Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಡಿಜಿಟಲ್ ಕ್ರಾಂತಿಯಿಂದ...

ಕಲಬುರಗಿ | ಡಿಜಿಟಲ್ ಕ್ರಾಂತಿಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ: ಗುರುಪ್ರೀತ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ9 Aug 2025 8:20 PM IST
share
ಕಲಬುರಗಿ | ಡಿಜಿಟಲ್ ಕ್ರಾಂತಿಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ: ಗುರುಪ್ರೀತ್ ಸಿಂಗ್

ಕಲಬುರಗಿ: ಡಿಜಿಟಲ್ ಕ್ರಾಂತಿ ಕ್ಲಿನಿಕಲ್ ಸಂಶೋಧನೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದೆ ಎಂದು ಎಸ್‌ಸಿಆರ್‌ಎಂಪಿ ಅಧ್ಯಕ್ಷ ಗುರುಪ್ರೀತ್ ಸಿಂಗ್ ಹೇಳಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾತೋಶ್ರೀ ತಾರಾದೇವಿ ರಾಂಪೂರೆ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸುಟಿಕಲ್ ಸೈನ್ಸ್ ಹಾಗೂ ಕ್ಲೀನಿಕಲ್ ರೀಸರ್ಚ್ ಆಂಡ್ ಮೇಡಿಕಲ್ ಪ್ರೋಪೆಶನಲ್ ಸೋಸೈಟಿ ಹೈದರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಕಾನ್ ಕ್ಲೇವ್ 2025 ಉದ್ಘಾಟಿಸಿ ಮಾತನಾಡುತ್ತಿದ್ದರು.

ಔಷಧ ಅಭಿವೃದ್ಧಿಯಲ್ಲಿ ಸಹ ಡಿಜಿಟಲ್ ಕ್ಷೇತ್ರವು ಕಾರ್ಯವನ್ನು ವೇಗಗೊಳಿಸಿದೆ. ರೋಗಿಗಳ ಆರೋಗ್ಯವನ್ನು ಸುಧಾರಿಸುವ ಮತ್ತು ಸಂಶೋಧನೆಯನ್ನು ಹೆಚ್ಚು ಪರಿಣಾಮಕಾರಿ ಮಾಡಿ ಫಲಿತಾಂಶವನ್ನು ಸುಲಭವಾಗಿಸುವ ಸಾಮರ್ಥ್ಯವನ್ನು ನೀಡುತ್ತಿದೆ. ಈ ಯುಗದ ಬದಲಾವಣೆಗಳಿಗೆ ನಾವು ಹೊಂದಿಕೊಂಡು ಅವುಗಳನ್ನು ಅಳವಡಿಸಿಕೊಳ್ಳುವ ಮೂಲಕ ಮತ್ತು ಸಂಬಂಧಿತ ಸವಾಲುಗಳನ್ನು ಪರಿಹರಿಸುವ ಮೂಲಕ, ಆರೋಗ್ಯ ರಕ್ಷಣೆಯನ್ನು ಮುನ್ನಡೆಸಲು ಕ್ಲಿನಿಕಲ್ ಸಂಶೋಧನೆಯ ಭವಿಷ್ಯವು ಉತ್ತಮ ಭರವಸೆಯನ್ನು ಹೊಂದಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಡಿಜಿಟಲ್ ಯುಗ ಪ್ರಾರಂಭವಾಗಿದೆ ಇದರಿಂದಾಗಿ ಅತೀ ಕ್ಲಿಷ್ಟಕರವಾದ ಆಪರೇಷನ್‌ಗಳನ್ನು ನಿರ್ವಹಿಸುವಲ್ಲಿ ಮನುಷ್ಯ ಸಹಜ ತಪ್ಪುಗಳನ್ನು ತಪ್ಪಿಸುವ ಸಲುವಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ರೊಬೋಟ್‌ಗಳನ್ನು ಗಣಕಯಂತ್ರದ ಮುಖಾಂತರ ನಿರ್ವಹಿಸಿ, ನಿಯಂತ್ರಿಸಿ ಆಪರೇಷನ್ ಪ್ರಕ್ರಿಯೆಯನ್ನು ಸುಲಭಗೊಳಿಸಲಾಗುತ್ತದೆ. ಮನುಷ್ಯ ಸಹಜವಾದ ಬಳಲಿಕೆ, ವಿಶ್ರಾಂತಿ ಇವು ಯಾವುದರ ತೊಂದರೆ ಇಲ್ಲದೆ ರೊಬೋಟಿಕ್ ಸರ್ಜರಿ ಮಾಡಲು ಈ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸಹಕಾರಿಯಾಗಿದೆ. ರೋಗದ ಪತ್ತೆ ಹಚ್ಚುವಿಕೆಯಲ್ಲಿ ಮತ್ತು ರೋಗದ ಚಿಕಿತ್ಸೆಯಲ್ಲಿ ಕೃತಕ ಬುದ್ಧಿಮತ್ತೆ ಬಹಳ ಮುಖ್ಯಪಾತ್ರವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಫಾರ್ಮಕೋವಿಜಿಲನ್ಸ ಕನ್ಸಲ್ಟೆಂಟ್, ಕ್ಲಿನೆಕ್ಸಲ್ ಯು ಕೆ ನ ಮಿಸ್ ಪೂನಮ್ ಕುಮಾರಿ, ಎಸ್ ಸಿ ಆರ್ ಎಂ ಪಿಯ ಮಹ್ಮದ್ ಗಯೂರ್ ಖಾನ್, ಗ್ಲೋಬಲ್ ಕ್ಲೀನಿಕಲ್ ಟ್ರೈಲ್ ಮ್ಯಾನೇಜರ್ ನಿಖೀಲ್ ಭಾನುಮತಿ, ಡಾ ವಿವೇಕ ಗುಪ್ತಾ, ಡಾ ಉಮಾಮಾ ಯಜಧಾನಿ, ರಿಂಪಿ ಸೈನಿ ಸಂಸ್ಥೆಯ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಸಂಚಾಲಕರಾದ ಅನಿಲಕುಮಾರ ಮರಗೋಳ, ಸಾಯಿನಾಥ ಪಾಟೀಲ್, ಆಡಳಿತ ಮಂಡಳಿ ಸದಸ್ಯರಾದ ಡಾ ನಾಗೇಂದ್ರ ಮಂಠಾಳೆ,ಡಾ ಮಹಾದೇವಪ್ಪ ರಾಂಪೂರೆ,ಡಾ ಅನಿಲಕುಮಾರ ಪಟ್ಟಣ, ಡಾ ಕಿರಣ್ ದೇಶಮುಖ್, ನಾಗಣ್ಣ ಘಂಟಿ,ಡಾ ಗುರುಲಿಂಗಪ್ಪ ಪಾಟೀಲ್ ನಿರ್ದೇಶಕರಾದ ಅಶೋಕ್ ಕುಮಾರ್ ದಸ್ತಾಪೂರ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಡಾ.ಪ್ರಕಾಶ್ ಸರಸಂಬಿ ಸ್ವಾಗತಿಸಿದರು ಪ್ರಾಧ್ಯಾಪಕರಾದ ವಾಣಿ ಬಬಲಾದಿ ಕಾರ್ಯಕ್ರಮ ನಿರೂಪಿಸಿದರು ಬಸವರಾಜ ಬೆಂಡಗುಂಬಳಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X