Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಂಬಿಗರ ಚೌಡಯ್ಯನವರ ಮೂರ್ತಿ...

ಕಲಬುರಗಿ | ಅಂಬಿಗರ ಚೌಡಯ್ಯನವರ ಮೂರ್ತಿ ವಿರೂಪ ಪ್ರಕರಣ; ಪೊಲೀಸರಿಂದ ಸುಳ್ಳು ಕೇಸ್ ದಾಖಲು : ಆರೋಪಿ ಶಿವರಾಜ್ ನಾಟೀಕಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ20 Oct 2025 5:56 PM IST
share
ಕಲಬುರಗಿ | ಅಂಬಿಗರ ಚೌಡಯ್ಯನವರ ಮೂರ್ತಿ ವಿರೂಪ ಪ್ರಕರಣ; ಪೊಲೀಸರಿಂದ ಸುಳ್ಳು ಕೇಸ್ ದಾಖಲು : ಆರೋಪಿ ಶಿವರಾಜ್ ನಾಟೀಕಾರ್ ಆರೋಪ

ಕಲಬುರಗಿ: ಚಿತ್ತಾಪುರ ಮತಕ್ಷೇತ್ರದ ಶಹಾಬಾದ್ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ವಿರೂಪ ಪ್ರಕರಣದಲ್ಲಿ ಪೋಲಿಸರು ನನ್ನನ್ನೂ ಸೇರಿದಂತೆ ಮೂವರ ಹೆಸರು ವಿನಾಕಾರಣ ಹಾಕಿದ್ದಾರೆ. ಹಾಗಾಗಿ ಈ ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನು ಬಂಧಿಸಿ, ತನಿಖೆಗೆ ಒಳಪಡಿಸಬೇಕು ಎಂದು ಮೂರ್ತಿ ವಿರೂಪಗೊಳಿಸಿದ ಆರೋಪಿ ಹಾಗೂ ಮುತ್ತಗಾ ಗ್ರಾಮದ ಕೋಲಿ ಸಮಾಜದ ಅಧ್ಯಕ್ಷ ಶಿವರಾಜ್ ನಾಟೀಕಾರ್ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಆರಾಧ್ಯ ದೈವವಾಗಿರುವ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿಲ್ಲ. ನಿಜವಾದ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಉದ್ದೇಶಪೂರ್ವಕವಾಗಿ ನಮ್ಮ ಹೆಸರನ್ನು ಉಲ್ಲೇಖಿಸಿ, ಸುಳ್ಳು ಪ್ರಕರಣವನ್ನು ದಾಖಲಿಸಿದ್ದಾರೆ ಆರೋಪಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಹ ಜಾಮೀನು ಪಡೆದಿದ್ದೇವೆ. ಕಾನೂನು ಹೋರಾಟವನ್ನು ಎದುರಿಸುತ್ತೇವೆ. ಮುತ್ತಗಾ ಗ್ರಾಮದಲ್ಲಿನ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ನಿಜವಾದ ಆರೋಪಿಗಳು ಸಿಗುವವರೆಗೂ ಕಾಲಿನಲ್ಲಿ ಚಪ್ಪಲಿ ಹಾಕದಿರಲು ತೀರ್ಮಾನಿಸಿದ್ದಾಗಿ ಶಿವರಾಜ್ ಹೇಳಿದರು.

ಮೂರ್ತಿ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೊದಲು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರಿಗೆ ದೂರವಾಣಿ ಕರೆ ಮಾಡಿರುವೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಮೂರ್ತಿ ವಿರೂಪಗೊಳಿಸಿದ ಕುರಿತು ನಾನು ಮೊದಲಿಗೆ ಶಹಾಬಾದ್ ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಅವರಿಗೆ ಮಾಹಿತಿ ನೀಡಿದ್ದೇನೆ. ನಂತರ ಎಲ್ಲರಿಗೂ ವಿಷಯ ತಿಳಿಸಿರುವೆ ಎಂದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ವೀರೇಂದ್ರ ಪಂಚಾಳ್ ಅವರ ವಿರುದ್ಧ ಸುಳ್ಳು ದೂರು ಸಲ್ಲಿಸಿದ್ದರು. ಮೂರ್ತಿ ವಿರೂಪಗೊಳಿಸಿದಾಗ ವೀರೇಂದ್ರ ಪಂಚಾಳ್ ಬೆಂಗಳೂರಿನಲ್ಲಿ ಇದ್ದರು. ಹಾಗಾಗಿ ಆ ಕುರಿತು ನಾನು ಆಕ್ಷೇಪ ವ್ಯಕ್ತಪಡಿಸಿದಾಗ ನನ್ನ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವಿವರಿಸಿದರು.

ಇನ್ನೊಬ್ಬ ಆರೋಪಿ ಸಾಯಬಣ್ಣ ತಳವಾರ್ ಮಾತನಾಡಿ, ಪೊಲೀಸರು ನನಗೆ ಮಾಡಬೂಳ್ ಠಾಣೆಗೆ ಕರೆದುಕೊಂಡು ಹೋಗಿ ನನ್ನ ಮೇಲೆ ಹಲ್ಲೆ ಮಾಡಿ ಶಿವರಾಜ್ ನಾಟೀಕಾರ್ ಅವರ ಹೆಸರು ಹೇಳಲು ಹೆದರಿಸಿದರು. ಭಯಪಟ್ಟು ನಾನು ಅವರ ಹೆಸರುಗಳನ್ನು ಹೇಳಿದೆ. ಆ ಪ್ರಕರಣದಲ್ಲಿ ಶಿವರಾಜ್ ನಾಟೀಕಾರ್ ಅವರ ಪಾತ್ರ ಇಲ್ಲ. ನಾನು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿ ಗುಣಮುಖವಾಗಿ ಮರಳಿ ಬಂದಿರುವೆ. ನಾನು ಈ ಕುರಿತು ನನ್ನ ಹೇಳಿಕೆಗೆ ಬದ್ಧವಾಗಿರುವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮತ್ತೊಬ್ಬ ಆರೋಪಿ ಮಲ್ಲು ಪಾಟೀಲ್, ಗ್ರಾಮದ ಮುಖಂಡರಾದ ಶ್ರೀಕಾಂತ ಪಟ್ಟೇದಾರ್, ಬೆಳ್ಳೂರಾಯ್ ಹಳ್ಳಿ, ಸಾಯಬಣ್ಣ ವಾಲಿಕಾರ್, ಮಲ್ಲಮ್ಮ ಪಟ್ಟೇದಾರ್, ಚಂದ್ರಕಲಾ ನಾಟೀಕಾರ್, ಲಕ್ಷ್ಮೀ ನಾಟೀಕಾರ್, ಶಂಕರ್ ನಾಟೀಕಾರ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X