Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜ.19ರಂದು ಜಿಲ್ಲಾ ಮಟ್ಟದ...

ಕಲಬುರಗಿ | ಜ.19ರಂದು ಜಿಲ್ಲಾ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನ : ತೇಗಲತಿಪ್ಪಿ

ವಾರ್ತಾಭಾರತಿವಾರ್ತಾಭಾರತಿ17 Jan 2025 6:27 PM IST
share
Photo of Press meet

ಕಲಬುರಗಿ : ಮಹಿಳಾ ಸಾಹಿತಿಗಳ ಅಂತರಾಳದಿoದ ಹೊರ ಹೊಮ್ಮುವ ಸಾಹಿತ್ಯಕ್ಕೆ ಪ್ರೋತ್ಸಾಹ ಕೊಟ್ಟು ಬೆಳೆಸಬೇಕೆಂಬ ಆಶಯದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜ.19 ರಂದು ನಗರದ ಕನ್ನಡ ಭವನದ ಆವರಣದಲ ಸಾಹಿತ್ಯ ಮಂಟಪದಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ನಗರದ ಕನ್ನಡ ಭವನದಲ್ಲಿ ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ವಿವರ ನೀಡಿದ ತೇಗಲತಿಪ್ಪಿ, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಜಿಲ್ಲೆಯ ಲೇಖಕಿಯರು ಮಹತ್ವದ ಕೊಡುಗೆ ನೀಡಿದ್ದು, ಜಿಲ್ಲೆಯ ಮಹಿಳಾ ಲೇಖಕರಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದರೆ, ಒಂದು ಮಹಿಳಾ ಸಾಹಿತ್ಯ ಪ್ರಪಂಚ ಸೃಷ್ಠಿಸಲು ಸಾಧ್ಯವಾಗುತ್ತದೆ ಎಂದು ಅವರು ವಿವರಿಸಿದರು.

ಕನ್ನಡ ಸಾಹಿತ್ಯಕ್ಕೆ ಉತ್ತಮ ಕೃತಿಗಳನ್ನು ಕೊಟ್ಟಿರುವ ಸರಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ-ಹಿರಿಯ ಲೇಖಕಿ ಡಾ.ಶಾರದಾದೇವಿ ಜಾಧವ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಡಾ.ಜಾಧವ ಅವರ ಸಾರಥ್ಯದಲ್ಲಿ ಅರ್ಥಪೂರ್ಣ ಸಮ್ಮೇಳನವನ್ನು ನಡೆಸಲು ಸಕಲ ಸಿದ್ಧತೆಗಳು ಕೈಗೊಳ್ಳಲಾಗಿದೆ ಎಂದರು.

ಅಂದು ಬೆಳಗ್ಗೆ 9.15ಕ್ಕೆ ನಗರದ ಮಿನಿ ವಿಧಾನ ಸೌಧದಿಂದ ಕನ್ನಡ ಭವನದ ವರೆಗೆ ವಿವಿಧ ಕಲಾ ಮೇಳಗಳೊಂದಿಗೆ ಸಮ್ಮೇಳನಾಧ್ಯಕ್ಷರ ಸಾಂಸ್ಕೃತಿಕ ಮೆರವಣಿಗೆ ಜರುಗಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಚಾಲನೆ ನೀಡಲಿದ್ದು, ಪರಿಷತ್ತಿನ ಮಹಿಳಾ ಪ್ರತಿನಿಧಿಗಳಾದ ಶಕುಂತಲಾ ಪಾಟೀಲ ಜಾವಳಿ, ಜ್ಯೋತಿ ಕೋಟನೂರ, ಶಿಲ್ಪಾ ಜೋಶಿ, ವಿಶಾಲಾಕ್ಷಿ ಮಾಯಣ್ಣವರ್ ನೇತೃತ್ವ ವಹಿಸಲಿದ್ದಾರೆ.

ಲಿಂಗೈಕ್ಯ ಶರಣೆ ಶಕುಂತಲಾ ಬಸವರಾಜ ಭೀಮಳ್ಳಿ ವೇದಿಕೆಯಡಿಯಲ್ಲಿ ಬೆ.10.45ಕ್ಕೆ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ನಾಡಿನ ಹಿರಿಯ ಸಾಹಿತಿ ಡಾ.ಸರಸ್ವತಿ ಚಿಮ್ಮಲಗಿ ಚಾಲನೆ ಕೊಡಲಿದ್ದು, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಸಮ್ಮೇಳನದ ಸ್ಮರಣ ಸಂಚಿಕೆಯ ಮುಖಪುಟ ಅನಾವರಣಗೊಳಿಸಲಿದ್ದಾರೆ. ಹೆಚ್.ಕೆ.ಇ. ಸಂಸ್ಥೆಯ ಉಪಾಧ್ಯಕ್ಷ ರಾಜು ಬಸವರಾಜ ಭೀಮಳ್ಳಿ, ಸಾಹಿತ್ಯ ಪ್ರೇರಕರಾದ ಸಂತೋಷಿರಾಣಿ ಪಾಟೀಲ ತೆಲ್ಕೂರ, ಕೃಷ್ಣಾಜೀ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಧ್ಯಾಹ್ನ 12.30 ಕ್ಕೆ ನಡೆಯುವ ವರ್ತಮಾನದೊಂದಿಗೆ ಮುಖಾಮುಖಿ ಗೋಷ್ಠಿಯಲ್ಲಿ ಜಿಲ್ಲೆಯ ಮಹಿಳಾ ಸಾಹಿತ್ಯ ದ ಕುರಿತು ಡಾ.ಶೈಲಜಾ ಕೊಪ್ಪರ, ಮಹಿಳಾ ಅಸ್ಮಿತೆ ಯ ಕುರಿತು ಡಾ.ಇಂದುಮತಿ ಪಾಟೀಲ, ಸಮ್ಮೇಳನಾಧ್ಯಕ್ಷರ ಬದುಕು ಬರಹದ ಕುರಿತು ಡಾ.ಶಾಮಲಾ ಎಸ್.ಸ್ವಾಮಿ ಅವರು ಮಾತನಾಡಲಿದ್ದು, ಡಾ.ಅಮೃತಾ ಕಟಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಸವಿತಾ ಸಿರಗೋಜಿ ಆಶಯ ನುಡಿಗಳನ್ನಾಡುವರು. ಡಾ.ನೀಲಾಂಬಿಕಾ ಪೊಲೀಸ್ ಪಾಟೀಲ, ಸೇವಂತಾ ಚವ್ಹಾಣ, ಆರತಿ ಕಡಗಂಚಿ ಸೇಡಮ್, ಪೂರ್ಣಿಮಾ ಜಾನೆ ಉಪಸ್ಥಿತರಿರುವರು.

ಮಧ್ಯಾಹ್ನ 2.15 ಕ್ಕೆ ಮಹಿಳಾ ಕವಿಗೋಷ್ಠಿ ನಡೆಯಲಿದ್ದು, ಡಾ.ಶ್ರೀಶೈಲ್ ನಾಗರಾಳ ಅಧ್ಯಕ್ಷತೆ ವಹಿಸಲಿದ್ದು, ಉಷಾ ಗೊಬ್ಬೂರ ಆಶಯ ನುಡಿಗಳನ್ನಾಡಲಿದ್ದಾರೆ. ವಿದ್ಯಾಸಾಗರ ದೇಶಮುಖ, ಸವಿತಾ ಪಾಟೀಲ ಸೊಂತ, ರೇಣುಕಾ ಸರಡಗಿ ಉಪಸ್ಥಿತರಿರುವರು.

ಕವಿಗಳಾದ ಶಾಂತಾ ಪಸ್ತಾಪೂರ, ಡಾ.ರೇಣುಕಾ ಹಾಗರಗುಂಡಗಿ, ಕವಿತಾ ಹಳ್ಳಿ, ಶಿವಲೀಲಾ ಕಲಗುರ್ಕಿ, ಡಾ. ಸಂಗೀತಾ ಹಿರೇಮಠ, ಗಂಗಮ್ಮಾ ನಾಲವಾರ, ಜಯಶ್ರೀ ಚೌದ್ರಿ, ಲಕ್ಷ್ಮೀದೇವಿ ರತ್ನಾಗಿರಿ, ಶಿವಲೀಲಾ ಧನ್ನಾ, ಜ್ಯೋತಿಬೊಮ್ಮಾ, ಸುರೇಖಾ ಜೇವರ್ಗಿ, ರೇಣುಕಾ ಎನ್., ಜ್ಯೋತಿ ಲಿಂಗoಪಲ್ಲಿ, ಮಂಜುಳಾ ಪಾಟೀಲ, ತ್ರಿವೇಣಿ ಎಸ್.ಕೆ., ಸುನಂದಾ ಕಲ್ಲಾ ಸೇರಿ ಅನೇಕ ಕವಿಗಳು ತಮ್ಮ ಸ್ವ ರಚಿತ ಕವನಗಳ ಮೂಲಕ ಪ್ರಚಲಿತ ವಿದ್ಯಾಮಾನಗಳ ಮೇಲೆ ಬೆಳಕು ಚೆಲ್ಲಲಿದ್ದಾರೆ ಎಂದರು.

ಸಂಜೆ 4.15 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ರಂಗಾಯಣದ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ ಸಮಾರೋಪ ನುಡಿಗಳನ್ನಾಡಲಿದ್ದು, ಹಿರಿಯ ಸಾಹಿತಿ ಡಾ.ನಾಗೇಂದ್ರ ಮಸೂತಿ ಅವರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾ ಗ್ರಾಹಕರ ವೇದಿಕೆ ಅಧ್ಯಕ್ಷೆ ಮಾಲತಿ ರೇಷ್ಮಿ, ದಿಶಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಿವಾನಂದ ಖಜೂರಗಿ, ಮಹಾನಂದಾ ಸಿಂಗೆ, ಕಲ್ಯಾಣಕುಮಾರ ಶೀಲವಂತ ಉಪಸ್ಥಿತರಿರುವರು.

ಮಹಿಳಾ ಕ್ಷೇತ್ರದ ಪ್ರಮುಖರಾದ ಡಾ.ಪರಿಮಳಾ ಅಂಬೇಕರ್, ಡಾ.ಪುಟ್ಟಮಣಿ ದೇವಿದಾಸ, ಡಾ.ಸಾರಿಕಾದೇವಿ ಕಾಳಗಿ, ಡಾ.ಕಾವ್ಯಶ್ರೀ ಮಹಾಗಾಂವಕರ್, ಭಾಗ್ಯಲತಾ ಶಾಸ್ತ್ರಿ, ಅಂಜನಾ ಯಾತನೂರ, ಡಾ.ಪರ್ವೀನ್ ಸುಲ್ತಾನಾ, ಸೀತಾ ಮಲ್ಲಾಬಾದಿ, ಜ್ಯೋತಿ ಮಾರ್ಲಾ, ಗಿರಿಜಾ ಕರ್ಪೂರ, ಅನುಪಮಾ ಅಪಗೊಂಡ, ಡಾ.ಟಿ.ಭಾಗ್ಯಮ್ಮ, ಡಾ.ವಿಶಾಲಾಕ್ಷಿ ಕರೆಡ್ಡಿ ಅವರನ್ನು ಸತ್ಕರಿಸಲಾಗುವುದು ಎಂದು ವಿವರಿಸಿದರು.

ರಾವೂರಿನ ಸಚ್ಚಿದಾನಂದ ಪ್ರೌಢಶಾಲೆ, ಎಕೆಆರ್ ದೇವಿ ಪದವಿಪೂರ್ವ ಕಾಲೇಜು, ಉಪಳಾಂವ ದ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆ, ದೀನದಯಾಳ ಬಾಲಕಿಯರ ವಸತಿ ನಿಲಯ, ಮಹಾತ್ಮಾ ಕಾನ್ವೆಂಟ ಹಿರಿಯ ಪ್ರಾಥಮಿಕ ಶಾಲೆ, ಅಕ್ಕಮಹಾದೇವಿ ಶಾಲೆ, ಮಹಾತ್ಮಾ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಅನೇಕ ಶಾಲಾ ಮಕ್ಕಳಿಂದ ಗೀತೆ, ನೃತ್ಯ, ಕಿರು ರೂಪಕಗಳು ನಡೆಯಲಿವೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ರಾಜೇಂದ್ರ ಮಾಡಬೂಳ, ರವಿಕುಮಾರ ಶಹಾಪುರಕರ್, ಡಾ. ರೆಹಮಾನ್ ಪಟೇಲ್, ಹಣಮಂತಪ್ರಭು, ಗಣೇಶ ಚಿನ್ನಾಕಾರ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X