Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಾರ್ಚ್ ಮಾಸಾಂತ್ಯಕ್ಕೆ...

ಕಲಬುರಗಿ | ಮಾರ್ಚ್ ಮಾಸಾಂತ್ಯಕ್ಕೆ ಜಿಲ್ಲಾವಾರು ಅಭಿಪ್ರಾಯ ಸಂಗ್ರಹಣೆ : ಪ್ರೊ.ಎಂ.ಗೋವಿಂದರಾವ್

ವಾರ್ತಾಭಾರತಿವಾರ್ತಾಭಾರತಿ30 Jan 2025 8:25 PM IST
share
Photo of Protest

ಕಲಬುರಗಿ : ಹಿಂದುಳಿದ ಪ್ರದೇಶದಲ್ಲಿನ ಇದುವರೆಗೆ ಸಾಧಿಸಿದ ಪ್ರಗತಿ ಆಧಾರದ ಮೇಲೆ ಮುಂದೆ ಮಾಡಬೇಕಾದ ಅಭಿವೃದ್ಧಿಗೆ ಹೊಸದಾಗಿ ಸೂಚ್ಯಂಕ ನಿಗದಿಪಡಿಸುವ ನಿಟ್ಟಿನಲ್ಲಿ ಬರುವ ಮಾರ್ಚ್ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿ ಸಂಚರಿಸಿ ಜಿಲ್ಲಾವಾರು ಅಭಿಪ್ರಾಯ ಸಂಗ್ರಹಣೆ ಮೂರ್ಣಗೊಳಿಸಲಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೋ.ಎಂ.ಗೋವಿಂದರಾವ್ ಹೇಳಿದರು.

ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯ ಅಭಿಪ್ರಾಯ ಸಂಗ್ರಹಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಡಿ.ಎಂ.ನಂಜುಂಡಪ್ಪ ಅವರ ವರದಿಯಲ್ಲಿ 35 ಇಂಡೆಕ್ಸ್ ಉಲ್ಲೇಖ ಮಾಡಲಾಗಿತ್ತು. ಇದರ ಆಧಾರದ ಮೇರೆಗೆ ಇಂದಿನ ಕಾಲಘಟಕ್ಕೆ ಅನುಗುಣವಾಗಿ ಇನ್ನು ಹೆಚ್ಚಿನ ಸೂಚ್ಯಂಕಗಳನ್ನು ಸೇರಿಸಿ ಸರಕಾರಕ್ಕೆ ಸೆಪ್ಟೆಂಬರ್ ಒಳಗಾಗಿ ವರದಿ ಸಲ್ಲಿಸಲಾಗುತ್ತದೆ ಎಂದರು.

ಡಾ.ಡಿ.ಎಂ.ನಂಜುಂಡಪ್ಪ ವರದಿಯನ್ವಯ ಇದೂವರೆಗೆ ಪ್ರದೇಶಕ್ಕೆ ಬಿಡುಗಡೆಯಾದ ಸಾವಿರಾರು ಕೋಟಿ ರೂ. ಹಣದಿಂದ ಸಾಧಿಸಿರುವ ಪ್ರಗತಿಯ ನಡುವೆಯೂ ತಲಾ ಆದಾಯ ಕುಸಿದಿದೆ. ಆದಾಯ ಮತ್ತು ಫಲಿತಾಂಶದ ಅಸ್ಥಿರಗಳನ್ನು ಲೆಕ್ಕಕ್ಕೆ ತೆಗೆದುಕೊಂಡು ವರದಿ ನೀಡಲಾಗುತ್ತದೆ. ವಿಶೇಷವಾಗಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಿರುವುದರಿಂದ ಇದರ ಬಗ್ಗೆಯೂ ವರದಿಯಲ್ಲಿ ಉಲ್ಲೇಖ ಮಾಡಲಾಗುವುದು ಎಂದರು.

ಕಳೆದ ಸೆಪ್ಟೆಂಬರ್ ನಿಂದಲೇ ಸಮಿತಿ ಕೆಲಸ ಆರಂಭಿಸಿದೆ. ಪ್ರಶ್ನಾವಳಿಗಳನ್ನು ಇಲಾಖೆಗಗೆ ಕಳುಹಿಸಿದೆ. ಜಿಲ್ಲಾವಾರು ವಿಶ್ಲೇಷಣೆ ಕಾರ್ಯ ಮುಗಿಯುವ ಹಂತದಲ್ಲಿದ್ದು, ತಾಲೂಕುವಾರು ಮಾಡಬೇಕಿದೆ. ವಿಭಾಗ ಮಟ್ಟದಲ್ಲಿ ನಾನು ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿಯ ಸದಸ್ಯರು ಹೋಗಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆ ಮಾಡಲಿದ್ದಾರೆ. ಇದರ ಜೊತೆಗೆ ದತ್ತಾಂಶ ಸಂಗ್ರಹಣ ಕಾರ್ಯ ಭರದಿಂದ ನಡೆಯುತ್ತಿದೆ ಎಂದ ಪ್ರೊ.ಎಂ.ಗೋವಿಂದರಾವ್ ಅವರು, ಸಮಿತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸದಸ್ಯರಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ ವಾಸುದೇವ ಸೇಡಂ ಅವರನ್ನು ನೇಮಕ ಮಾಡಲಾಗಿತ್ತು, ಅವರು ಅನಾರೋಗ್ಯ ಕಾರಣ ನೀಡಿ ರಾಜೀನಾಮೆ ನೀಡಿದ್ದರಿಂದ ಈ ಭಾಗದಿಂದಲೆ ಓರ್ವ ಸದಸ್ಯರನ್ನು ಆಯ್ಕೆ ಮಾಡಲಾಗುವುದು ಎಂದರು.

ನಂಜುಂಡಪ್ಪ ವರದಿಯಂತೆ ಕ.ಕ. ಭಾಗದಲ್ಲಿ 15 ಸಾವಿರ ಕೋಟಿ ಖರ್ಚು :

ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರದೇಶಾಭಿವೃದ್ಧಿ ಮಂಡಳಿಯ ನಿರ್ದೇಶಕ ಡಿ.ಚಂದ್ರಶೇಖರಯ್ಯ ಮಾತನಾಡಿ, ಡಾ.ಡಿ.ಎಂ.ನಂಜುಂಡಪ್ಪ ಅವರ ವರದಿಯಂತೆ 2007-08 ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಎಸ್.ಡಿ.ಪಿ. ಯೋಜನೆಯಡಿ 45 ಸಾವಿರ ಕೋಟಿ ರೂ. ಅನುದಾನ ಖರ್ಚು ಮಾಡಿದ್ದು, ಇದರಲ್ಲಿ 15,000 ಕೋಟಿ ರೂ. ಕಲ್ಯಾಣ ಕರ್ನಾಟಕ ಭಾಗಕ್ಕೆ ಖರ್ಚು ಮಾಡಿದೆ. ಇನ್ನು 371ಜೆ ಅನ್ವಯ ರಚನೆಗೊಂಡ ಕೆ.ಕೆ.ರ್.ಡಿ.ಬಿ. ಮಂಡಳಿಗೆ ಇದೂವರೆಗೆ 19,000 ಕೋಟಿ ರೂ. ಹಂಚಿಕೆ ಮಾಡಿ 13,000 ಕೋಟಿ ರೂ. ಬಿಡುಗಡೆ ಮಾಡಿದೆ. ಇದರಲ್ಲಿ 11,000 ಕೋಟಿ ರೂ. ಖರ್ಚು ಮಾಡಲಾಗಿದೆ. ಕಲಬುರಗಿ ವಿಮಾನ ನಿಲ್ದಾಣ, ಜಯದೇವ ಆಸ್ಪತ್ರೆ ಇದೇ ಅನುದಾನದ ಯೋಜನೆಗಳಾಗಿವೆ ಎಂದರು.

ಇನ್ನು ರಾಜ್ಯದಾದ್ಯಂತ 2.80 ಲಕ್ಷ ಹುದ್ದೆ ಖಾಲಿ ಇದ್ದು, ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ 17 ಸಾವಿರ ಹುದ್ದೆಗಳಿವೆ. ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿಯೇ 371ಜೆ ಅನುಷ್ಠಾನಾಧಿಕಾರಿ ಸಮಿತಿ ಇರುವ ಕಾರಣ, ಹುದ್ದೆ ಭರ್ತಿಗೂ ವೇಗ ಸಿಗಲಿದೆ ಎಂದರು.

ಸಮಿತಿ ಸದಸ್ಯರಾದ ಡಾ.ಸೂರ್ಯನಾರಾಯಣ ಮುಂಗಿಲ್ ಹಿಲ್ಲೆಮನಿ, ಡಾ.ಎಸ್.ಟಿ.ಬಾಗಲಕೋಟೆ, ಕೆ ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಎಂ.ಸುಂದರೇಶ ಬಾಬು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X