Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಲ್ಯಾಣ ಕರ್ನಾಟಕವನ್ನು...

Kalaburagi | ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 July 2026 6:55 PM IST
share
Kalaburagi | ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಪ್ರತಿಭಟನೆ

ಕಲಬುರಗಿ : ಎಲ್ ನಿನೊ ಪರಿಣಾಮದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸಮಗ್ರ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ಕಾರ್ಯಕರ್ತರು ಮಂಗಳವಾರ ಹುಮನಾಬಾದ್ ಕ್ರಾಸ್ ಸಮೀಪ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ಕಲಬುರಗಿ ಜಿಲ್ಲೆಯ ಆರ್ಥಿಕತೆ ಪ್ರಮುಖವಾಗಿ ತೊಗರಿ ಬೆಳೆಯನ್ನು ಅವಲಂಬಿಸಿದ್ದು, ಈ ವರ್ಷ ಎಲ್ ನಿನೊ ಪರಿಣಾಮದಿಂದ ಸಮರ್ಪಕ ಮಳೆಯಾಗದೆ ಮುಂಗಾರು ಬಿತ್ತನೆ ಸಂಪೂರ್ಣ ಕುಂಠಿತಗೊಂಡಿದೆ. ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

ವಾಡಿಕೆಯಷ್ಟು ಮಳೆಯಾಗದ ಕಾರಣ ಸಾಲ ಮಾಡಿ ಖರೀದಿಸಿದ ಬೀಜ ಮತ್ತು ರಸಗೊಬ್ಬರಗಳು ಬಳಕೆಯಾಗದೆ ಉಳಿದಿವೆ. ಹಲವೆಡೆ ಬಿತ್ತನೆಯೇ ನಡೆದಿಲ್ಲ. ಬಿತ್ತನೆಯಾದ ಪ್ರದೇಶಗಳಲ್ಲೂ ಹೆಸರು, ಉದ್ದು, ಸೋಯಾಬೀನ್, ಹತ್ತಿ ಹಾಗೂ ತೊಗರಿ ಸೇರಿದಂತೆ ವಿವಿಧ ಬೆಳೆಗಳು ಒಣಗಿ ಹಾನಿಗೊಳಗಾಗಿವೆ ಎಂದು ದೂರಿದರು.

ಭೀಮಾ ನದಿಯಲ್ಲಿ ನೀರಿನ ಕೊರತೆಯಿಂದ ಕಬ್ಬು ಬೆಳೆಗೂ ಹಾನಿಯಾಗುತ್ತಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಿ ಭೀಮಾ ನದಿಗೆ ಹರಿಸಬೇಕು ಎಂದು ಒತ್ತಾಯಿಸಿದರು.

ಬರ ಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ಉಂಟಾಗಿ ಜನರು ನಗರಗಳತ್ತ ವಲಸೆ ಹೋಗುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆ ಎದುರಾಗಿದ್ದು, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಕೇಂದ್ರದ ಅಧ್ಯಯನ ತಂಡವನ್ನು ಕಳುಹಿಸಿ ಬರ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನರಿಗೆ ನೆರವು ನೀಡಬೇಕು ಎಂದು ಆಗ್ರಹಿಸಿದರು.

ಹಿಂಗಾರು ಬಿತ್ತನೆಗೆ ಉಚಿತ ಬೀಜ ಮತ್ತು ರಸಗೊಬ್ಬರ ವಿತರಣೆ, ರಾಷ್ಟ್ರೀಕೃತ ಬ್ಯಾಂಕುಗಳ ಕೃಷಿ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಣೆ ಹಾಗೂ ಸಾಲ ಮನ್ನಾ, ಪ್ರತಿ ಎಕರೆಗೆ 30,000 ರೂ. ಬರ ಪರಿಹಾರ, ಒಣಗಿದ ಕಬ್ಬಿಗೆ ಪ್ರತಿ ಎಕರೆಗೆ 50,000 ರೂ. ಪರಿಹಾರ, ಬೆಳೆ ವಿಮೆ ಹಾಗೂ ಬಾಕಿ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ, ರೈತರ ಆತ್ಮಹತ್ಯೆಗೊಳಗಾದ ಕುಟುಂಬಗಳಿಗೆ ಪರಿಹಾರ, ಗ್ರಾಮೀಣ ಪ್ರದೇಶಗಳಲ್ಲಿ ಬರ ಪರಿಹಾರ ಕಾಮಗಾರಿಗಳ ಆರಂಭ, ಜಾನುವಾರುಗಳಿಗೆ ಗೋಶಾಲೆಗಳ ಸ್ಥಾಪನೆ ಹಾಗೂ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡಿಯಾಳ, ನಾಗೇಂದ್ರ ಥಂಬೆ, ಸಾಜಿದ್ ಅಹ್ಮದ್, ಉಮಾಪತಿ ಪಾಟೀಲ, ಕರೆಪ್ಪ ಕರಗೊಂಡ, ಮಂಜುಳಾ ಭಜಂತ್ರಿ, ಮಹಾದೇವಿ ಭಜಂತ್ರಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ರೈತರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

Tags

drought-hitKalyana KarnatakaKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X