Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ನಾಗರಿಕ ಸ್ನೇಹಿಯಾಗಿ...

ಕಲಬುರಗಿ| ನಾಗರಿಕ ಸ್ನೇಹಿಯಾಗಿ ಇ-ಸ್ವತ್ತು ತಂತ್ರಾಂಶ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ6 Dec 2025 8:38 PM IST
share
ಕಲಬುರಗಿ| ನಾಗರಿಕ ಸ್ನೇಹಿಯಾಗಿ ಇ-ಸ್ವತ್ತು ತಂತ್ರಾಂಶ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ನಿಯಮಗಳು-2025ರ ಅಧಿಸೂಚನೆ ಹೊರಡಿಸಿದ್ದು, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ನಾಗರಿಕ ಸ್ನೇಹಿಯಾಗಿ ಮಾರ್ಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಡಿ.1ರಂದು ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯ ಮಂತ್ರಿಗಳು ಇ-ಸ್ವತ್ತು 2.O ತಂತ್ರಾಂಶಕ್ಕೆ ಚಾಲನೆ ನೀಡಿದ್ದು, ನಿಯಮಗಳಿಗೆ ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಹಾಯಕ್ಕಾಗಿ ಇಲಾಖೆಯಿಂದ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಪ್ರತಿದಿನ ಮೂರು ಸಾವಿರಕ್ಕೂ ಹೆಚ್ಚು ಕರೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗುತ್ತಿದೆ ಎಂದು ಹೇಳಿದರು.

ಸಹಾಯವಾಣಿಗೆ ಸಾರ್ವಜನಿಕರಿಂದ ಸ್ವೀಕೃತಿಯಾಗುತ್ತಿರುವ ಪ್ರಶ್ನೆಗಳಲ್ಲಿ ಹೆಚ್ಚಿನ ಪ್ರಶ್ನೆಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಅನುಮೋದನೆ ಪ್ರಕ್ರಿಯೆ, ಆಸ್ತಿ ವರ್ಗೀಕರಣವನ್ನು ಆಯ್ಕೆ ಮಾಡುವ ವಿಧಾನ, ಇ-ಸ್ವತ್ತು ನಮೂನೆ ವಿತರಿಸಲು ನಿಗದಿಯಾಗಿರುವ ಕಾಲಾವಧಿ ಹಾಗೂ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದ್ದಾಗಿರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇ-ಸ್ವತ್ತು ಪ್ರಕ್ರಿಯೆ ಹಾಗೂ ತಂತ್ರಾಂಶವನ್ನು ಹೆಚ್ಚು ನಾಗರಿಕ ಸ್ನೇಹಿಯಾಗಿ ಅನುಷ್ಠಾನಗೊಳಿಸಲು ಇಲಾಖೆ ಬದ್ಧವಾಗಿದೆ. ಅದರನ್ವಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿರುತ್ತದೆ. ಇವರೆಗೆ 365 ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸ್ವೀಕರಿಸಲಾಗಿದ್ದು ಮತ್ತಷ್ಟು ಸರಳೀಕರಿಸಲು ಕ್ರಮವಹಿಸಲಾಗುತ್ತಿದೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿರುವುದಿಲ್ಲ. ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತ ಸಮಸ್ಯೆ, ಸಂದೇಹಗಳನ್ನು ಬಗೆಹರಿಸಲು ಸರಕಾರ ಬದ್ದವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X