Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಲಾವಿದರು ಸಮಾಜಕ್ಕೆ...

Kalaburagi | ಕಲಾವಿದರು ಸಮಾಜಕ್ಕೆ ಹೊಸತನ, ಅರ್ಥಪೂರ್ಣ ಸಂದೇಶ ನೀಡುತ್ತಾರೆ : ಬಸವರಾಜ ಉಪ್ಪಿನ್

ವಾರ್ತಾಭಾರತಿವಾರ್ತಾಭಾರತಿ8 Aug 2026 6:24 PM IST
share
Kalaburagi | ಕಲಾವಿದರು ಸಮಾಜಕ್ಕೆ ಹೊಸತನ, ಅರ್ಥಪೂರ್ಣ ಸಂದೇಶ ನೀಡುತ್ತಾರೆ : ಬಸವರಾಜ ಉಪ್ಪಿನ್

ಕಲಬುರಗಿ: ಕಲೆಯ ಬಗ್ಗೆ ಸಮರ್ಪಣಾ ಮನೋಭಾವ ಹೊಂದಿರುವ ಕಲಾವಿದರು ಎಂದಿಗೂ ಸುಮ್ಮನಿರುವುದಿಲ್ಲ. ಸಮಾಜಕ್ಕೆ ಸದಾ ಹೊಸತನ ಹಾಗೂ ಅರ್ಥಪೂರ್ಣ ಸಂದೇಶ ನೀಡಲು ಅವರು ಪ್ರಯತ್ನಿಸುತ್ತಾರೆ. ಇದಕ್ಕೆ ಬೀದರ್ ಮೂಲದ ಕಲಾವಿದೆ ಕಹಕಶಾನ್ ನಜ್ನೀನ್ ಅವರ ಕಲಾಕೃತಿಗಳೇ ಸಾಕ್ಷಿ ಎಂದು ಹಿರಿಯ ಕಲಾವಿದ ಬಸವರಾಜ ಆರ್. ಉಪ್ಪಿನ್ ಹೇಳಿದರು.

ನಗರದ ಕನ್ನಡ ಭವನದ ಕಲಾ ಸೌಧ ಆರ್ಟ್ ಗ್ಯಾಲರಿಯಲ್ಲಿ ಶನಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಹಕಶಾನ್ ನಜ್ನೀನ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಕಹಕಶಾನ್ ನಜ್ನೀನ್ ಅವರು ರೂಪಕ ಚಿತ್ರಕಲೆ ಹಾಗೂ ಕ್ಯಾಲಿಗ್ರಫಿ (ಲಿಪಿಕಲೆ) ಎರಡೂ ಪ್ರಕಾರಗಳಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ. ವಿಭಿನ್ನ ಕಲಾ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತಮ್ಮ ಕಲಾ ಪ್ರತಿಭೆಯನ್ನು ಅಭಿವ್ಯಕ್ತಿಪಡಿಸಿರುವುದು ಗಮನಾರ್ಹ ಎಂದು ಉಪ್ಪಿನ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಾವಿದ ಹಾಗೂ ಕಲಾ ಇತಿಹಾಸಕಾರ ಮೊಹಮ್ಮದ್ ಅಯಾಜುದ್ದೀನ್ ಪಟೇಲ್ ಮಾತನಾಡಿ, ಕಹಕಶಾನ್ ನಜ್ನೀನ್ ಅವರ ಕ್ಯಾಲಿಗ್ರಫಿ ಚಿತ್ರಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ. ದೇಶ-ವಿದೇಶಗಳಲ್ಲಿ ನಡೆದ ಹಲವು ಅಂತಾರಾಷ್ಟ್ರೀಯ ಕಲಾ ಪ್ರದರ್ಶನಗಳಲ್ಲಿ ಅವರು ಭಾಗವಹಿಸಿರುವುದು ಅವರ ಕಲೆಗೆ ದೊರೆತ ಜಾಗತಿಕ ಮಾನ್ಯತೆಗೆ ಸಾಕ್ಷಿಯಾಗಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೆಗಲತಿಪ್ಪಿ ಮಾತನಾಡಿ, ಕಹಕಶಾನ್ ನಜ್ನೀನ್ ಅವರ ಮಹಿಳಾ ವಿಷಯಾಧಾರಿತ ಚಿತ್ರಕೃತಿಗಳು ಗಮನ ಸೆಳೆಯುತ್ತವೆ. ಮಹಿಳೆಯರ ಸಮಸ್ಯೆಗಳು ಹಾಗೂ ಸಾಮಾಜಿಕ ಪಾತ್ರವನ್ನು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸುವ ಅವರ ಕಲಾಕೃತಿಗಳು ಸಮಾಜಕ್ಕೆ ಬಲವಾದ ಸಂದೇಶ ನೀಡುತ್ತವೆ ಎಂದು ಶ್ಲಾಘಿಸಿದರು.

ಬಹಮನಿ ಫೌಂಡೇಶನ್ ಅಧ್ಯಕ್ಷ ಖಾಜಿ ರಿಜ್ವಾನ್ ಉರ್ ರಹಮಾನ್ ಸಿದ್ದಿಕಿ ಮಾತನಾಡಿದರು. ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ ಹಾಗೂ ಕಲಾ ಸೌಧ ಸಂಚಾಲಕ ರೆಹಮಾನ್ ಪಟೇಲ್ ಅತಿಥಿಗಳಾಗಿ ಉಪಸ್ಥಿತರಿದ್ದರು.

ಆ.9ರವರೆಗೆ ಪ್ರದರ್ಶನ :

ಕಹಕಶಾನ್ ನಜ್ನೀನ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಆಗಸ್ಟ್ 9ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರಲಿದೆ. ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಕಲಾ ಸೌಧ ಆರ್ಟ್ ಗ್ಯಾಲರಿಯಲ್ಲಿ ಪ್ರದರ್ಶನ ವೀಕ್ಷಿಸಬಹುದಾಗಿದೆ.

Tags

SocietyartistsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X