಂತ್ರಸ್ತರಿಗೆ ನೀಡಲಾಗಿದೆ. 103 ಪ್ರಾಣಿಗಳ ಹಾನಿಗೆ 18 ಲಕ್ಷ ರೂ., 753 ಭಾಗಶಃ ಮನೆ ಹಾನಿಗೆ 53.67 ಲಕ್ಷ ರೂ., ಮನೆಗಳಿಗೆ ನೀರು ನುಗ್ಗಿ ಮನೆ ದೈನಂದಿನ ವಸ್ತು ಹಾನಿಗೆ 84.60 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೆಲಸಕ್ಕೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದರು.

ಪ್ರವಾಹ ಪರಿಸ್ಥಿತಿಯಲ್ಲಿ ನದಿಯಲ್ಲಿ ಈಜುವುದನ್ನು, ಸೆಲ್ಫಿ ತೆಗೆಯುವುದನ್ನು, ನದಿ ದಂಡೆಗೆ ಬಟ್ಟೆ ಒಗೆಯುವುದನ್ನು, ಕುರಿ-ಆಕಲು ಮೇಯಿಸಲು ಅಥವಾ ಮೀನು ಹಿಡಿಯಲು ಹೋಗುವುದನ್ನು ತಪ್ಪಿಸಿ. ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸಬೇಡಿ. ಪ್ರವಾಸಿಗರು ಪ್ರವಾಸ ಮುಂದೂಡಿದರೆ ಉತ್ತಮ ಎಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X