Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪುಸ್ತಕ ಓದುವ ಹವ್ಯಾಸ...

Kalaburagi | ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಪ್ರಭಾಕರ ಜೋಶಿ

ವಾರ್ತಾಭಾರತಿವಾರ್ತಾಭಾರತಿ1 Sept 2026 6:14 PM IST
share
Kalaburagi | ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಪ್ರಭಾಕರ ಜೋಶಿ

ಕಲಬುರಗಿ: ಪುಸ್ತಕಗಳು ಜ್ಞಾನ, ಅನುಭವ ಹಾಗೂ ಜೀವನದ ಮಾರ್ಗದರ್ಶಕಗಳಾಗಿವೆ. ಒಂದು ಉತ್ತಮ ಪುಸ್ತಕ ನೆಮ್ಮದಿಯ ಬದುಕಿಗೆ ಬೆಳಕಾಗಿದೆ ಎಂದು ಕಲಬುರಗಿ ರಂಗಾಯಣದ ಮಾಜಿ ನಿರ್ದೇಶಕ ಪ್ರಭಾಕರ ಜೋಶಿ ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಜಾಗೃತಿ ಸಮಿತಿ, ಕಲಬುರಗಿ ಸಂಯುಕ್ತ ಆಶ್ರಯದಲ್ಲಿ ನಗರದ ಮಹಾಲಕ್ಷ್ಮೀ ಲೇಔಟ್‌ನ ಹಿರಿಯ ಸಾಹಿತಿ ನರಸಿಂಗರಾವ್ ಹೇಮನೂರ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ‘ಮನೆಗೊಂದು ಗ್ರಂಥಾಲಯ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಪುಸ್ತಕ ಪ್ರಾಧಿಕಾರ ‘ಮನೆಗೊಂದು ಗ್ರಂಥಾಲಯ’ ಎಂಬ ಉತ್ತಮ ಯೋಜನೆ ರೂಪಿಸಿಕೊಂಡು ಪ್ರತಿಯೊಬ್ಬರ ಮನೆಯಲ್ಲಿ ಗ್ರಂಥಾಲಯ ಇರುವಂತೆ ಮಾಡುತ್ತಿರುವುದು ಶ್ಲಾಘನೀಯ. ಇಂದಿನ ವಿದ್ಯಾರ್ಥಿಗಳು ಮೊಬೈಲ್‌ಗೆ ಹೆಚ್ಚು ಅವಲಂಬಿತರಾಗಿದ್ದು, ಅವರಲ್ಲಿ ಪುಸ್ತಕ ಓದುವ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಪ್ರಾಧಿಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದು ಜೋಶಿ ಹೇಳಿದರು.

ಕಾರ್ಯಕ್ರಮದ ಆಶಯ ನುಡಿಗಳನ್ನಾಡಿದ ರಾಜ್ಯ ಸದಸ್ಯ ಬಿ.ಎಚ್. ನೀರಗುಡಿ, ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಪ್ರದರ್ಶನ, ವಿಚಾರ ಸಂಕಿರಣ, ‘ಅಂಗಳದಲ್ಲಿ ತಿಂಗಳ ಪುಸ್ತಕ’ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಭಾಗದ ಸಾಹಿತಿಗಳ ಸಂಪುಟಗಳನ್ನು ಹೊರತರುವುದರ ಜತೆಗೆ ಶಾಲಾ-ಕಾಲೇಜುಗಳಲ್ಲಿ ‘ನನ್ನ ನೆಚ್ಚಿನ ಪುಸ್ತಕ’, ಪ್ರಬಂಧ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಈ ಭಾಗದ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡುವುದು, ಮನೆ ಮನೆಗಳಲ್ಲಿ ಗ್ರಂಥಾಲಯ ಅನುಷ್ಠಾನಗೊಳಿಸುವುದು ಹಾಗೂ ಗ್ರಂಥಾಲಯ ನಿರ್ಮಿಸಿದವರನ್ನು ಪ್ರಾಧಿಕಾರದ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ಸಾಹಿತಿ ಡಾ. ವಿಜಯಕುಮಾರ್ ಪರುತೆ ಮಾತನಾಡಿ, ಮನೆ ಮನೆಗಳಲ್ಲಿ ಗ್ರಂಥಾಲಯ ನಿರ್ಮಾಣವಾಗಬೇಕು. ಪುಸ್ತಕಗಳ ಓದಿನಿಂದ ಮನುಷ್ಯನ ಜ್ಞಾನ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಮನೆಯಲ್ಲಿ ಗ್ರಂಥಾಲಯ ನಿರ್ಮಿಸಿರುವ ಹಿರಿಯ ಸಾಹಿತಿ ನರಸಿಂಗರಾವ್ ಹೇಮನೂರ ಮಾತನಾಡಿ, ಸಾಹಿತ್ಯಕ್ಕೆ ಸಂಬಂಧಿಸಿದ ಸಾವಿರಾರು ಪುಸ್ತಕಗಳನ್ನು ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ಓದಲು ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಗ್ರಂಥಾಲಯವನ್ನು ಮನೆಯಲ್ಲಿ ನಿರ್ಮಿಸುವ ಯೋಜನೆ ಹೊಂದಿದ್ದು, ಪುಸ್ತಕಗಳು ವಿದ್ಯಾರ್ಥಿಗಳಿಗೆ ಉಪಯೋಗವಾಗಬೇಕು ಎಂಬ ಮನೋಭಾವನೆ ಹೊಂದಿದ್ದೇನೆ ಎಂದು ಹೇಳಿದರು.

ಜಿಲ್ಲಾ ಜಾಗೃತಿ ಸಮಿತಿಯ ಸಂಚಾಲಕರಾದ ಡಾ. ಶೋಭಾದೇವಿ ಚೆಕ್ಕಿ ಕಾರ್ಯಕ್ರಮ ನಿರ್ವಹಿಸಿದರು. ಜಾಗೃತ ಸಮಿತಿ ಸದಸ್ಯ ಡಾ.ಪರ್ವೀನ್ ಸುಲ್ತಾನಾ , ರೇವಣಸಿದ್ದಪ್ಪ ದುಕಾನ, ಶ್ರೀಶೈಲ ಮದಾನೆ, ವಿಜಯಕುಮಾರ್ ರೋಣದ ಇದ್ದರು.ಸುರೇಶ ಪತ್ತಾರ, ಚಂದ್ರಕಾಂತ ಅಡ್ವೊಕೇಟ್, ಶುಭಾ, ರಾಜೇಶ್,ಸಾವಿತ್ರಿ, ಸುನೀತಾ ಮುಂತಾದವರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X