Kalaburagi | ಸಾಹಿತ್ಯ ಸಾಮ್ರಾಟ್ ಅಣ್ಣಾಭಾವು ಸಾಠೆ ಅವರ 106ನೇ ಜಯಂತಿ ಆಚರಣೆ

ಕಲಬುರಗಿ: ಅಣ್ಣಭಾವು ಸಾಠೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ನಗರದ ಕನ್ನಡ ಭವನದಲ್ಲಿ ಶನಿವಾರ ಸಾಹಿತ್ಯ ಸಾಮ್ರಾಟ್ ಅಣ್ಣಾಭಾವು ಸಾಠೆ ಅವರ 106ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ನಿವೃತ್ತ ಮುಖ್ಯ ಇಂಜಿನಿಯರ್ ಬಿ.ಬಿ. ರಾಂಪುರೆ, ಹಿರಿಯ ಹೋರಾಟಗಾರ ಬಸಣ್ಣಾ ಸಿಂಗೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಎ.ಬಿ. ಹೊಸಮನಿ, ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಹೋರಾಟಗಾರ ಮೌಲಾ ಮುಲ್ಲಾ, ಉಪನ್ಯಾಸಕ ಅರುಣ್ ಜೋಳದಕೊಡ್ಲಗಿ, ಸಾಹಿತಿಗಳಾದ ದತ್ತಾತ್ರೇಯ ಇಕ್ಕಳಕಿ ಹಾಗೂ ದೊಡ್ಡಮನಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಭಾವಿಕಟ್ಟಿ, ಸತೀಶ್ ಮಾಲೆ, ದಿನೇಶ್ ಅವರಾದಕರ, ಮಹಾಂತೇಶ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Next Story




