Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕುರುಬ ಸಮುದಾಯದವರಿಗೆ...

ಕಲಬುರಗಿ | ಕುರುಬ ಸಮುದಾಯದವರಿಗೆ ಬಹಿಷ್ಕಾರ ಹಿನ್ನೆಲೆ: ಅಧಿಕಾರಿಗಳಿಂದ ಶಾಂತಿ ಸಭೆ

ವಾರ್ತಾಭಾರತಿವಾರ್ತಾಭಾರತಿ19 March 2025 7:34 PM IST
share
ಕಲಬುರಗಿ | ಕುರುಬ ಸಮುದಾಯದವರಿಗೆ ಬಹಿಷ್ಕಾರ ಹಿನ್ನೆಲೆ: ಅಧಿಕಾರಿಗಳಿಂದ ಶಾಂತಿ ಸಭೆ

ಕಲಬುರಗಿ : ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬ ಸಮುದಾಯದ ಜನರನ್ನು ಊರಿನಿಂದ ಬಹಿಷ್ಕಾರ ಹಾಕಲಾಗಿದೆ ಎಂಬ ವಿಚಾರ ವಿವಾದಕ್ಕೆ ಕಾರಣವಾಗಿದೆ.

ಗ್ರಾಮದ ಚನ್ನವೀರ ಶಿವಾಚಾರ್ಯರ ಮಠದ ಹತ್ತಿರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಿದ್ದಕ್ಕೆ ಸ್ಥಳೀಯ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಕುರುಬ ಸಮುದಾಯದ ಜನರನ್ನು ಬಹಿಷ್ಕಾರ ಹಾಕಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಈ ಘಟನೆಯ ವಿರುದ್ಧ ಕಲ್ಯಾಣ ಕರ್ನಾಟಕ ಗೊಂಡ ಸಮಾಜದ ಒಕ್ಕೂಟ(ರಿ) ಸಂಘಟನೆ ಕಿಡಿಕಾರಿದ್ದು, ಈ ಅನ್ಯಾಯದ ವಿರುದ್ಧ ಧರಣಿ ನಡೆಸಿತು. ಇದರ ಪರಿಣಾಮವಾಗಿ ತಾಲೂಕು ಆಡಳಿತವು ತಕ್ಷಣವೇ ದೌಡಾಯಿಸಿ, ಶಾಂತಿ ಸಭೆ ಕೈಗೊಂಡು ಪರಿಸ್ಥಿತಿ ಸಮನಗೊಳಿಸಲು ಪ್ರಯತ್ನಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ತಾಲೂಕು ಆಡಳಿತವು ಶಾಂತಿ ಸಭೆಯನ್ನು ಆಯೋಜಿಸಿತು. ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳು, ಡಿವೈಎಸ್ಪಿ, ಇಓ, ಸಮಾಜ ಕಲ್ಯಾಣ ಅಧಿಕಾರಿ, ಪಿಡಿಓ ಸೇರಿದಂತೆ ಹಲವಾರು ಅಧಿಕಾರಿಗಳು ಭಾಗವಹಿಸಿದರು. ಈ ಸಭೆಯಲ್ಲಿ ಗ್ರಾಮಸ್ಥರು, ಕುರುಬ ಸಮುದಾಯದ ಮುಖಂಡರು, ಮಹಿಳೆಯರು ಹಾಗೂ ಯುವಕರು ಹಾಜರಿದ್ದರು.

ತಹಶೀಲ್ದಾರ್‌ ಅಣ್ಣಾರಾವ್ ಪಾಟೀಲ ಅವರು ಸಮುದಾಯವನ್ನು ಉದ್ದೇಶಿಸಿ ಮಾತನಾಡಿ, ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಎಲ್ಲರೂ ಸಹೋದರತೆಯಿಂದ ಬಾಳಬೇಕು. ಕ್ಷುಲ್ಲಕ ಕಾರಣದಿಂದ ವೈಮನಸ್ಸು ಬೆಳೆಸಿಕೊಳ್ಳದೇ ಎಲ್ಲ ಮಹಾಪುರುಷರು ಎಲ್ಲ ಸಮುದಾಯಕ್ಕೆ ಬೇಕಾದವರಿದ್ದು, ಅವರ ಹೆಸರಿನಲ್ಲಿ ನಾವು ಭೇದ ಮಾಡಿಕೊಳ್ಳದೇ ಒಂದಾಗಿ ನಡೆಯಬೇಕು ಎಂದು ಹೇಳಿದರು.

ತಾಪಂ ಇಒ ಮಾನಪ್ಪ ಕಟ್ಟಿಮನಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಡಿವೈಎಸ್‍ಪಿ ಗೋಪಿ ಬಿ.ಆರ್. ಅವರು ಮಾತನಾಡಿ, "ಸಮಾಜದಲ್ಲಿ ಹಗೆತನ ಮತ್ತು ಜಾತಿ ಭೇದ ನಿವಾರಣೆಯಾಗಬೇಕು. ಎಲ್ಲರೂ ಸಹೋದರತ್ವದ ಮನೋಭಾವದಿಂದ ಬಾಳಬೇಕು. ಯಾವುದೇ ರೀತಿಯ ಅನ್ಯಾಯವನ್ನು ಕಾಯ್ದೆಗಳ ಮೂಲಕ ಪರಿಶೀಲಿಸಲಾಗುವುದು" ಎಂದರು.

ಕಲ್ಯಾಣ ಕರ್ನಾಟಕ ಗೊಂಡ ಸಮಾಜದ ಒಕ್ಕೂಟ(ರಿ) ಸಂಸ್ಥಾಪಕ ಅಧ್ಯಕ್ಷ ಅಂಬರೀಶ ಮಲ್ಲೇಶಿ ಮಾತನಾಡಿ, "ಈ ಘಟನೆ ಎಷ್ಟು ಖಂಡನೆಗೆ ಒಳಗಾಗಬೇಕೋ ಅಷ್ಟು ತೀವ್ರ ಅನ್ಯಾಯವಾಗಿದೆ. ನಮ್ಮ ಸಮುದಾಯದ ಜನರಿಗೆ ಊರಿನಿಂದ ಬಹಿಷ್ಕಾರ ಹಾಕಿರುವುದು ಖಂಡನೀಯ. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ" ಎಂದು ಎಚ್ಚರಿಸಿದರು.

ಸಂಸ್ಥಾಪಕ ಕಾರ್ಯದರ್ಶಿ ಬಾಲಾಜಿ ಜಬಾಡೆ, ಸಕಲ ಸಂರಕ್ಷಣ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷ ಆಕಾಶ್ ದೇಗಾಂವ, ಗೊಂಡ ಕುರುಬ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ "ನಮ್ಮ ಸಮಾಜವನ್ನು ತಾರತಮ್ಯದಿಂದ ದೂರವಿಡುವ ಈ ರೀತಿಯ ನಡೆಗಳನ್ನು ತಕ್ಷಣವೇ ತಡೆಗಟ್ಟಬೇಕು. ನಮ್ಮ ಹಕ್ಕುಗಳಿಗೆ ಧಕ್ಕೆ ಬಾರದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷ್ಮೀ ಹೋಳ್ಕರ್, ಪಿಎಸ್‍ಐ ಭೀಮಾಶಂಕರ ಬಂಕ್ಲಿ, ಪಿಡಿಒ ಚಿದಾನಂದ ಅಲೇಗಾಂವ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X