Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮೇ 15ರಂದು ಶಹಾಪುರದಲ್ಲಿ...

Kalaburagi | ಮೇ 15ರಂದು ಶಹಾಪುರದಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ10 May 2026 10:14 PM IST
share
Kalaburagi | ಮೇ 15ರಂದು ಶಹಾಪುರದಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ
ಬಸವಾದಿ ಶರಣರ ಹೆಸರಿನಲ್ಲಿ ಹಿಂದುತ್ವ ಅಜೆಂಡಾ: ಬಸವಪರ ಸಂಘಟನೆಗಳ ಆರೋಪ

ಕಲಬುರಗಿ: ಯಾದಗಿರಿ ಜಿಲ್ಲೆಯಲ್ಲಿ ಬಸವಾದಿ ಶರಣರ ಹೆಸರಿನಲ್ಲಿ ಆಯೋಜಿಸಲಾಗುತ್ತಿರುವ “ಹಿಂದೂ ಸಮಾವೇಶ”ದ ಮೂಲಕ ಶರಣರ ಸಮಾನತೆಯ ತತ್ವಗಳಿಗೆ ವಿರುದ್ಧವಾದ ಹಿಂದುತ್ವದ ವಿಚಾರಧಾರೆಗಳನ್ನು ಸೇರಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿರುವ ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ವಿವಿಧ ಬಸವಪರ ಸಂಘಟನೆಗಳು, ಇದಕ್ಕೆ ಪರ್ಯಾಯವಾಗಿ ಮೇ 15ರಂದು ಶಹಾಪುರದಲ್ಲಿ “ಬಸವಾದಿ ಶರಣರ ಜಾಗೃತಿ ಸಮಾವೇಶ” ಹಮ್ಮಿಕೊಂಡಿರುವುದಾಗಿ ಘೋಷಿಸಿವೆ.

ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಆರ್.ಜಿ. ಶೆಟಗಾರ ಮಾತನಾಡಿ, “ಮೇ 15ರಂದು ಸಂಜೆ 5 ಗಂಟೆಗೆ ಶಹಾಪುರದ ಹಳೇ ಬಸ್ ನಿಲ್ದಾಣ ಎದುರಿನ ಶಾಲಾ ಮೈದಾನದಲ್ಲಿ ಜಾಗೃತಿ ಸಮಾವೇಶ ನಡೆಯಲಿದೆ. ಜಾಗತಿಕ ಲಿಂಗಾಯತ ಮಹಾಸಭೆ, ಬಸವಪರ ಸಂಘಟನೆಗಳು, ಕಾಯಕರ ಶರಣರ ಒಕ್ಕೂಟ, ಸೌಹಾರ್ದ ಕರ್ನಾಟಕ ಹಾಗೂ ವಿವಿಧ ದಲಿತಪರ ಸಂಘಟನೆಗಳ ಸಹಯೋಗದಲ್ಲಿ ಸಮಾವೇಶ ಆಯೋಜಿಸಲಾಗಿದೆ” ಎಂದು ತಿಳಿಸಿದರು.

ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬಸವ ಅಭಿಮಾನಿಗಳು ಹಾಗೂ ಶರಣರ ಅನುಯಾಯಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

“900 ವರ್ಷಗಳ ಹಿಂದೆಯೇ ವೇದ, ಆಗಮ ಮತ್ತು ಪುರಾಣಗಳನ್ನು ಪ್ರಶ್ನಿಸಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶರಣರು ಹೋರಾಟ ನಡೆಸಿದ್ದರು. ಅಂತಹ ಶರಣರ ತತ್ವಗಳನ್ನು ವೈದಿಕ ಚೌಕಟ್ಟಿನೊಳಗೆ ಸೆರೆಹಿಡಿಯುವ ಪ್ರಯತ್ನ ನಡೆಯುತ್ತಿದೆ. ಜನರಲ್ಲಿ ಬಸವ ಚಿಂತನೆ ಮತ್ತು ಶರಣರ ವಿಚಾರಧಾರೆಗಳ ನೈಜ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಶೆಟಗಾರ ಹೇಳಿದರು.

ಹೋರಾಟಗಾರ್ತಿ ಹಾಗೂ ಚಿಂತಕಿ ಡಾ. ಮೀನಾ ಬಾಳಿ ಮಾತನಾಡಿ, “ಕೆಲವರು ‘ಹಿಂದೂ ಸಮಾವೇಶ’ದ ಹೆಸರಿನಲ್ಲಿ ಮನುಸ್ಮೃತಿ ತತ್ವಗಳನ್ನು ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಲಿಂಗಾಯತ ಮಠಾಧೀಶರನ್ನು ಬಳಸಿಕೊಂಡು ಅಪಪ್ರಚಾರ ನಡೆಸಲಾಗುತ್ತಿದೆ. ಶರಣರ ಅನುಯಾಯಿಗಳನ್ನು ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಈ ಸಮಾವೇಶದ ಅಂತರಾಳದಲ್ಲಿ ಆರ್‌ಎಸ್‌ಎಸ್‌ನ ಅಜೆಂಡಾ ಅಡಗಿದೆ” ಎಂದು ಆರೋಪಿಸಿದರು.

ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ ಅವರು, “ಶಹಾಪುರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ಸರ್ಕಾರ ನಿಷೇಧಿಸಬೇಕು. ಹಿಂದೂ ಸಮಾವೇಶ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ, ಆದರೆ ಬಸವಾದಿ ಶರಣರನ್ನು ಅದಕ್ಕೆ ಜೋಡಿಸುವುದು ಸರಿಯಲ್ಲ. ಇಂತಹ ಕಾರ್ಯಕ್ರಮಗಳಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇದೆ” ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಶೋಕ ಘೋಳಿ, ರಾಜಶೇಖರ ಯಂಕಂಚಿ, ಆರ್.ಕೆ. ಹುಡಗಿ, ಶಿವಶಂಕರ ದೇಗಾಂವ, ರವೀಂದ್ರ ಶಾಬಾದಿ, ಶಾಂತಪ್ಪ ಪಾಟೀಲ್, ಹಣಮಂತರಾಯ ಪಾಟೀಲ್, ಭೀಮಣ್ಣ ಬೋನಾಳ, ಸುಧಾಮ ಧನ್ನಿ, ಚಂದಮ್ಮ ಗೋಳಾ, ಲವಿತ್ರ ವಸ್ತ್ರದ, ದಯಾನಂದ ಯಂಕಂಚಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X