Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬರ ಪಟ್ಟಿಯಿಂದ ಆಳಂದ...

Kalaburagi | ಬರ ಪಟ್ಟಿಯಿಂದ ಆಳಂದ ತಾಲೂಕು ಕೈಬಿಟ್ಟಿರುವುದು ಖಂಡನೀಯ: ಹರ್ಷಾ ಎಸ್. ಗುತ್ತೇದಾರ

ವಾರ್ತಾಭಾರತಿವಾರ್ತಾಭಾರತಿ27 Aug 2026 5:46 PM IST
share
Kalaburagi | ಬರ ಪಟ್ಟಿಯಿಂದ ಆಳಂದ ತಾಲೂಕು ಕೈಬಿಟ್ಟಿರುವುದು ಖಂಡನೀಯ: ಹರ್ಷಾ ಎಸ್. ಗುತ್ತೇದಾರ

ಕಲಬುರಗಿ: ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಆಳಂದ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಆಳಂದವನ್ನು ಕೈಬಿಟ್ಟಿರುವುದು ಖಂಡನೀಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾ ಎಸ್. ಗುತ್ತೇದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ತಾಲೂಕಿನ ಬಹುತೇಕ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಜಲಾಶಯಗಳು, ಕೆರೆ-ಕಟ್ಟೆಗಳು ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಕೈಕೊಟ್ಟಿರುವ ಪರಿಣಾಮ ರೈತರು ಮಾಡಿರುವ ಕೃಷಿ ವೆಚ್ಚವೂ ವ್ಯರ್ಥವಾಗುವ ಆತಂಕ ಎದುರಾಗಿದೆ ಎಂದು ತಿಳಿಸಿದ್ದಾರೆ.

ಆಳಂದ ತಾಲೂಕಿನ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಶಾಸಕ ಬಿ.ಆರ್. ಪಾಟೀಲ ವಿಫಲರಾಗಿದ್ದಾರೆ. ಅವರ ರೈತಪರ ಕಾಳಜಿ ಕೇವಲ ಭಾಷಣಕ್ಕೆ ಸೀಮಿತವಾಗಿದ್ದು, ಕಾರ್ಯರೂಪದಲ್ಲಿ ಕಾಣುತ್ತಿಲ್ಲ. ಬರದ ವಿಚಾರದಲ್ಲಿ ಶಾಸಕರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಸ್ಥಳೀಯ ವಾಸ್ತವಾಂಶಗಳನ್ನು ಪರಿಗಣಿಸಬೇಕಿತ್ತು. ಆದರೆ ಆಳಂದ ತಾಲೂಕಿನ ರೈತರ ಸಂಕಷ್ಟವನ್ನು ಕಡೆಗಣಿಸಿ ಬರ ಪಟ್ಟಿಯಿಂದ ತಾಲೂಕನ್ನು ಹೊರಗಿಟ್ಟಿರುವುದು ರೈತ ವಿರೋಧಿ ನಿರ್ಧಾರವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಆಳಂದ ತಾಲೂಕಿನ ರೈತರಿಗೆ ಮಳೆ ಕೊರತೆಯ ಪರಿಣಾಮ ಕಣ್ಣಿಗೆ ಕಾಣುವಂತಿದೆ. ಹೊಲಗಳಲ್ಲಿ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆಯ ಆತಂಕವೂ ಎದುರಾಗಿದೆ. ಸರ್ಕಾರ ಕಚೇರಿ ದಾಖಲೆಗಳಿಗೆ ಮಾತ್ರ ಸೀಮಿತವಾಗದೆ ಗ್ರಾಮೀಣ ಪ್ರದೇಶಗಳಿಗೆ ತೆರಳಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಹರ್ಷಾ ಎಸ್. ಗುತ್ತೇದಾರ ಆಗ್ರಹಿಸಿದ್ದಾರೆ.

ತಕ್ಷಣವೇ ಆಳಂದ ತಾಲೂಕಿನ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ, ಜಲಮೂಲಗಳ ಸ್ಥಿತಿ ಹಾಗೂ ರೈತರ ಆರ್ಥಿಕ ನಷ್ಟದ ಕುರಿತು ಪುನರ್‌ಸಮೀಕ್ಷೆ ನಡೆಸಬೇಕು. ಆಳಂದ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ, ಅರ್ಹ ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ಸರ್ಕಾರದ ಬರ ಪರಿಹಾರ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X