Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಾಳಗಿ ತಾಪಂನಲ್ಲಿ 6.50...

Kalaburagi | ಕಾಳಗಿ ತಾಪಂನಲ್ಲಿ 6.50 ಕೋಟಿ ರೂ. ಕಾಮಗಾರಿಗಳಲ್ಲಿ ಅಕ್ರಮ ಆರೋಪ : ತನಿಖೆಗೆ ಕೆಆರ್‌ಎಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 July 2026 5:06 PM IST
share
Kalaburagi | ಕಾಳಗಿ ತಾಪಂನಲ್ಲಿ 6.50 ಕೋಟಿ ರೂ. ಕಾಮಗಾರಿಗಳಲ್ಲಿ ಅಕ್ರಮ ಆರೋಪ : ತನಿಖೆಗೆ ಕೆಆರ್‌ಎಸ್ ಆಗ್ರಹ

ಕಲಬುರಗಿ, ಜು.10: ಕಾಳಗಿ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ವಿವಿಧ ಇಲಾಖೆಗಳಡಿ ಕೈಗೊಳ್ಳಲಾದ ಸುಮಾರು 6.50 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಲ್ಲಿ ವ್ಯಾಪಕ ಅಕ್ರಮ ಹಾಗೂ ಬೋಗಸ್ ಕಾಮಗಾರಿಗಳು ನಡೆದಿವೆ ಎಂದು ಆರೋಪಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಈ ಸಂಬಂಧ ಕಾಳಗಿ ತಹಸೀಲ್ದಾರರ ಮೂಲಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದ ಕೆಆರ್‌ಎಸ್ ಮುಖಂಡರು, 2022-23ರಿಂದ 2025-26ರವರೆಗೆ ತಾಲೂಕು ಪಂಚಾಯತ್‌ನ ಅನಿರ್ಬಂಧಿತ ಕ್ರಿಯಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ರಸ್ತೆ ಅಭಿವೃದ್ಧಿ ಹಾಗೂ ಅಂಗವಿಕಲರ ಕಲ್ಯಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ. ಆದರೆ ಬಹುತೇಕ ಕಾಮಗಾರಿಗಳು ಕೇವಲ ದಾಖಲೆಗಳಲ್ಲಿ ಮಾತ್ರ ಪೂರ್ಣಗೊಂಡಿದ್ದು, ಸ್ಥಳದಲ್ಲಿ ಕಾಮಗಾರಿ ನಡೆದಿಲ್ಲ ಎಂದು ಆರೋಪಿಸಿದರು.

2022-23ರಲ್ಲಿ 1.51 ಕೋಟಿ ರೂ., 2023-24ರಲ್ಲಿ 2.09 ಕೋಟಿ ರೂ., 2024-25ರಲ್ಲಿ 1 ಕೋಟಿ ರೂ. ಹಾಗೂ 2025-26ರಲ್ಲಿ 2.23 ಕೋಟಿ ರೂ. ಸೇರಿದಂತೆ ಒಟ್ಟು 6.50 ಕೋಟಿ ರೂ. ವೆಚ್ಚದ ಕಾಮಗಾರಿಗಳ ದಾಖಲೆಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದು, ಸ್ಥಳ ಪರಿಶೀಲನೆ ಹಾಗೂ ಜಿಪಿಎಸ್ ಛಾಯಾಚಿತ್ರಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಕಾಮಗಾರಿಗಳ ಹಣ ಬಿಡುಗಡೆಗೆ ಕಡ್ಡಾಯವಾಗಿರುವ ಅಳತೆ ಪುಸ್ತಕ (ಎಂಬಿ), ಇಂಜಿನಿಯರ್ ದೃಢೀಕರಣ, ಆರಂಭ, ಪ್ರಗತಿ ಹಾಗೂ ಪೂರ್ಣಗೊಂಡಿರುವ ಜಿಪಿಎಸ್ ಛಾಯಾಚಿತ್ರಗಳು, ತೃತೀಯ ಪಕ್ಷದ ಪರಿಶೀಲನಾ ವರದಿ, ಗುಣಮಟ್ಟ ಪರೀಕ್ಷಾ ವರದಿ, ಕಾರ್ಮಿಕರ ದಾಖಲೆಗಳು ಹಾಗೂ ಜಿಎಸ್‌ಟಿ ಬಿಲ್‌ಗಳು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸದೆ ಸುಳ್ಳು ದಾಖಲೆಗಳ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದರು.

ಶಾಲೆಗಳು, ಅಂಗನವಾಡಿಗಳು, ಆರೋಗ್ಯ ಕೇಂದ್ರಗಳು, ಉಪ ಆರೋಗ್ಯ ಕೇಂದ್ರಗಳು, ರಸ್ತೆಗಳು, ಶೌಚಾಲಯಗಳು ಹಾಗೂ ಅಂಗವಿಕಲರಿಗೆ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ. ಸಂಬಂಧಿತ ಇಲಾಖೆಗಳ ದೃಢೀಕರಣವಿಲ್ಲದೆ ಅಧಿಕಾರಿಗಳು ಬಿಲ್ ಪಾವತಿಸಿದ್ದಾರೆ ಎಂದು ಕೆಆರ್‌ಎಸ್ ದೂರಿದೆ.

ಈ ಅಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜೂನಿಯರ್ ಇಂಜಿನಿಯರ್‌ಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪಕ್ಷ, ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.

ಮುಂದಿನ 10 ದಿನಗಳೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕಾಳಗಿ ತಾಲೂಕು ಪಂಚಾಯತ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೆಆರ್‌ಎಸ್ ಜಿಲ್ಲಾಧ್ಯಕ್ಷ ಸಚಿನ್ ಚವ್ಹಾಣ್ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಚಿನ್ ಚವ್ಹಾಣ್, ಕಾಳಗಿ ತಾಲೂಕು ಅಧ್ಯಕ್ಷ ಸೀತಾರಾಮ್ ಪವಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹ್ಸಿನ್ ಪಟೇಲ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X