Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ...

ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಕಲಬುರಗಿ ಬಂದ್; ಮಿಶ್ರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ22 Jan 2025 7:06 PM IST
share
ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಕಲಬುರಗಿ ಬಂದ್; ಮಿಶ್ರ ಪ್ರತಿಕ್ರಿಯೆ

ಕಲಬುರಗಿ: ತೊಗರಿಗೆ ಬೆಂಬಲ ಬೆಲೆ, ಹೆಚ್ಚಿನ ಬೆಳೆ ಹಾನಿಯಾಗಿರುವ ಈ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಕರೆ ನೀಡಿದ್ದ ಕಲಬುರಗಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ಬಂದಿದೆ.

ನಸುಕಿನ ಜಾವದಲ್ಲಿ ಪ್ರತಿಭಟನೆಗೆ ಇಳಿದ ರೈತ ಮುಖಂಡರು, ಈ ವರ್ಷ ತೊಗರಿ ಬೆಳೆಗಾರರಿಗೆ ತುಂಬಾ ನಷ್ಟವಾಗಿದೆ, ಕೂಡಲೇ ರೈತರ ಸಮಸ್ಯೆಗಳನ್ನು ಈಡೇರಿಸಬೇಕು, ಬೆಳೆ ಹಾನಿ ಅನುಭವಿಸಿದ ಸಾವಿರಾರು ರೈತರು ಬೀದಿ ಪಾಲಾಗಿದ್ದಾರೆ. ಅವರ ನೆರವಿಗೆ ನಿಂತು ಸರಕಾರ ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಘೋಷಣೆಗಳನ್ನು ಹಾಕಿದರು.

ಕಲಬುರಗಿ ಬಂದ್ ಘೋಷಣೆ ನಿಮಿತ್ತ ಇಂದು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳು ರಸ್ತೆಗೆ ಇಳಿದಿಲ್ಲ, ಇದರಿಂದ ಕೇಂದ್ರ ಬಸ್ ನಿಲ್ದಾಣ ವು ಬಸ್ ಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಬಸ್ ನಿಲ್ದಾಣದ ಸುತ್ತಮುತ್ತಲೂ ಸೇರಿದಂತೆ ಹಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿರುವುದು ಕಂಡು ಬಂತು. ಮಧ್ಯಾಹ್ನ 2 ಗಂಟೆಯ ಬಳಿಕ ಬಸ್ ಸೌಲಭ್ಯ ಸೇರಿದಂತೆ ಹೋಟೆಲ್, ಅಂಗಡಿ ಮುಗ್ಗಟ್ಟುಗಳು ಸಹ ತೆರೆದಿರುವುದು ಕಾಣಿಸಿದವು. ಹಾಗಾಗಿ ಬೆಳಗ್ಗೆ ಬಂದ್ ಕಾಣಿಸಿದ ಮಳಿಗೆಗಳು ಮಧ್ಯಾಹ್ನ ಓಪನ್ ಆಗಿದ್ದವು. ಹೀಗೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ವಯಂ ಪ್ರೇರಿತ ಅಂಗಡಿ ಮುಗ್ಗಟ್ಟುಗಳು ಬಂದ್:

ಬಂದ್ ಘೋಷಣೆ ಮಾಡಿದ್ದರಿಂದ ಇಲ್ಲಿನ ಅಂಗಡಿ, ಮುಗ್ಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ಮುಚ್ಚಿ, ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಕೇಂದ್ರ ಬಸ್ ನಿಲ್ದಾಣದಲ್ಲಿ ದಿನಾಲೂ ಬೆಳಗ್ಗೆ ತೆರೆಯುತ್ತಿದ್ದ ಕಿರಾಣಿ ಅಂಗಡಿ, ಚಪ್ಪಲಿ ಅಂಗಡಿ, ಹೋಟೆಲ್ ಸೇರಿದಂತೆ ಇತರ ವಾಣಿಜ್ಯ ಮಳಿಗೆಗಳು ಮುಚ್ಛಿರುವುದು ಕಂಡು ಬಂತು. ಕೇಂದ್ರ ಬಸ್ ನಿಲ್ದಾಣ, ರಾಷ್ಟ್ರಪತಿ ವೃತ್ತದ, ತಿಮ್ಮಾಪುರ ವೃತ್ತ, ಜಗತ್ ವೃತ್ತ , ಮಾರ್ಕೆಟ್ , ಗಂಜ್ ಪ್ರದೇಶ ಸೇರಿ ಅನೇಕ ಕಡೆಗೆ ಅಂಗಡಿ ಮಾಲೀಕರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿ, ಮುಗ್ಗಟ್ಟುಗಳನ್ನು ಮುಚ್ಚಿ, ರೈತರ ಹೋರಾಟಕ್ಕೆ ಬೆಂಬಲಿಸಿದರು.

ಬಂದ್ ಕರೆಗೆ ಹಲವು ಸಂಘಟನೆಗಳ ಭಾರೀ ಬೆಂಬಲ:

ತೊಗರಿಗೆ ವಿಶೇಷ ಪ್ಯಾಕೇಜ್ ಅನುದಾನ ಘೋಷಿಸಬೇಕೆಂದು ಒತ್ತಾಯಿಸಿ ಕರೆ ಕೊಟ್ಟಿದ್ದ ಕಲಬುರಗಿ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಅದರಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೈನ್ಯ ಕೊಡಿಹಳ್ಳಿ ಚಂದ್ರಶೇಖರ ಬಣ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೈನ್ಯ ಕೆ ಎಸ್ ಪುಟ್ಟಣ್ಣಯ್ಯಾ ಬಣ, ಸೆಂಟ್ರಲ್ ಆಫ್ ಇಂಡಿಯಾ ಟ್ರೇಡ್ ಯೂನಿಯನ್ (CITU), ದಲಿತ ಸಂಘರ್ಷ ಸಮಿತಿ ಡಾ.ಅಂಬೇಡ್ಕರ್ ವಾದಿ, ದಲಿತ ಸಂಘರ್ಷ ಸಮಿತಿ ಮಾವಳ್ಳಿ ಶಂಕರ್ ಬಣ, ಕಟ್ಟಡ ಕಾರ್ಮಿಕ ಸಂಘಗಳ, ತೊಗರಿ ಬೆಳೆಗಾರರ ಸಂಘ, ಆಹಾರ ಧಾನ್ಯಗಳ ಮತ್ತು ಬಿಜ ವ್ಯಾಪಾರಿಗಳ ಸಂಘಗಳು, ಚೆಂಬರ್ ಆಫ್ ಕಾಮರ್ಸ್, ಅಡತ್ ವ್ಯಾಪಾರಸ್ಥರು ಮಾಲಿಕರು ಸಂಘ, ಕಿರಾಣಾ ಬಜಾರ್ ವ್ಯಾಪಾರಸ್ಥರು ಸಂಘ, ಬಿದಿ ಬದಿ ವ್ಯಾಪಾರಸ್ಥರು, ದಾಲ್ ಮಿಲ್ಲರ್ ಅಸೊಶಿಯೇಶನ್ ಸಂಘ, ಅಕ್ಕಿ ವ್ಯಾಪಾರಸ್ಥರು ಸಂಘ, ಔಷಧಿ ವ್ಯಾಪಾರಸ್ಥರು ಸಂಘ ಸೇರಿದಂತೆ ಇನ್ನೂ ಹಲವು ಸಂಘಟನೆಗಳು ಸಹ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.

ಪ್ರತಿಭಟನೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡಿಯಾಳ, ಮೌಲಾ ಮುಲ್ಲಾ, ಬಸವರಾಜ್ ಇಂಗಿನ್, ಎಸ್.ಆರ್.ಕಲ್ಲೂರ್, ಅರ್ಜುನ್ ಗೊಬ್ಬೂರ್, ಮುಬೀನ್ ಅಹ್ಮದ್, ಬಸವರಾಜ್ ಇಂಗಿನ್, ಮೇಘರಾಜ ಕಠಾರೆ, ದಿಲೀಪ್ ನಾಗೋರೆ, ನಾಗೇಂದ್ರಪ್ಪ ಥoಬೆ, ಪದ್ಮಿನಿ ಕಿರಣಗಿ, ಭೀಮಶೆಟ್ಟಿ ಯಂಪಳ್ಳಿ, ಮಹಾಂತೇಶ್ ಜಮಾದಾರ್, ಗೌರಮ್ಮ ಪಾಟೀಲ್, ಮಲ್ಲಿಕಾರ್ಜುನ್ ಪಾಟೀಲ್, ಪ್ರಕಾಶ್ ಜಾನೆ, ಮಹೇಶ್ ಎಸ್.ಬಿ, ಮಹೇಶ್ ಕುಮಾರ್ ರಾಠೋಡ್, ಅಲ್ಲಂ ಪಟೇಲ್ ಇಜೇರಿ, ಕಾಶೀನಾಥ್ ಬಂಡಿ, ಶರಣು ಪಪ್ಪಾ, ಇಬ್ರಾಹಿಂ ಪಟೇಲ್ ಯಾಳವಾರ್, ಪ್ರಭುದೇವ ಯಳಸಂಗಿ, ರಾಜೇಂದ್ರ ರಾಜವಾಳ, ಮಹಾಂತಗೌಡ ನಂದಿಹಳ್ಳಿ, ಎಸ್ಎಫ್ಐ ನ ಸುಜಾತಾ, ಜೆಡಿಎಸ್ ಮುಖಂಡರಾದ ಬಾಲರಾಜ್ ಗುತ್ತೇದಾರ್, ಸುನೀತಾ ತಳವಾರ್ ಸೇರಿದಂತೆ ಹಲವು ಮುಖಂಡರು, ಹೋರಾಟಗಾರರು ಪಾಲ್ಗೊಂಡಿದ್ದರು.

ಏನೆಲ್ಲಾ ರೈತರ ಬೇಡಿಕೆಗಳು?:

ಪ್ರತಿಭಟನೆಯಲ್ಲಿ ಪಾಲ್ಗೊಂಡ ರೈತ ಹೋರಾಟಗಾರರು, ಕಳೆದ ಬಾರಿಗಿಂತ ತೊಗರಿ ಬೆಳೆ ಈ ಸಲ ಬಹಳಷ್ಟು ನಷ್ಟವಾಗಿದೆ, ಸರಕಾರ ಕೂಡಲೆ ಎಚ್ಚೆತ್ತು ಇದಕ್ಕೆ ಪ್ರತ್ಯೇಕ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಜಿಲ್ಲೆಯಲ್ಲಿ ಬಿತ್ತನೆ ಮಾಡಿದ 6.06 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 2 ಲಕ್ಷ ಹೆಕ್ಟೇರ್ ತೊಗರಿ ಬೆಳೆ ಸಂಪೂರ್ಣ ನಾಶವಾಗಿದೆ, ಒಣಗಿದ ತೊಗರಿಗೆ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಘೋಷಿಸಬೇಕು. ಒಣಗಿದ ತೊಗರಿಗೆ ಬೆಳೆ ವಿಮೆ ಮಾಡಬೇಕು, ಪ್ರತಿ ಕ್ವಿಂಟಾಲ್ ತೊಗರಿಗೆ 12,550 ರೂಪಾಯಿ ಬೆಂಬಲ ಬೆಲೆ, ಸಿಎಂ ಆವರ್ಥ ನಿಧಿಯಿಂದ 500 ರೂಪಾಯಿ ಪ್ರೋತ್ಸಾಹಧನ ನೀಡಬೇಕು, ತೊಗರಿ ಮಂಡಳಿಗೆ ಪ್ರತ್ಯೇಕ 25 ಕೋಟಿ ಮೀಸಲಿಡಬೇಕು, ಕಾಫಿ ಮಂಡಳಿಗೆ ತೋರುತ್ತಿರುವ ಕಾಳಜಿಯನ್ನು ತೊಗರಿ ಮಂಡಳಿಗೂ ಮುತುವರ್ಜಿ ವಹಿಸಬೇಕು. ರೈತರು ಬೆಳೆದಿರುವ ಇತರ ಬೆಳೆಗಳಿಗೆ ಎಂಎಸ್ಪಿ ನಿರ್ಣಯಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಒತ್ತಾಯಿಸಿದ್ದಾರೆ.

Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X