Kalaburagi | ಜಿಲ್ಲಾ ಕಸಾಪ ಸರ್ವ ಸದಸ್ಯರ ಸಭೆಗೆ ನಿರ್ಧಾರ : ಕಸಾಪ ಲೆಕ್ಕಪತ್ರ ಮಂಡನೆಗೆ ಸಿದ್ಧತೆ

ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನಿಂದ ಇಲ್ಲಿಯವರೆಗೆ ನಡೆದ ಹಣಕಾಸಿನ ಖರ್ಚು ವೆಚ್ಚಗಳ ಕುರಿತಾದ ಲೆಕ್ಕಪತ್ರವನ್ನು ಮುಂಬರುವ ದಿನಗಳಲ್ಲಿ ಮಂಡನೆ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ ಹಾಗೂ ಧರ್ಮಣ್ಣಾ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಅಧ್ಯಕ್ಷತೆಯಲ್ಲಿ ಪರಿಷತ್ತಿನ ಸರ್ವ ಸದಸ್ಯರ ಸಮಾವೇಶವನ್ನು ಮುಂಬರುವ ದಿನಗಳಲ್ಲಿ ಮಾಡಲಾಗುತ್ತಿದೆ. ಆ ಸಂದರ್ಭದಲ್ಲಿ ಲೆಕ್ಕ ಪತ್ರಗಳ ವಿವರವನ್ನೊಳಗೊಂಡ ವರದಿಯೊಂದನ್ನು ಸರ್ವ ಸದಸ್ಯರ ಸಮ್ಮುಖದಲ್ಲಿ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ಕು ವರ್ಷಗಳಲ್ಲಿ ಕೈಗೊಂಡ ಕಾರ್ಯಕ್ರಮಗಳು, ಜಿಲ್ಲಾ ಮಟ್ಟದ ಸಮ್ಮೇಳನಗಳು ಹಾಗೂ ವಿಶೇಷ ಸಮ್ಮೇಳನಗಳ ಮಾಹಿತಿಯನ್ನೂ ಸಹ ಪರಿಷತ್ತಿನ ಸದಸ್ಯರಿಗೆ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Next Story




