ಕಲಬುರಗಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನಾಪತ್ತೆ

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಸರಡಗಿ ಬ್ರಿಡ್ಜ್ನಲ್ಲಿ ನಡೆದಿದೆ.
ಮಹಾದೇವ್ (20) ನದಿ ಪಾಲಾದ ಯುವಕ. ಎಂದು ತಿಳಿದುಬಂದಿದೆ. ಕಲಬುರಗಿಯಿಂದ ಐದು ಜನ ಸ್ನೇಹಿತರು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯ ಹರಿವಿಗೆ ಸಿಲುಕಿ ನಾಪತ್ತೆಯಾಗಿದ್ದಾನೆ.
ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರೆದಿದೆ. ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Next Story





