ಕಲಬುರಗಿ | ಮಾ.23 ರಂದು ಗ್ರಾಹಕರ ಕುಂದುಕೊರತೆ ಸಭೆ

ಕಲಬುರಗಿ : ಕಲಬುರಗಿ ಜೆಸ್ಕಾಂ ವಿಭಾಗೀಯ ಕಚೇರಿ-1 ರ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ಗ್ರಾಮೀಣ, ಕಮಲಾಪುರ, ಆಳಂದ, ಕಡಗಂಚಿ, ಅಫಜಲಪೂರ ಹಾಗೂ ಚೌಡಾಪೂರ ಉಪ-ವಿಭಾಗಗಳ ಕಚೇರಿಯಲ್ಲಿ ಮಾ.23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಅನುಷ್ಠಾನ ಕುರಿತು ಹಾಗೂ ಗ್ರಾಹಕರ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಈ ಸಭೆಯು ಕಲಬುರಗಿ ಜೆಸ್ಕಾಂ ವೃತ್ತ ಕಚೇರಿ ಅಧೀಕ್ಷಕ ಅಭಿಯಂತರರು (ವಿ) ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು, ಸಾರ್ವಜನಿಕರು ತಮ್ಮ ಸ್ಥಾವರಗಳ ವಿದ್ಯುತ್ ಸಂಬಂಧಿತ ಸಮಸ್ಯೆಗಳ ನಿವಾರಣೆಗಾಗಿ ಸಭೆ ಕರೆಯಲಾಗಿದ್ದು, ಮೇಲ್ಕಂಡ ದಿನದಂದು ನಡೆಯುವ ಸಭೆಗೆ ಗ್ರಾಹಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
Next Story





