Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಸಿಪಿಐ(ಎಂ) ಸಂಸ್ಥಾಪನಾ...

ಕಲಬುರಗಿ| ಸಿಪಿಐ(ಎಂ) ಸಂಸ್ಥಾಪನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ8 Nov 2025 9:17 PM IST
share
ಕಲಬುರಗಿ| ಸಿಪಿಐ(ಎಂ) ಸಂಸ್ಥಾಪನಾ ದಿನಾಚರಣೆ

ಕಲಬುರಗಿ : ಜಿಲ್ಲೆಯ ಸಿಪಿಐಎಂ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ, "ದುಡಿಯುವ ವರ್ಗವನ್ನು ಸಂಘಟಿಸುವ ಮತ್ತು ಕಾರ್ಮಿಕ ವರ್ಗದ ನೇತೃತ್ವದಲ್ಲಿ ಸಮಗ್ರ ಬದಲಾವಣೆಯ ಕ್ರಾಂತಿಯನ್ನು ನಡೆಸುವ ಸ್ಪಷ್ಟತೆಯೊಂದಿಗೆ ಮತ್ತು ದೇಶದ ಭೂಮಾಲಕ ಬಂಡವಾಳಶಾಹಿ ವ್ಯವಸ್ಥೆಯನ್ನು ಅಮೂಲಾಗ್ರವಾಗಿ ಕಿತ್ತೊಗೆದು ಶ್ರಮಜೀವಿಗಳ ಆಡಳಿತವನ್ನು ತರುವಲ್ಲಿ ಪಕ್ಷವು ಅವಿರತವಾಗಿ ದುಡಿಯಲು ಪಣ ತೊಟ್ಟು ಜನ್ಮ ತಳೆದಿದ್ದು ಸಿಪಿಐಎಂ ಪಕ್ಷವಾಗಿದೆ ಎಂದು ಹೇಳಿದರು.

ಶ್ರಮಜೀವಿಗಳ ಶ್ರಮವನ್ನು ಅತ್ಯಂತ ಕಡಿಮೆ ಬೆಲೆಗೆ ಲೂಟಿಗೈದು ಸಂಪತ್ತಿನ ಮೇಲೆ ನಿಯಂತ್ರಣ ಹೊಂದಿದ ಕಾರ್ಪೋರೆಟ್ ಲೋಕ ಮತ್ತು ಕೋಮುವಾದಿಗಳು -ಮೂಲಭೂತವಾದಿಗಳು ಒಗ್ಗೂಡಿ ದೇಶವನ್ನು ದಿವಾಳಿ ಮಾಡುತ್ತಿವೆ. ಸಿಪಿಐಎಂ ಪಕ್ಷವು ಜನತಾ ಪ್ರಜಾಪ್ರಭುತ್ವಕ್ಕಾಗಿ ಆರ್ಥಿಕ ಲೂಟಿಕೋರ ನೀತಿ ಮತ್ತು ಕೋಮುವಾದದ ದಾಳಿಯ ವಿರುದ್ಧ ರಾಜಿರಹಿತವಾಗಿ ಶ್ರಮಿಸುತ್ತಿದೆ. ತನ್ಮೂಲಕ ಜನತಾ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹೋರಾಡುತ್ತಿದೆ ಎಂದ ಅವರು, ದೇಶದ ಐಕ್ಯತೆ, ಸಮಗ್ರತೆಗಾಗಿ, ಸೌಹಾರ್ದತೆ ಭ್ರಾತೃತ್ವಕ್ಕಾಗಿ ಪಣತೊಡುತ್ತಿದೆ ಎಂದರು.

ಇಂದು ದೇಶದ ಮುಂದೆ ಎಡಪಕ್ಷಗಳ ಐಕ್ಯತೆಯ ಮೂಲಕ ಜನತೆಯ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಅತ್ಯಂತ ಉತ್ತಮ ಆಡಳಿತ ಕೊಟ್ಟಿದ್ದು ಕೇರಳ ಸರಕಾರ. ಕಡುಬಡತನ ಮುಕ್ತ ರಾಜ್ಯವನ್ನಾಗಿ ಇದೇ ನವೆಂಬರ್ ಒಂದರoದು ಕೇರಳದ ಮುಖ್ಯಮಂತ್ರಿಗಳಾದ ಕಾ.ಪಿಣರಾಯ್ ವಿಜಯನ್ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.

ದೇಶವನ್ನು ನುಂಗಿ ನೊಣೆಯುತ್ತಿರುವ ಕೋಮುವಾದ ಮತ್ತು ಕಾರ್ಪೋರೆಟ್ ಕೂಟವು ಪ್ರಜಾಪ್ರಭುತ್ವೀಯ ಎಲ್ಲ ಸಂಸ್ಥೆಗಳನ್ನು ನಿರ್ನಾಮ ಮಾಡಿ ಸರ್ವಾಧಿಕಾರ ಪ್ರದರ್ಶಿಸುತ್ತಿದೆ. ಇದರಿಂದ ದೇಶವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತೆ ಮಾಡಲಾಗಿದೆ. ಈ ಹೊತ್ತಿನಲ್ಲಿ ಪರ್ಯಾಯ ಆರ್ಥಿಕ ನೀತಿಯನ್ನು ಸಿಪಿಐಎಂ ಪಕ್ಷವು ದೇಶದ ಮುಂದೆ ಇಟ್ಟಿದೆ. ಮತಗಳ್ಳತನವು ಒಕ್ಕೂಟ ವ್ಯವಸ್ಥೆಯ ತಳಪಾಯವನ್ನೇ ಅಲ್ಲಾಡಿಸಿ ಬಿಟ್ಟಿದೆ. ಇದು ಅತ್ಯಂತ ಅಪಾಯಕಾರಿಯಾದದ್ದು, ಸಿಪಿಐಎಂ ಪಕ್ಷವು ದೇಶದ ಸಂರಕ್ಷಣೆಗಾಗಿ, ಜನತೆಯ ಹಕ್ಕುಗಳಿಗಾಗಿ ದೇಶದ ಐಕ್ಯತೆಗಾಗಿ, ಭಾವೈಕ್ಯ ಪರಂಪರೆಯನ್ನು ಬಲಪಡಿಸಲು ನಿರಂತರ ಶ್ರಮಿಸಲು ಮುನ್ನುಗ್ಗುತ್ತಿದೆ ಎಂದು ಹೇಳಿದರು.

ಕಾ.ಮೇಘರಾಜ ಕಠಾರೆ ಇವರು ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಡಾ.ಪ್ರಭು ಖಾನಾಪುರೆ, ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಭೀಮಶೆಟ್ಟಿ ಯಂಪಳ್ಳಿ, ಸುಧಮ ಧನ್ನಿ, ಶಾಂತಾ ಘಂಟಿ, ಮಹ್ಮದ್ ಮುಖದ್ದಮ್, ಲವಿತ್ರ ವಸ್ತ್ರದ್, ವಿರುಪಾಕ್ಷಪ್ಪ ತಡಕಲ್ಲ, ಪೀರಪ್ಪ ಪೂಜಾರಿ, ನಿಂಗಪ್ಪ ಹಾವನೂರ, ಮಲ್ಲಮ್ಮ ಕೋಡ್ಲಿ, ಶೇಕಮ್ಮ ಕುರಿ, ಪಾಂಡುರoಗ ಮಾವಿನಕರ್, ಸುಭಾಷ ಹೊಸಮನಿ, ಪ್ರಮೋದ್‌ ಪಾಂಚಾಳ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X