Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಕ್ರಮ ಮರಳು ದಂಧೆಗೆ ಕಡಿವಾಣ...

ಕಲಬುರಗಿ | ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಿದ್ದರೆ ಶಿಸ್ತು ಕ್ರಮ : ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ6 May 2025 8:31 PM IST
share
Photo of Metting

ಕಲಬುರಗಿ : ಜಿಲ್ಲೆಯಲ್ಲಿ ಎಲ್ಲಿಯೂ ಅಕ್ರಮವಾಗಿ ಮರಳು ದಂಧೆ ನಡೆಯದಂತೆ ಅಧಿಕಾರಿಗಳು ಕಡಿವಾಣ ಹಾಕಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಟಾಸ್ಕ್ ಫೋರ್ಸ್ ಸಮಿತಿಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಲವು ಬಾರಿ ಸೂಚನೆ ನೀಡಿದ್ದರೂ, ಅಕ್ರಮ ಮರಳು ಸಾಗಾಟ ನಿರಂತರವಾಗಿ ನಡೆಯುತ್ತಿರುವುದೇಕೆ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಅಧಿಕಾರಿಗಳಿಗೆ ಮಾಹಿತಿ ಇಲ್ಲದೆ ಈ ದಂಧೆ ನಡೆಯುತ್ತಿದಿಯೇ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು. ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು. ಇನ್ನು ಈ ವಿಷಯದಲ್ಲಿ ಶೂನ್ಯ ಸಹಿಷ್ಣುತೆ ಸಹ ಸಹಿಸುವುದಿಲ್ಲ ಎಂದರು.

ಪಟ್ಟಾ ಜಮೀನಿನಲ್ಲಿ ಮರಳು ಸ್ಟಾಕ್ ಮಾಡುತ್ತಿರುವ ಪ್ರಕರಣಗಳು ನಮ್ಮ ಕಣ್ಮುಂದಿದ್ದರೂ ಜಮೀನು ಮಾಲಕರ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುತ್ತಲೆ ಗರಂ ಆದ ಜಿಲ್ಲಾಧಿಕಾರಿಗಳು, ಕೂಡಲೇ ಅಂತಹ ಅಕ್ರಮ ಮರಳು ವಶಕ್ಕೆ ಪಡೆದು, ಮಾಲಕರ ಮೇಲೆ ಮುಲಾಜಿಲ್ಲದೆ ಎಫ್.ಐ.ಆರ್. ದಾಖಲಿಸಬೇಕು ಎಂದರು.

ತಾಲೂಕು ಹಂತದಲ್ಲಿ ಸಹಾಯಕ ಆಯುಕ್ತರ ನೇತೃತ್ವದ ಟಾಸ್ಕ್ ಫೋರ್ಸ್ ಕಮಿಟಿಯು ಕಾಲ-ಕಾಲಕ್ಕೆ ಸಭೆ ಕರೆದು ಎಲ್ಲಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದಲ್ಲಿ ಅಕ್ರಮ ಮರಳು ಚಟುವಟಿಕೆ ನಿಲ್ಲಿಸಬಹುದಾಗಿದೆ. ಅಕ್ರಮ ಪ್ರಕರಣ ಎಲ್ಲಿಯೇ ವರದಿಯಾದಲ್ಲಿ ದಂಡ ವಸೂಲಿ ಜೊತೆಗೆ ಪ್ರಕರಣ ಸಹ ದಾಖಲಾಗಬೇಕು. ದಂಡದ ರಶೀದಿ ಹರಿದು ಕೈ ತೊಳೆದುಕೊಳ್ಳುವಂತಿಲ್ಲ. ಇನ್ನು ತಾಲೂಕು ಸಮಿತಿಯ ಎಲ್ಲಾ ಸದಸ್ಯರು ಸಮಾನ ಜವಾಬ್ದಾರಿ ಹೂರಬೇಕು ಮತ್ತು ಸಮನ್ವಯುತೆಯಿಂದ ಸಕ್ರಿಯವಾಗಿ ಕಾರ್ಯನಿರ್ಚಗಿಸಿದಲ್ಲಿ ಅಕ್ರಮ‌ ಮರಳು ದಂಧೆ ನಿಯಂತ್ರಣ ಸಾಧ್ಯ ಎಂದರು.

ಅಕ್ರಮ ಮರಳು ವಶಪಡಿಸಿಕೊಂಡ ನಂತರ ಅದನ್ನು ನಿಗದಿತ ಸ್ಥಳದಲ್ಲಿ ಸಂಗ್ರಹಿಸಿ ಸಾರ್ವಜನಿಕರಿಗೆ ಡಿ.ಎಸ್.ಆರ್ ದರದಂತೆ ಮತ್ತು ಗುತ್ತಿಗೆದಾರರಿಗೆ ಹರಾಜಿನ ಮೂಲಕ ವಿಲೇವಾರಿ ಮಾಡುವ ನೂತನ ವ್ಯವಸ್ಥೆ ಜಾರಿಗೆ ತರಬೇಕು, ಈ ಕುರಿತು ಸಾರ್ವಜನಿಕವಾಗಿ ಮೊದಲೆ ಮಾಹಿತಿ ನೀಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಅವರಿಗೆ ನಿರ್ದೇಶನ ನೀಡಿದ ಡಿ.ಸಿ. ಅವರು, ಮುಂದಿನ 15 ದಿನಗಳ ನಂತರ ಮತ್ತೆ ಸಭೆ ಕರೆದು ಇಂದಿನ ಸಭೆಯ ನಡವಳಿ ಅನುಷ್ಠಾನದ ಕುರಿತು ಪರಾಮರ್ಶೆ ಮಾಡಲಾಗುವುದೆಂದರು.

ಗಣಿಗಾರಿಕೆ ಸ್ಥಳಕ್ಕೆ ಭೇಟಿ ಕೊಡಿ :

ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಕಮಿಟಿ ಸದಸ್ಯರು ಆಗಾಗ ತಮ್ಮ ತಾಲೂಕಿನ ವ್ಯಾಪ್ತಿಯ ಮರಳು ಗುತ್ತಿಗೆ ಲೈಸೆನ್ಸ್ ಪಡೆದ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿ ಕಾನೂನು ಉಲ್ಲಂಘನೆಯಾಗದಿರುವ ಕುರಿತು ಪರಿಶೀಲಿಸಬೇಕು. ಮರಳು ಸಾಗಾಟ ತಪಾಸಣೆಗೆಂದೆ ಪ್ರತ್ಯೇಕ ಚೆಕ್ ಪೋಸ್ಟ್ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಾಕುವ ಅವಶ್ಯಕತೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಮತ್ತು ಎಸ್.ಪಿ.ಅಡ್ಡೂರು ಶ್ರೀನಿವಾಸಲು ತಿಳಿಸಿದರು.

6.17 ಕೋಟಿ ರೂ. ರಾಜಸ್ವ ಸಂಗ್ರಹ :

ಜಿಲ್ಲೆಯಾದ್ಯಂತ ಕಾನೂನುಬದ್ಧ ಮರಳು ಗಣಿಗಾರಿಕೆಯಿಂದ 2023-24 ಹಾಗೂ 2024-25ನೇ ಸಾಲಿನಲ್ಲಿ ಒಟ್ಟಾರೆ 7.72 ಲಕ್ಷ ಮೆಟ್ರಿಕ್ ಟನ್ ಮರಳು ಮಾರಾಟದಿಂದ 9.08 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಿತ ತಪಾಸಣೆ ಪರಿಣಾಮ 2024-25ರಲ್ಲಿ 179 ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳನ್ನು ಪತ್ತೆ ಹಚ್ಚಿ 123 ಪ್ರಕರಣಗಳಲ್ಲಿ 44.36 ಲಕ್ಷ ರೂ. ದಂಡ ವಿಧಿಸಿ ಒಂದು ಪ್ರಕರಣದಲ್ಲಿ ಮೊಕದಮ್ಮೆ ದಾಖಲಿಸಿದೆ. ಅದೇ ರೀತಿ ಒಂದು ಅಕ್ರಮ ಮರಳ ಸಂಗ್ರಹಣೆ ಪ್ರಕರಣದಲ್ಲಿಯೂ ಎಫ್.ಐ.ಆರ್. ದಾಖಲಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಎಂ. ಸಭೆಗೆ ಮಾಹಿತಿ ನೀಡಿದರು.

ಇದಲ್ಲದೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಡಿ 160 ಪ್ರಕರಣಗಳು ದಾಖಲಾಗಿವೆ. ಆರ್.ಟಿ.ಓ ದಿಂದ ಕಳೆದ ವರ್ಷದಲ್ಲಿ 3,291 ವಾಹನ ಪರಿಶೀಲಿಸಿ 159 ಪ್ರಕರಣ ದಾಖಲಿಸಿ 39.83 ಲಕ್ಷ ರೂ. ಮತ್ತು ಕಂದಾಯ ಇಲಾಖೆಯಿಂದ 6.40 ಲಕ್ಷ ರೂ. ದಂಡ ವಸೂಲಿ ಮಾಡಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಲೋಕೋಪಯೋಗಿ ಇಲಾಖೆ ಇ.ಇ. ಸುಭಾಷ ಸೇರಿದಂತೆ ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತ್ ಇ.ಓ.ಗಳು, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X