Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಭಗತ್‍ಸಿಂಗ್ ಹೋರಾಟದ ಬದುಕು...

ಕಲಬುರಗಿ | ಭಗತ್‍ಸಿಂಗ್ ಹೋರಾಟದ ಬದುಕು ನಮಗೆಲ್ಲರಿಗೂ ಆದರ್ಶ : ಜಗನ್ನಾಥ ಎಸ್‍.ಹೆಚ್

ವಾರ್ತಾಭಾರತಿವಾರ್ತಾಭಾರತಿ3 Oct 2025 7:29 PM IST
share
ಕಲಬುರಗಿ | ಭಗತ್‍ಸಿಂಗ್ ಹೋರಾಟದ ಬದುಕು ನಮಗೆಲ್ಲರಿಗೂ ಆದರ್ಶ : ಜಗನ್ನಾಥ ಎಸ್‍.ಹೆಚ್

ಕಲಬುರಗಿ: ಭಗತ್‍ಸಿಂಗ್ ಅವರ ಹೋರಾಟದ ಬದುಕು ನಮಗೆಲ್ಲರಿಗೂ ಆದರ್ಶ. ಅವರ ಆದರ್ಶ ಬದುಕು ಹಾಗೂ ವೈಚಾರಿಕತೆ ಅರ್ಥ ಮಾಡಿಕೊಳ್ಳುವುದು ಅಗತ್ಯವಿದೆ ಎಂದು ಎಐಡಿವೈಒ ಜಿಲ್ಲಾಧ್ಯಕ್ಷ ಜಗನ್ನಾಥ ಎಸ್.ಹೆಚ್ ಹೇಳಿದರು.

ಶಹಾಬಾದ ನಗರದ ಬಸವೇಶ್ವರ ವೃತ್ತದಲ್ಲಿ ಎ.ಐ.ಡಿ.ವೈ.ಓ ಸಂಘಟನೆಯ ಸಮಿತಿಯಿಂದ ಆಯೋಜಿಸಲಾದ ಕ್ರಾಂತಿಕಾರಿ ಶಹೀದ್ ಭಗತ್‍ಸಿಂಗ್ ರವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಭಗತ್‍ಸಿಂಗ್‍ರ ಹೋರಾಟವು ಕೇವಲ ಬ್ರೀಟಿಷರಿಂದ ಸ್ವಾತಂತ್ರ್ಯ ಪಡೆಯುವುದಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಸ್ವಾತಂತ್ರ್ಯ ಭಾರತದಲ್ಲಿ ಸ್ರ್ತೀ-ಪುರುಷ ತಾರತಮ್ಯ, ಜಾತೀಯತೆ, ಬಡವ-ಶ್ರೀಮಂತ ಎಂಬ ಅಸಮಾನತೆ ಇಲ್ಲದ ಹಾಗೂ ಎಲ್ಲರಿಗೂ ಶಿಕ್ಷಣ, ಉದ್ಯೋಗ, ರೈತ-ಕಾರ್ಮಿಕರು ನೆಮ್ಮದಿಯ ಜೀವನ ಮಾಡುವಂತಹ ಶೋಷಣಾ ಮುಕ್ತ ಸಮಾಜದ ನಿರ್ಮಾಣ ಮಾಡುವ ಕನಸು ಅವರದ್ದಾಗಿತ್ತು. ಆದರೆ ಇಂದು ಜಾತಿ, ಧರ್ಮ, ಪ್ರಾಂತ್ಯ-ಭಾಷೆಯ ಆಧಾರದ ಮೇಲೆ ಜನರ ಐಕ್ಯತೆಯನ್ನು ಮುರಿಯುತ್ತಿದ್ದಾರೆ. ಇದು ಒಂದು ಕಡೆ ಆದರೆ ಬಡತನ, ಬೆಲೆ ಏರಿಕೆ, ಆರ್ಥಿಕ ಬಿಕ್ಕಟ್ಟು ನಿರುದ್ಯೋಗದಂತಹ ಸಮಸ್ಯೆಗಳು ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಭಗತಸಿಂಗ್ ಅವರ ವಿಚಾರ, ಆದರ್ಶ ಮತ್ತು ಅವರ ರಾಜಕೀಯ ದಾರಿಯನ್ನು ಆರ್ಥಮಾಡಿಕೊಂಡು ಅವರ ಕನಸನ್ನು ಇವತ್ತಿನ ಯುವಜನರು ನನಸು ಮಾಡಬೇಕಾಗಿದೆ ಎಂದರು.

ಸಂಘಟನೆಯ ಮುಖಂಡರಾದ ರಾಜೇಂದ್ರ ಅತನೂರ ,ಸಿದ್ದು ಚೌದ್ರಿ, ರಮೇಶ್ ದೇವಕರ್ ಮಾತನಾಡಿ, ಭಗತ್‍ಸಿಂಗ್ ಅವರು ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಕೇವಲ ಬ್ರಿಟಿಷರನ್ನು ಭಾರತದಿಂದ ಹೊರಗಟ್ಟಿದರೆ ಸಾಲದು. ಸ್ವಾತಂತ್ರ್ಯದ ನಂತರ ಭಾರತವನ್ನು ಬಂಡವಾಳಗಾರರ ಕೈವಶವಾಗದಂತೆ ನೋಡಿಕೊಂಡು ಶೋಷಣೆ ರಹಿತ ಸಮಾಜಕ್ಕಾಗಿ ಎಲ್ಲರಿಗೂ ಶಿಕ್ಷಣ, ಆರೋಗ್ಯ, ಜೀವನ ಭದ್ರತೆ ಖಾತ್ರಿಪಡಿಸಲು ಸಮಾಜವಾದಿ ಕ್ರಾಂತಿ ನೆರವೇರಿಸುವ ಆಶಯ ಹೊಂದಿದ್ದರು. ಯುವಜನರು ನೈತಿಕತೆ, ಚಾರಿತ್ರೆ ಬೆಳೆಸಿಕೊಂಡು ಭಗತ್ ಸಿಂಗ್‍ರ ಆಶಯವಾದ ಶೋಷಣೆ ರಹಿತ ಸಮಾಜವಾದಿ ಭಾರತ ನಿರ್ಮಾಣದ ದಿಕ್ಕಿನಲ್ಲಿ ಶ್ರಮಿಸಬೇಕು. ಅಂದಾಗ ಭಗತ್ ಸಿಂಗ್‍ರಿಗೆ ನಿಜವಾದ ಗೌರವ ಸಲ್ಲಿಸಿದಂತೆ ಆಗುತ್ತದೆ ಎಂದರು.

ಈ ಸಂದರ್ಭದಲ್ಲಿ ರಘು ಪವಾರ್, ದೇವರಾಜ್ ಮಿರಲ್ಕರ, ತೇಜಶ್ವಿನಿ ಆರ್ ಇಬ್ರಾಹಿಂಪುರ, ಶಿವರಾಜ, ತೇಜಸ್ ಆರ್ ಇಬ್ರಾಹಿಂಪುರ ಹಾಗೂ ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X