Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ತಂದೆ-ತಾಯಿಗಳನ್ನು...

ಕಲಬುರಗಿ | ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳುಹಿಸಬೇಡಿ : ಚರಲಿಂಗ ಮಹಾಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ27 Jan 2025 4:23 PM IST
share
Photo of Program

ಕಲಬುರಗಿ : ಹೆತ್ತು ಹೊತ್ತು ನಮ್ಮನ್ನೆಲ್ಲ ಬೆಳೆಸಿದ ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳುಹಿಸಬೇಡಿ ಎಂದು ಗದ್ದುಗೆ ಮಠದ ಚರಲಿಂಗ ಮಹಾಸ್ವಾಮಿಗಳು ಹೇಳಿದರು.

ಛಪ್ಪರಬಂದಿ ಪ್ರಭಾಕರ ಫೌಂಡೇಶನ್ ವತಿಯಿಂದ ಪ್ರಭಾಕರ ಛಪ್ಪರಬಂದಿ ಸ್ಮರಣಾರ್ಥ ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ ʼಆದರ್ಶ ದಂಪತಿಗಳುʼ ಎಂಬ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ತಂದೆ ತಾಯಿಗಳು ಮಕ್ಕಳ ಏಳಿಗೆಗೆ ಅವಿರತವಾಗಿ ಶ್ರಮಿಸಿ ಉನ್ನತಿ ಬಯಸುತ್ತಾರೆ. ಜತೆಗೆ ಮಕ್ಕಳಲ್ಲಿ ಸಂಸ್ಕಾರ ಬೆಳೆಸಿ ನೀತಿವಂತರನ್ನಾಗಿ ಮಾಡುತ್ತಾರೆ. ಪ್ರಜ್ಞಾವಂತ ಸಮಾಜದಲ್ಲಿ ತಾಯಿ ತಂದೆಗಳ ಋಣ ಎಂದಿಗೂ ತೀರಿಸಲಾಗದು ಎಂದರು.

ಜಿಲ್ಲಾ ಕಸಾಪದ ಸಂಘ ಸಂಸ್ಥೆ ಪ್ರತಿನಿಧಿ ಕಲ್ಯಾಣಕುಮಾರ ಶೀಲವಂತ ಮಾತನಾಡಿ, ತಂದೆ ತಾಯಿ ಗುರು ಹಿರಿಯರನ್ನು ಗೌರವಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ವಾರ್ಥ ಮತ್ತು ಒತ್ತಡದ ಜೀವನದಲ್ಲಿ ಸೇವಾ ಮನೋಭಾವ ಮರೆತು ಜವಾಬ್ದಾರಿಗಳಿಂದ ವಿಮುಖರಾಗುತ್ತಿದ್ದೇವೆ. ಮಾನವೀಯ ಮೌಲ್ಯಗಳನ್ನು ಮರೆತು ಮನುಷ್ಯತ್ವ ಕಳೆದುಕೊಳ್ಳುತ್ತಿದ್ದೇವೆ. ಈ ದಿಸೆಯಲ್ಲಿ ನಮ್ಮ ಹೆತ್ತವರನ್ನು ಸದಾ ಸ್ಮರಿಸುವ ಕಾರ್ಯ ನಾವುಗಳು ಮಾಡಬೇಕಾಗಿದೆ ಎಂದರು.

ಸೇಡಂನ ಆದಂತ ಷಡಕ್ಷರಿ, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರಾದ ಶರಣಪ್ಪ ಸುಲಗುಂಟೆ ಕಾರ್ಯಕ್ರಮ ಉದ್ಘಾಟಿಸಿದರು. ಫೌಂಡೇಶನ್ ಕಾರ್ಯದರ್ಶಿ ಶರಣರಾಜ ಛಪ್ಪರಬಂದಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರರಾದ ಡಾ.ಸುರೇಶ ಶರ್ಮಾ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳುಂಡಗಿ, ಪ್ರಮುಖರಾದ ಸುನೀಲ ಪಾಟೀಲ ಸರಡಗಿ, ರವೀಂದ್ರಕುಮಾರ ಭಂಟನಳ್ಳಿ, ರಾಜೂಗೌಡ ನಾಗನಳ್ಳಿ, ಮಹೇಶ ಹೂಗಾರ, ಪ್ರಭುಲಿಂಗ ಮೂಲಗೆ, ಧರ್ಮರಾಜ ಜವಳಿ ವೇದಿಕೆ ಮೇಲಿದ್ದರು. ಫೌಂಡೇಶನ್ ಮುಖ್ಯಸ್ಥೆ ಸುವರ್ಣಾ ಛಪ್ಪರಬಂದಿ ಅಧ್ಯಕ್ಷತೆ ವಹಿಸಿದ್ದರು.

ಲಕ್ಷ್ಮಿದೇವಿ ಶ್ರೀಧರ ರತ್ನಾಗಿರಿ, ಶಶಿಕಲಾ ಶಿವಶರಣಪ್ಪ ದೇಗಾಂವ, ಭೀಮಬಾಯಿ ಜಗನ್ನಾಥ ಮಂಠಾಳ, ಶೋಭಾ ವಿಠೋಬಾ ಪತ್ತಾರ, ಸಿದ್ದಮ್ಮ ರಾಚೋಟೆಪ್ಪ ಬಿರಾದಾರ ಅವರನ್ನು ಆದರ್ಶ ದಂಪತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವನಾಥ ಪಾಟೀಲ ಗೌನಳ್ಳಿ, ಸುರೇಶ ಡಿ.ಬಡಿಗೇರ, ಮಾಲಾ ಕಣ್ಣಿ, ಅಮೃತಪ್ಪ ಅಣೂರ ಕವಿಗಳು, ಶಿವಾನಂದ ಸುರವಸೆ, ಧರ್ಮಣ್ಣ ಎಚ್.ಧನ್ನಿ, ರೇವಯ್ಯಾ ಸ್ವಾಮಿ, ಬಾಬುರಾವ ಪಾಟೀಲ, ಮಾಲಿಪಾಟೀಲ, ಆದಿನಾಥ ಹೀರಾ, ಶಕುಂತಲಾ ಪಾಟೀಲ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X