Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಕ್ಷರ ಬೆಳದಿಂಗಳು ಕೃತಿ...

ಕಲಬುರಗಿ | ಅಕ್ಷರ ಬೆಳದಿಂಗಳು ಕೃತಿ ಜನಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ24 Aug 2025 9:57 PM IST
share
ಕಲಬುರಗಿ | ಅಕ್ಷರ ಬೆಳದಿಂಗಳು ಕೃತಿ ಜನಾರ್ಪಣೆ
ಕಲಿಕೆ, ಬಳಕೆಯಿಂದ ಕನ್ನಡ ಭಾಷೆ ವೃದ್ಧಿ: ಎ.ಕೆ.ರಾಮೇಶ್ವರ

ಕಲಬುರಗಿ : ನಮ್ಮ ದೈನಂದಿನ ಜೀವನದಲ್ಲಿ ಮಾತೃ ಭಾಷೆಯ ಕಲಿಕೆ ಮತ್ತು ಬಳಕೆಯಿಂದ ಅದರ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಅವರು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಹಮ್ಮಿಕೊಂಡ ಸಮಾರಂಭದಲ್ಲಿ ಶಿಕ್ಷಕ-ಲೇಖಕ ಗುಂಡಪ್ಪ ವಾಯ್ ಗೊಟಕರ ಅವರ ಅಕ್ಷರದ ಬೆಳದಿಂಗಳು ಕವನ ಸಂಕಲನವನ್ನು ಜನಾರ್ಪಣೆ ಮಾಡಿ ಮಾತನಾಡಿದ ಅವರು, ಭಾಷೆ ಸಂವಹನ ಮಾಧ್ಯಮ. ಅದರಿಂದ ನಿಜವಾದ ಜ್ಞಾನ ಹೊಂದಬಹುದು. ಮಕ್ಕಳಲ್ಲಿ ಕನ್ನಡ ನಾಡು ನುಡಿ ಅಭಿಮಾನ ಬೆಳೆಸಬೇಕು. ಇಂಗ್ಲೀಷ್ ವ್ಯಾಮೋಹ ಬಿಟ್ಟು ಕನ್ನಡ ಮೋಹ, ಪ್ರೀತಿ ತೋರಿಸಬೇಕು. ಆಗ ಮಾತ್ರ ಸಾಹಿತ್ಯ ಸಂಸ್ಕೃತಿ ಹೆಚ್ಚಿಸಬಹುದಾಗಿದೆ. ಪುಸ್ತಕ ಖರೀದಿಸಿ ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಪ್ರಸ್ತುತ ಸಮಾಜದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾವ್ಯ ರಚನೆಯಾಗಬೇಕಿದೆ. ನಮ್ಮ ಹಿರಿಯರು ನಮಗಾಗಿ ಬಳುವಳಿಯಾಗಿ ಬಿಟ್ಟು ಹೋದ ಕಲೆ ಹಾಗೂ ಸಂಸ್ಕೃತಿಯ ಬಗ್ಗೆ ಇಂದಿನ ಹೊಸ ಜನಾಂಗಕ್ಕೆ ಮನ ಮುಟ್ಟುವಂತೆ ತಿಳಿಸಬೇಕಿದೆ ಎಂದ ಅವರು, ಶಿಕ್ಷಣದೊಂದಿಗೆ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಶಾಲೆ ಕಡೆ ಪರಿಷತ್ತಿನ ನಡೆ ಎನ್ನುವ ವಿಶೇಷ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಹೇಳಿದರು.

ಕೃತಿ ಲೇಖಕ ಗುಂಡಪ್ಪ ಗೊಟಕರ, ಕೃತಿ ಪರಿಚಯಿಸಿದ ಸಾಹಿತಿ ಡಾ ರಾಜಶೇಖರ ಮಾಂಗ್ ಅವರು ಮಾತನಾಡಿದರು.

ಎ.ಕೆ.ಆರ್.ದೇವಿ ಪದವಿಪೂರ್ವ ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ, ಅಫಜಲಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಯುವರಾಜ ಗಾಡಿ, ಶ್ರೀ ಸಿದ್ಧರಾಮೇಶ್ವರ ಸರಕಾರಿ-ಅರೆ ಸರಕಾರಿ ಮತ್ತು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ. ಶರಣಪ್ಪ ಗುಂಡಗುರ್ತಿ, ಜಿಲ್ಲಾ ಕಸಾಪ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ, ಸಹ ಕಾರ್ಯದರ್ಶಿ ರಾಜೇಂದ್ರ ಮಾಡಬೂಳ, ಶಿಕ್ಷಕ ಪರಮಾನಂದ ಸರಸಂಬಿ ವೇದಿಕೆ ಮೇಲಿದ್ದರು. ವೈಶಾಕಿ ಶಾಬಾದಕರ ಭರತನಾಟ್ಯ ನೃತ್ಯ ನಡೆಸಿಕೊಟ್ಟರು.

ಪ್ರಮುಖರಾದ ಡಿ.ಎಂ.ನದಾಫ್, ಪ್ರಭವ ಪಟ್ಟಣಕರ್, ಅನುಪಮಾ ಅಪಗುಂಡೆ, ಬಾಹುಬಲಿ ಮಾಲಗತ್ತಿ, ಮಲ್ಲಿಕಾರ್ಜುನ ರೋಣದ್, ಶ್ರೀಶೈಲ ಜಾಧವ, ಡಿ.ಪಿ. ಸಜ್ಜನ್, ಅಮರಯ್ಯ ಕುಮಸಗಿ, ಸಿದ್ಧಾರ್ಥ ಬಸರಿಗಿಡ, ನಾಗೇಶ ಕೊಳ್ಳಿ, ಡಾ.ರೆಹಮಾನ್ ಪಟೇಲ್, ದಿನೇಶ ಮದಕರಿ, ಸೋಮಶೇಖರಯ್ಯ ಹೊಸಮಠ, ಬಸಯ್ಯಾ ಸ್ವಾಮಿ, ಚಂದ್ರಕಲಾ ಪಾಟೀಲ, ರೂಪಾ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X