Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ʼಲವ್ ಜಿಹಾದ್ʼ ಆರೋಪ ಸುಳ್ಳು...

ಕಲಬುರಗಿ | ʼಲವ್ ಜಿಹಾದ್ʼ ಆರೋಪ ಸುಳ್ಳು ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಯುವತಿ

ವಾರ್ತಾಭಾರತಿವಾರ್ತಾಭಾರತಿ7 Aug 2025 10:36 PM IST
share
ಕಲಬುರಗಿ | ʼಲವ್ ಜಿಹಾದ್ʼ ಆರೋಪ ಸುಳ್ಳು ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಯುವತಿ
ʼʼನನಗೇನಾದರೂ ತೊಂದರೆ ಆದಲ್ಲಿ ಹಿಂದುತ್ವ ಸಂಘಟನೆಯವರೇ ಕಾರಣʼʼ

ಕಲಬುರಗಿ : ಇಲ್ಲಿನ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಫಜಲಪುರ ಮೂಲದ ಯುವತಿಯೋರ್ವಳು ಕಾಣೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದ್ದು, ಸ್ವತಃ ಯುವತಿಯೇ ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಯುವತಿ ಕಾಣೆಯಾದ ಪ್ರಕರಣಕ್ಕೆ ಆಕೆಯ ಪಾಲಕರು ಹಾಗೂ ಹಿಂದುತ್ವ ಸಂಘಟನೆಯವರು ಕೆಲ ಮಾಧ್ಯಮದವರ ಮುಂದೆ 'ಲವ್ ಜಿಹಾದ್' ಎಂದು ಆರೋಪಿಸಿದ್ದರು. ಈ ಕುರಿತು ಸುದ್ದಿ ತಿಳಿದ ಕಾಣೆಯಾದ ಯುವತಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ, ಸ್ಪಷ್ಟನೆ ನೀಡಿದ್ದಾರೆ.

'ಲವ್ ಜಿಹಾದ್' ಎನ್ನುತ್ತಿರುವ ಆರೋಪ ಸುಳ್ಳು, ʼಹಿಂದುತ್ವ ಸಂಘಟನೆಯವರೇ ನಮ್ಮ ಕುಟುಂಬದವರ ತಲೆ ಕೆಡುಸುತ್ತಿದ್ದಾರೆʼ ಎನ್ನುವ ಮೂಲಕ ಯುವತಿಯು ಆರೋಪವನ್ನು ನಿರಾಕರಣೆ ಮಾಡಿದ್ದಾರೆ.

►ವಿಡಿಯೋದಲ್ಲಿ ಯುವತಿ ಹೇಳಿದ್ದೇನು?:

ʼನಾನು ಕಾಣೆಯಾಗಿಲ್ಲ, ನಾನು ಇಷ್ಟಪಟ್ಟಂತೆ ನನ್ನ ಸ್ವ ಇಚ್ಛೆಯಿಂದ ಪ್ರೀತಿಸಿದ ಹುಡುಗನ ಜೊತೆಗೆ ಮದುವೆಯಾಗಿದ್ದೇನೆ. ನಾನು ಕಾಣೆಯಾಗಿದ್ದೇನೆ ಎಂದು ನನ್ನ ಹುಡುಗನ ಕುಟುಂಬಕ್ಕೆ, ಆತನ ಸ್ನೇಹಿತರಿಗೆ ತೊಂದರೆ ಕೊಡುತ್ತಿದ್ದಾರೆ. ಇದರಲ್ಲಿ ಅವರದ್ದೇನೂ ಕೈವಾಡವಿಲ್ಲ, ಅವರಿಗೆ ತೊಂದರೆ ಕೊಡಬೇಡಿ. ನಾವಿಬ್ಬರೂ ಪ್ರೀತಿಸಿದ ವಿಷಯ ನಮ್ಮ ಮನೆಯವರಿಗೆ ತಿಳಿದಿತ್ತು. ಹಾಗಾಗಿ ನನ್ನನ್ನು ಕಾಲೇಜಿಗೆ ಹೋಗದಂತೆ ತಡೆದಿದ್ದರು. ಅದಾದ ಬಳಿಕ ನನ್ನ ಮನೆಯವರು ನನಗೆ ಪ್ರತಿದಿನ ಹಿಂಸೆ ನೀಡುತ್ತಿದ್ದರು. ಅದನ್ನು ತಡೆಯಲಾಗದೇ ಪ್ರೀತಿಸಿದ ಹುಡುಗನ ಜೊತೆಗೆ ಇರಬೇಕೆಂಬ ಕಾರಣಕ್ಕಾಗಿ ಮದುವೆಯಾಗಿದ್ದೇನೆʼ ಎಂದು ಹೇಳಿದ್ದಾರೆ.

ʼಹಿಂದುತ್ವ ಸಂಘಟನೆಯವರು ಲವ್ ಜಿಹಾದ್ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಮ್ಮ ಕುಟುಂಬದವರ ತಲೆ ಕೆಡಿಸುತ್ತಿದ್ದಾರೆ. ನಾವು ಚೆನ್ನಾಗಿದ್ದೇವೆ. ಒಂದು ವೇಳೆ ನಮಗೇನಾದರೂ ತೊಂದರೆ ಆದರೆ, ಹಿಂದುತ್ವ ಸಂಘಟನೆಯವರೇ ಕಾರಣʼ ಎಂದು ಯುವತಿಯು ವೀಡಿಯೊದಲ್ಲಿ ಹೇಳಿದ್ದಾರೆ.

ಕಾಣೆಯಾದ ಯುವತಿ ಮತ್ತು ಆಕೆಯ ಜೊತೆಗಿರುವ ಯುವಕನ ಪತ್ತೆಗೆ ಹುಡುಕಾಟ ನಡೆಯುತ್ತಿದೆ, ಅವರನ್ನು ಕರೆತಂದ ಬಳಿಕ ಇಬ್ಬರನ್ನು ವಿಚಾರಣೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X