Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ʼರಾಷ್ಟ್ರಕೂಟʼ ಹೆಸರಿನಲ್ಲಿ...

ಕಲಬುರಗಿ | ʼರಾಷ್ಟ್ರಕೂಟʼ ಹೆಸರಿನಲ್ಲಿ ಪ್ರಾಧಿಕಾರ ಸ್ಥಾಪಿಸಿ: ಮಹಿಪಾಲರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ3 Feb 2026 10:54 PM IST
share
ಕಲಬುರಗಿ | ʼರಾಷ್ಟ್ರಕೂಟʼ ಹೆಸರಿನಲ್ಲಿ ಪ್ರಾಧಿಕಾರ ಸ್ಥಾಪಿಸಿ: ಮಹಿಪಾಲರೆಡ್ಡಿ

ಕಲಬುರಗಿ : ಕನ್ನಡದ ಮೊದಲ ಲಾಕ್ಷಣಿಕ ಗ್ರಂಥ ‘ಕವಿರಾಜಮಾರ್ಗ’ ನೀಡುವ ಮೂಲಕ ಕನ್ನಡ ಸಾಹಿತ್ಯಕ್ಕೆ ದಿಕ್ಕು ತೋರಿದ ನೃಪತುಂಗ ಅಮೋಘವರ್ಷರ ಆಡಳಿತದ ‘ರಾಷ್ಟ್ರಕೂಟ’ ವಂಶದ ಹೆಸರಿನಲ್ಲಿ ಪ್ರಾಧಿಕಾರ ಅಥವಾ ಪ್ರತಿಷ್ಠಾನವನ್ನು ಸ್ಥಾಪಿಸಬೇಕು ಎಂದು ಹಿರಿಯ ಸಾಹಿತಿ, ಪತ್ರಕರ್ತ, ನಟ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಕಲಬುರಗಿ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಸೇಡಂ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ಪತ್ರ ಬರೆದಿರುವ ಅವರು, ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿ ಕನ್ನಡಕ್ಕೆ ಅಪಾರ ಕೀರ್ತಿ ತಂದುಕೊಟ್ಟ ಶ್ರೀವಿಜಯನ ‘ಕವಿರಾಜಮಾರ್ಗ’ ಕೃತಿಯು ಕನ್ನಡ ಸಾಹಿತ್ಯ ಹಾಗೂ ಇತಿಹಾಸ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ಎಂದು ಹೇಳಿದ್ದಾರೆ.

ಕನ್ನಡವನ್ನು ವಿಶ್ವಮಾನ್ಯತೆಯ ಹಂತಕ್ಕೆ ತಲುಪಿಸುವಲ್ಲಿ ಈ ಗ್ರಂಥದ ಪಾತ್ರ ಅತ್ಯಂತ ಮಹತ್ವದ್ದಾಗಿರುವುದರಿಂದ, ರಾಷ್ಟ್ರಕೂಟ ಹೆಸರಿನಲ್ಲಿ ಪ್ರಾಧಿಕಾರ ಅಥವಾ ಪ್ರತಿಷ್ಠಾನ ಸ್ಥಾಪಿಸುವುದು ಕನ್ನಡದ ಸಾರಸ್ವತ ಲೋಕಕ್ಕೆ ದೊಡ್ಡ ಉತ್ತೇಜನವಾಗಲಿದೆ ಎಂದು ತಿಳಿಸಿದ್ದಾರೆ.

ಕಾವ್ಯ ಕ್ಷೇತ್ರಕ್ಕೆ ‘ರಾಜಮಾರ್ಗ’ವನ್ನು ನಿರ್ಮಿಸಿದ ರಾಷ್ಟ್ರಕೂಟರ ಹೆಸರಿನಲ್ಲಿ ಸರ್ಕಾರ ಒಂದು ಸಂಸ್ಥೆಯನ್ನು ಸ್ಥಾಪಿಸಿ, ಅದರ ಮೂಲಕ ಸಾಹಿತ್ಯ, ಸಂಶೋಧನೆ, ಇತಿಹಾಸ ಅಧ್ಯಯನ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಂಬಂಧಿಸಿದ ಅನೇಕ ಕಾರ್ಯಕ್ರಮಗಳನ್ನು ರೂಪಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅದೇ ರೀತಿ, ಕನ್ನಡ ಸಾಹಿತ್ಯದ ಮೊದಲ ಲಾಕ್ಷಣಿಕ ಗ್ರಂಥ ಎಂಬ ಐತಿಹಾಸಿಕ ಮಹತ್ವದ ಹಿನ್ನೆಲೆಯಲ್ಲಿ ‘ರಾಷ್ಟ್ರಕೂಟ’ ಹೆಸರಿನಲ್ಲಿ ಸಾಹಿತ್ಯ–ಇತಿಹಾಸ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶಸ್ತಿಯನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ. ಜೊತೆಗೆ, ರಾಷ್ಟ್ರಕೂಟರ ಆಡಳಿತ ಕಾಲದ ರಾಜಧಾನಿಯಾಗಿದ್ದ ಮಳಖೇಡ (ಮಾನ್ಯಖೇಟ)ವನ್ನು ವಿಶ್ವಮಾನ್ಯತೆಯ ಮಟ್ಟಕ್ಕೆ ಅಭಿವೃದ್ಧಿಪಡಿಸಬೇಕು ಎಂದು ಸರ್ಕಾರವನ್ನು ಕೋರಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X