Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅಂತರ್ಜಾತಿ ವಿವಾಹ...

Kalaburagi | ಅಂತರ್ಜಾತಿ ವಿವಾಹ ಯೋಜನೆಯಲ್ಲಿ ಅಕ್ರಮ ಆರೋಪ; ಸಮಗ್ರ ತನಿಖೆಗೆ ಕರ್ನಾಟಕ ರಾಷ್ಟ್ರ ಸಮಿತಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 Sept 2026 6:34 PM IST
share
Kalaburagi | ಅಂತರ್ಜಾತಿ ವಿವಾಹ ಯೋಜನೆಯಲ್ಲಿ ಅಕ್ರಮ ಆರೋಪ; ಸಮಗ್ರ ತನಿಖೆಗೆ ಕರ್ನಾಟಕ ರಾಷ್ಟ್ರ ಸಮಿತಿ ಒತ್ತಾಯ

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಯೋಜನೆಯಲ್ಲಿ ನಿಯಮ ಉಲ್ಲಂಘಿಸಿ ಹಣ ಬಿಡುಗಡೆ ಮಾಡಿರುವುದು ಹಾಗೂ ಫಿಕ್ಸೆಡ್ ಡಿಪಾಸಿಟ್‌ (ಎಫ್‌ಡಿ)ಗಳನ್ನು ಅವಧಿಗೂ ಮುನ್ನ ಮುರಿದಿರುವ ಮೂಲಕ ಕಲಬುರಗಿ ಜಿಲ್ಲೆಯಲ್ಲಿ ಸುಮಾರು 21 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ಸಚಿನ್ ಚವ್ಹಾಣ, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಂಚೋಳಿ ತಾಲೂಕಿನಲ್ಲೇ ಸುಮಾರು 6 ಕೋಟಿ ರೂ. ಮೊತ್ತದ ಅಕ್ರಮ ನಡೆದಿರುವ ಶಂಕೆಯಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ದೂರು ಸಲ್ಲಿಸಿ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಯೋಜನೆಯ ನಿಯಮಗಳ ಪ್ರಕಾರ ಅರ್ಹ ಪುರುಷ ಅರ್ಜಿದಾರರಿಗೆ 2.50 ಲಕ್ಷ ರೂ. ಹಾಗೂ ಮಹಿಳಾ ಅರ್ಜಿದಾರರಿಗೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಹಣದ ಒಂದು ಭಾಗವನ್ನು ದಂಪತಿಗಳ ಜಂಟಿ ಬ್ಯಾಂಕ್ ಖಾತೆಗೆ ನೆಫ್ಟ್ ಮೂಲಕ ಜಮೆ ಮಾಡಿ, ಉಳಿದ ಮೊತ್ತವನ್ನು ಮೂರು ವರ್ಷಗಳ ಅವಧಿಗೆ ಫಿಕ್ಸೆಡ್ ಡಿಪಾಸಿಟ್‌ನಲ್ಲಿ ಇರಿಸಬೇಕು. ನಿಗದಿತ ಅವಧಿ ಪೂರ್ಣಗೊಂಡ ನಂತರ ಅಗತ್ಯ ಪರಿಶೀಲನೆ ನಡೆಸಿ ಎಫ್‌ಡಿ ಮುರಿಯಬೇಕೆಂಬ ನಿಯಮವಿದೆ ಎಂದು ವಿವರಿಸಿದರು.

ಆದರೆ, ಚಿಂಚೋಳಿ ತಾಲೂಕಿನಲ್ಲಿ ಇದುವರೆಗೆ 169 ಅರ್ಜಿಗಳಿಗೆ ಹಣ ಬಿಡುಗಡೆ ಮಾಡಲಾಗಿದ್ದು, ತಲಾ 2.50 ಲಕ್ಷದ ರೂ. ಲೆಕ್ಕದಲ್ಲಿ ಸುಮಾರು 4.22 ಕೋಟಿ ರೂ. ಮೊತ್ತವಾಗುತ್ತದೆ. ಈ ಪ್ರಕರಣಗಳಲ್ಲಿ ಎಫ್‌ಡಿ ತೆರೆದ ಕೆಲವೇ ದಿನಗಳಲ್ಲಿ ಅದನ್ನು ಮುರಿದು ಹಣ ಪಡೆದಿರುವ ಆರೋಪಗಳಿವೆ. ಈ ಬಗ್ಗೆ ತನಿಖೆ ನಡೆಸಿದರೆ ಅಕ್ರಮದ ನಿಜಾಂಶ ಹೊರಬರಲಿದೆ ಎಂದು ಆರೋಪಿಸಿದರು.

ಕಲಬುರಗಿ ಜಿಲ್ಲಾದ್ಯಂತ 878 ಅರ್ಜಿಗಳಿಗೆ ಮೊದಲ ಮತ್ತು ಎರಡನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಒಟ್ಟು ಸುಮಾರು 21.95 ಕೋಟಿ ರೂ. ಮೊತ್ತ ನಿಯಮಾನುಸಾರ ಮೂರು ವರ್ಷಗಳ ಕಾಲ ಎಫ್‌ಡಿಯಲ್ಲಿ ಇರಿಸದೆ ದುರುಪಯೋಗಪಡಿಸಿಕೊಂಡಿರುವ ಶಂಕೆ ಇದೆ ಎಂದು ಹೇಳಿದರು.

ಇದೇ ರೀತಿಯ ಅಕ್ರಮ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ನಡೆದಿರುವ ಸಾಧ್ಯತೆಯಿದ್ದು, ಸುಮಾರು 40 ಸಾವಿರ ಅರ್ಜಿಗಳ ಆಧಾರದ ಮೇಲೆ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿರಬಹುದೆಂಬ ಅನುಮಾನವಿದೆ. ಹೀಗಾಗಿ ರಾಜ್ಯಮಟ್ಟದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಯೋಜನೆಯಡಿ ಸಲ್ಲಿಸಿರುವ ಕೆಲವು ಅರ್ಜಿಗಳಲ್ಲಿ ಡಬಲ್ ಅಥವಾ ಡುಪ್ಲಿಕೇಟ್ ಅರ್ಜಿಗಳು, ನಕಲಿ ದಂಪತಿಗಳು, ಸುಳ್ಳು ವಿವಾಹ ನೋಂದಣಿ ದಾಖಲೆಗಳು, ನಕಲಿ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳು ಮತ್ತು ಹೆಸರು ಬದಲಾವಣೆಗೆ ನಕಲಿ ಆಧಾರ್ ದಾಖಲೆಗಳನ್ನು ಬಳಸಿರುವ ಆರೋಪಗಳೂ ಕೇಳಿಬಂದಿವೆ ಎಂದು ಸಚಿನ್ ಚವ್ಹಾಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮೊಶಿನ್ ಪಟೇಲ್, ಸೀತಾರಾಮ್ ಪವಾರ್, ಪರಮೇಶ ಕವಲಗಿ, ರಜಾಕ್ ಮನ್ನಾರ್, ಫಿನಿಕ್ಸ್‌ ಶರಣಪ್ಪ, ಶಿವರಾಜ್ ದೊಣ್ಣೂರ್ ಹಾಗೂ ಶಿವಪುತ್ರ ಗರೂರ್ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X