Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಡಿಜಿಟಲ್ ಗ್ರಂಥಾಲಯದ...

Kalaburagi | ಡಿಜಿಟಲ್ ಗ್ರಂಥಾಲಯದ ಯೋಜನಾ ಸಲಹೆಗಾರರಾಗಿ ಡಾ.ರಾಘವೇಂದ್ರ ಬೋನಾಳ ನೇಮಕ

ವಾರ್ತಾಭಾರತಿವಾರ್ತಾಭಾರತಿ21 July 2026 8:08 PM IST
share
Kalaburagi | ಡಿಜಿಟಲ್ ಗ್ರಂಥಾಲಯದ ಯೋಜನಾ ಸಲಹೆಗಾರರಾಗಿ ಡಾ.ರಾಘವೇಂದ್ರ ಬೋನಾಳ ನೇಮಕ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಘವೇಂದ್ರ ಬೋನಾಳ ಅವರು ಮಹಾರಾಷ್ಟ್ರದ ಪುಣೆ ಮೂಲದ ಕ್ಯಾಲಿಯೋನಿಕ್ಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಡಿಜಿಟಲ್ ಗ್ರಂಥಾಲಯ, ಜ್ಞಾನ ನಿರ್ವಹಣೆ ಹಾಗೂ ಮಾಹಿತಿ ವಿಜ್ಞಾನ ಯೋಜನೆಗಳ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.

ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಆರಂಭವಾದ ಬಳಿಕ ದೊರೆತಿರುವ ಮೊದಲ ಪ್ರಮುಖ ಸಲಹಾ ಯೋಜನೆ ಇದಾಗಿದ್ದು, ಸುಮಾರು 25 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಆಫ್‌ಶೋರ್ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಯೋಜನೆ ಇದಾಗಿದೆ. ಈ ಮೂಲಕ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಸಂಶೋಧನಾ ಪರಿಣತಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಾನ್ಯತೆ ದೊರೆತಿದೆ.

ಯೋಜನೆಯಡಿ ಡಾ. ರಾಘವೇಂದ್ರ ಬೋನಾಳ ಅವರು ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಗಳು, ಕೃತಕ ಬುದ್ಧಿಮತ್ತೆ (AI) ಆಧಾರಿತ ಗ್ರಂಥಾಲಯ ಸ್ವಯಂಚಾಲನೆ, ಜ್ಞಾನ ನಿರ್ವಹಣಾ ವ್ಯವಸ್ಥೆಗಳು ಹಾಗೂ ಆಧುನಿಕ ಮಾಹಿತಿ ತಂತ್ರಜ್ಞಾನಗಳ ಬಳಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆಗಳನ್ನು ನೀಡಲಿದ್ದಾರೆ.

ಇದಲ್ಲದೆ, ಅವರು ಈಗಾಗಲೇ ಪೇಟೆಂಟ್ ಪಡೆದಿರುವ ಕೃತಕ ಬುದ್ಧಿಮತ್ತೆ ಆಧಾರಿತ ಸಂವಾದಾತ್ಮಕ ಸ್ಮಾರ್ಟ್ ಪುಸ್ತಕ ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳ ಕುರಿತೂ ಈ ಯೋಜನೆಯಡಿ ಅಧ್ಯಯನ ನಡೆಸಲಿದ್ದಾರೆ.

ಡಿಜಿಟಲ್ ಗ್ರಂಥಾಲಯ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ಈ ಸಾಧನೆಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಡಾ. ರಾಘವೇಂದ್ರ ಬೋನಾಳ ಅವರನ್ನು ಅಭಿನಂದಿಸಿದ್ದಾರೆ.

Tags

libraryKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X