Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪಂಚ ಗ್ಯಾರಂಟಿ ಯೋಜನೆಗಳ...

Kalaburagi | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾದರೆ ಶಿಸ್ತುಕ್ರಮ : ಪಿ.ಟಿ.ಪರಮೇಶ್ವರ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ18 Aug 2026 8:32 PM IST
share
Kalaburagi | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾದರೆ ಶಿಸ್ತುಕ್ರಮ : ಪಿ.ಟಿ.ಪರಮೇಶ್ವರ ನಾಯ್ಕ

ಕಲಬುರಗಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕರ್ತವ್ಯ ಲೋಪ ಅಥವಾ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಹೊಸ ಸಭಾಂಗಣದಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 5,97,957 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಮೃತಪಟ್ಟಿರುವ 9,156 ಫಲಾನುಭವಿಗಳ ಪ್ರಕರಣಗಳಲ್ಲಿ ಈಗಾಗಲೇ 2.14 ಕೋಟಿ ರೂ. ವಸೂಲಿ ಮಾಡಿ ಸರ್ಕಾರಿ ಖಜಾನೆಗೆ ಜಮೆ ಮಾಡಲಾಗಿದೆ. ಬಾಕಿ ಇರುವ ಸುಮಾರು 2.12 ಕೋಟಿ ರೂ. ಮೊತ್ತವನ್ನು ತಕ್ಷಣ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಯುವನಿಧಿ ನೋಂದಣಿಗೆ ಜಾಗೃತಿ :

ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ 32,943 ನಿರುದ್ಯೋಗಿಗಳು ನೋಂದಾಯಿಸಿಕೊಂಡಿದ್ದು, 32,289 ಪದವೀಧರರು ಸೇರಿದಂತೆ 15,690 ಮಹಿಳೆಯರು ಹಾಗೂ 17,253 ಪುರುಷರು ಇದ್ದಾರೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಅರ್ಹ ಯುವಜನರಿಗೆ ಯೋಜನೆಯ ಸೌಲಭ್ಯ ತಲುಪಿಸಬೇಕು ಎಂದರು.

10.50 ಲಕ್ಷಕ್ಕೂ ಅಧಿಕ ಗೃಹಜ್ಯೋತಿ ಫಲಾನುಭವಿಗಳು :

ಗೃಹಜ್ಯೋತಿ ಯೋಜನೆಯಡಿ ಜೆಸ್ಕಾಂ ವ್ಯಾಪ್ತಿಯಲ್ಲಿ 10.50 ಲಕ್ಷಕ್ಕೂ ಅಧಿಕ ಗ್ರಾಹಕರ ನೋಂದಣಿ ಪೂರ್ಣಗೊಂಡಿದೆ. ಪ್ರತ್ಯೇಕ ಮೀಟರ್ ಇಲ್ಲದ ಕಡೆಗಳಲ್ಲಿ ಹೊಸ ಮೀಟರ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 21.22 ಲಕ್ಷ ಫಲಾನುಭವಿಗಳಿಗೆ ಪ್ರತಿ ತಿಂಗಳು 7 ಕೆ.ಜಿ. ಅಕ್ಕಿ ಹಾಗೂ 3 ಕೆ.ಜಿ. ಜೋಳ ವಿತರಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಶಕ್ತಿ ಯೋಜನೆಯಿಂದ ಕೆಕೆಆರ್‌ಟಿಸಿ ಬಸ್‌ಗಳ ಲೋಡ್ ಫ್ಯಾಕ್ಟರ್ ಶೇ.85ಕ್ಕೆ ಏರಿಕೆಯಾಗಿದ್ದು, ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ 400 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಉಚಿತ ಬಸ್ ಪಾಸ್ ಯೋಜನೆಯಡಿ ಜಿಲ್ಲೆಯಲ್ಲಿ 1,85,460 ವಿದ್ಯಾರ್ಥಿಗಳಿಗೆ ಪಾಸ್ ವಿತರಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಬ್ಯಾಂಕ್ ಖಾತೆಗಳ ಎನ್‌ಪಿಸಿಐ ಮ್ಯಾಪಿಂಗ್, ಮತದಾರರ ಗುರುತಿನ ಚೀಟಿ ಹಾಗೂ ತೆರಿಗೆದಾರರೆಂದು ತಪ್ಪಾಗಿ ನಮೂದಾಗಿರುವ ಕಾರಣ ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ವಂಚಿತರಾಗಿರುವ ಬಡ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಪರಮೇಶ್ವರ ನಾಯ್ಕ ಸೂಚಿಸಿದರು.

ಇದೇ ವೇಳೆ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಅಳವಡಿಕೆ, ಸ್ವಚ್ಛತೆ ಕಾಪಾಡುವುದು ಹಾಗೂ ಶೌಚಾಲಯಗಳಿಗೆ ಏಕರೂಪದ ಶುಲ್ಕ ನಿಯಮ ಜಾರಿಗೊಳಿಸುವಂತೆ ಕೆಕೆಆರ್‌ಟಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶರಣಪ್ಪ ಸಂಕನೂರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ನಿರ್ದೇಶಕಿ (ಪ್ರಭಾರ) ಮದುಮತಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ವಿಜಯಕುಮಾರ ಕಟ್ಟಿಮನಿ, ಸೋಮಶೇಖರ ಹಿರೇಮಠ, ನರಸಿಂಹಲು ಕುಂಬಾರ, ನಿರ್ಮಲ ಬರಗಾಲೆ, ಸುರೇಶ ತಿಪ್ಪಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X