Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆರೆಸ್ಸೆಸ್ ನಡೆಸುವ...

ಕಲಬುರಗಿ | ಆರೆಸ್ಸೆಸ್ ನಡೆಸುವ ಚಟುವಟಿಕೆಗಳನ್ನು ನಿಷೇಧಿಸುವ ಪ್ರಸ್ತಾಪಕ್ಕೆ ಸಿಪಿಐ(ಎಂ) ಬೆಂಬಲ: ಕೆ.ನೀಲಾ

ವಾರ್ತಾಭಾರತಿವಾರ್ತಾಭಾರತಿ14 Oct 2025 9:55 PM IST
share
ಕಲಬುರಗಿ | ಆರೆಸ್ಸೆಸ್ ನಡೆಸುವ ಚಟುವಟಿಕೆಗಳನ್ನು ನಿಷೇಧಿಸುವ ಪ್ರಸ್ತಾಪಕ್ಕೆ ಸಿಪಿಐ(ಎಂ) ಬೆಂಬಲ: ಕೆ.ನೀಲಾ

ಕಲಬುರಗಿ: ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ ನಡೆಸುವ ಚಟುವಟಿಕೆಗಳನ್ನು ನಿಷೇಧಿಸುವ ಪ್ರಸ್ತಾಪವನ್ನು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಬೆಂಬಲಿಸುತ್ತದೆ. ಆದರೆ, ಆರೆಸ್ಸೆಸ್ ಮತ್ತು ಅದರ ಅಂಗಸಂಸ್ಥೆಗಳನ್ನು ಸೈದ್ಧಾಂತಿಕವಾಗಿ ಎದುರಿಸಲು ಸಮಾಜ, ಸರ್ಕಾರ ಸನ್ನದ್ಧವಾಗಬೇಕೆ ಹೊರತು ಸಂಘಟನೆಗಳ ಮೇಲೆ ನಿಷೇಧ ಹೇರುವುದು ಪರಿಹಾರವಲ್ಲ ಎಂದು ಕಲಬುರಗಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಹುತ್ವವೇ ಜೀವಾಳವಾಗಿರುವ ಭಾರತವನ್ನು ಹಿಂದುತ್ವ ವಾದದ ಮೂಲಕ ಏಕ ಧರ್ಮವನ್ನು ಹೇರುವ ಕನಸಿನಲ್ಲಿ ಮುನ್ನಡೆಯುತ್ತಿರುವ ಆರೆಸ್ಸೆಸ್ ಗೆ ಈಗ ಶತಮಾನ. ಈ ಹೊತ್ತಿನಲ್ಲಿ ಅದು ತಾನು ಮತ್ತು ತನ್ನ ಅಂಗಸಂಸ್ಥೆಗಳ ಮೂಲಕ ನಡೆಸಿಕೊಂಡು ಬಂದಿರುವ ಚಟುವಟಿಕೆಗಳನ್ನು ಅವಲೋಕಿಸಿದರೆ ಜನರನ್ನು ಭಾವನಾತ್ಮಕವಾಗಿ ಸೆಳೆದು ಧರ್ಮಾಧಾರಿತ ವಿಭಜನೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಎಳೆ ಮಕ್ಕಳನ್ನು ಕೇಂದ್ರೀಕರಿಸಿಕೊಂಡು ಅವರು ನಡೆಸುವ ಚಟುವಟಿಕೆಗಳು ಭವಿಷ್ಯದ ಭಾರತವನ್ನು ಕೋಮುದ್ವೇಷದ ಜ್ವಾಲಾಮುಖಿಯಾಗಿ ಮಾರ್ಪಡಿಸುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ, ಮೆರವಣಿಗೆಗಳನ್ನು ನಡೆಸಲು ನಿರ್ಬಂಧವಿದೆ ಎಂದು ಹೇಳಿ ತಡೆ ಒಡ್ಡುವ, ಪ್ರಕರಣ ದಾಖಲಿಸುವ ನಗರ ಪೊಲೀಸ್ ಇಲಾಖೆ ಆರ್‌ಎಸ್‌ಎಸ್‌ಗೆ ಪಥಸಂಚಲನಕ್ಕೆ ಅನುಮತಿ ನೀಡಿ ಸಂಚಾರ ನಿರ್ಬಂಧ ಹೇರಿ ಪೊಲೀಸ್ ಬಂದೋಬಸ್ತಿನಲ್ಲಿ ನಡೆಸಿಕೊಟ್ಟ ಘಟನೆ ನಡೆದಿದೆ. ರಾಜ್ಯದಲ್ಲಿ ಸರ್ಕಾರ ಇವರದು, ಅಧಿಕಾರ ಅವರದು ಎಂಬಂತಹ ಸ್ಥಿತಿ ಇದೆ ಎಂದಿದ್ದಾರೆ.

ಇವೆಲ್ಲವನ್ನೂ ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರತಿಪಾದಿಸುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸಲು ಕಂಕಣಬದ್ಧವಾಗಬೇಕು. ಸಹಬಾಳ್ವೆಯ ಸಾಮರಸ್ಯದ ಮೌಲ್ಯಗಳನ್ನು ಸ್ಥಿರವಾಗಿಸಲು ಜನರನ್ನು ಅಣಿಕರೆಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X