Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಮಾನತೆ, ಸ್ವಾತಂತ್ರ್ಯಕ್ಕಾಗಿ...

ಕಲಬುರಗಿ | ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿ ಡಾ.ಅಂಬೇಡ್ಕರ್ : ಶಾಸಕ ಅಲ್ಲಮಪ್ರಭು ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ17 May 2025 4:50 PM IST
share
ಕಲಬುರಗಿ | ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿ ಡಾ.ಅಂಬೇಡ್ಕರ್ : ಶಾಸಕ ಅಲ್ಲಮಪ್ರಭು ಪಾಟೀಲ್‌

ಕಲಬುರಗಿ : ಮನುಷ್ಯರನ್ನು ಮನುಷ್ಯರಂತೆ ಕಾಣದ ಭಾರತದಲ್ಲಿ ಬದುಕಿನ ಕಷ್ಟ, ನಷ್ಟಗಳನ್ನು ಎದುರಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು, ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್‌ ನೆಲೋಗಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ದಲ್ಲಿ ಶನಿವಾರ ಆಯೋಜಿಸಿದ್ದ 2024-25ನೇ ಶೈಕ್ಷಣಿಕ ಸಾಲಿನ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣಾರ್ಥ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು, ಎನ್.ಎಸ್.ಎಸ್, ಎನ್.ಸಿ.ಸಿ, ರೇಂಜರ್ಸ್, ರೋವರ್ಸ್, ರೆಡ್ ಕ್ರಾಸ್, ರೆಡ್ ರಿಬ್ಬನ್ ಘಟಕಗಳು ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಿ ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕು ಎಂದು ಕರೆ ನೀಡಿದರು.

ಚಿಗರಳ್ಳಿ ಮರುಳಶಂಕರ ದೇವರ ಮಠದ ಸಿದ್ಧಬಸವ ಕಬೀರ ಸ್ವಾಮೀಜಿ ಮಾತನಾಡಿ, ಶಿಕ್ಷಣದಿಂದ ಮಕ್ಕಳ ಭವಿಷ್ಯ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳ ಆಯ್ಕೆ ಕ್ರಮಬದ್ಧವಾಗಿದ್ದು, ಆತ್ಮವಿಶ್ವಾಸ ಮತ್ತು ಸತತ ಪ್ರಯತ್ನದ ಮೂಲಕ ಏನನ್ನಾದರೂ ಸಾಧಿಸಬಹುದು ಎಂದು ನುಡಿದರು.

ಲೇಖಕ ಡಾ. ಶಿವರಂಜನ ಸತ್ಯಂಪೇಟೆ, ಬೌದ್ಧ ಚಿಂತಕ ಅನಾಗರಿಕ ಮಿಲಿಂದ ಗುರೂಜಿ ಮಾತನಾಡಿ, ದೇಶದ ಪ್ರಗತಿಗೆ ಶಿಕ್ಷಣ ಮುಖ್ಯ. ಶಿಕ್ಷಣ ಬಾಹ್ಯವಾಗಿ ಮಾತ್ರವಲ್ಲದೆ ಆಂತರಿಕವಾಗಿ ಆತ್ಮವಿಶ್ವಾಸ ಹೆಚ್ಚಿಸಿ ಆತ್ಮಜ್ಞಾನಕ್ಕೆ ದಾರಿ ಮಾಡಿಕೊಡಬೇಕು. ಶಿಕ್ಷಣದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದು ಹೇಳಿದರು.

ಪ್ರಾಚಾರ್ಯೆ ಡಾ.ಸವಿತಾ ತಿವಾರಿ ಅಧ್ಯಕ್ಷತೆ ವಹಿಸಿದ್ದರು. ಡಾ.‌ಟಿ.ವಿ.ಅಡಿವೇಶ, ಡಾ.ವಿಜಯಕುಮಾರ ಸಾಲಿ, ಡಾ.ದವಲಪ್ಪ ಎಚ್., ಡಾ.ಅರುಣಕುಮಾರ ಸಲಗರ, ಡಾ.ರಾಜಶೇಖರ ಮಡಿವಾಳ, ವಿಜಯಲಕ್ಷ್ಮೀ, ಶಿವಾನಂದ ಸ್ವಾಮಿ, ಡಾ.ನಾಗಪ್ಪ ಗೋಗಿ ವೇದಿಕೆಯಲ್ಲಿದ್ದರು.

ಇದೇ ವೇಳೆಯಲ್ಲಿ ಕ್ರೀಡಾಕೂಟ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನ ಹಾಗೂ ಪ್ರಶಸ್ತಿ ಪಡೆದ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು.

ಡಾ.ಬಲಭೀಮ ಸಾಂಗ್ಲಿ ನಿರೂಪಿಸಿದರು. ಡಾ.ರಾಜಕುಮಾರ ಸಲಗರ ಸ್ವಾಗತಿಸಿದರು. ಡಾ.ಶ್ರೀಮಂತ ಹೋಳಕರ ಪ್ರಾಸ್ತಾವಿಕ ಮಾತನಾಡಿದರು. ಸಿದ್ಧಾರ್ಥ ಚಿಮ್ಮಾ ಇದಲಾಯಿ ಪ್ರಾರ್ಥನೆಗೀತೆ ಹಾಡಿದರು. ಡಾ.ವಿಶ್ವನಾಥ ಬೆಣ್ಣೂರ, ಡಾ.ಸುರೇಶ ಎಸ್. ಮಾಳೆಗಾಂವ, ಡಾ.ನಾಗಜ್ಯೋತಿ, ಡಾ.ಶ್ಯಾಮಲಾ ಸ್ವಾಮಿ, ಡಾ.ನಿವೇದಿತಾ ಸ್ವಾಮಿ, ಈರಮ್ಮ ಪಾಟೀಲ, ಡಾ.ರಮೇಶ ಪೋತೆ, ಡಾ.ಸುರೇಂದ್ರ ಕೆರಮಗಿ ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X