Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಪ್ರವಾಹ | ತುರ್ತು ಪರಿಹಾರ,...

ಕಲಬುರಗಿ ಪ್ರವಾಹ | ತುರ್ತು ಪರಿಹಾರ, ಮುಂಜಾಗ್ರತಾ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ28 Sept 2025 8:34 PM IST
share
ಕಲಬುರಗಿ ಪ್ರವಾಹ | ತುರ್ತು ಪರಿಹಾರ, ಮುಂಜಾಗ್ರತಾ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಅತಿವೃಷ್ಟಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ ಒದಗಿಸಲು ನಿರ್ಧರಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ 2025ರ ಆಗಸ್ಟ್ ತಿಂಗಳಲ್ಲಿ ಶೇ.69 ರಷ್ಟು ಹಾಗೂ ಸೆಪ್ಟೆಂಬರ್ ತಿಂಗಳ ಮೊದಲ 28 ದಿನಗಳಲ್ಲಿ ಶೇ.72ರಷ್ಟು ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದ್ದು, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದ ಆಗಿರುವ ಪರಿಣಾಮಗಳು ಹಾಗೂ ಅವುಗಳನ್ನು ಸಮರ್ಪಕವಾಗಿ ಎದುರಿಸುವ ಸಂಬಂಧ ಕಲುಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಲವು ಸೂಚನೆಗಳು ನೀಡಿರುತ್ತಾರೆ.

ಕಲಬುರಗಿ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡು, ಪ್ರವಾಹ ಪೀಡಿತ ಸ್ಥಳಗಳನ್ನು ಕುದ್ದು ವೀಕ್ಷಿಸಿದ ನಂತರ ಸಚವರು, ಕಲಬುರಗಿ ಜಿಲ್ಲೆಯ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ.

► ನದಿ, ಹಳ್ಳ, ಕೆರೆ ದಡದಲ್ಲಿರುವ ಗುಡಿ, ಮಸೀದಿ, ಚರ್ಚ್ ಮುಂತಾದ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಪ್ರಾರ್ಥನೆ ಹಾಗೂ ಭಾಗಿನ ಸಲ್ಲಿಸುವವರನ್ನು ಮನವೊಲಿಸಿ ನದಿ, ಹಳ್ಳ, ಕೆರೆ ದಡದಲ್ಲಿ ತೆರಳದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳುವುದು.

►ನಿರಂತರ ಮಳೆಯಿಂದ ಅಪಾಯವಿರುವ ಮನೆ, ಶಾಲೆಗಳು ಹಾಗೂ ಇತರೆ ಕಟ್ಟಡಗಳ ಗೋಡೆಗಳು ಕುಸಿಯುವ ಸಾಧ್ಯತೆ ಇರುವದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುತ್ತದೆ.ಆದ್ದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ಮುನ್ನೆಚ್ಚರಿಕೆಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಕ್ರಮವಹಿಸುವುದು.

►ನದಿ ತೀರದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅಪಾಯವಿರುವ ನದಿ, ಹಳ್ಳಗಳಲ್ಲಿ ಈಜಾಡುವುದು ಮತ್ತು ಫೋಟೋ, ಸೆಲ್ಫಿ ತೆಗೆಯದಂತೆ ಸೂಚಿಸುವುದು.

► ಮೀನುಗಾರರು ಮೀನು ಹಿಡಿಯಲು ನದಿಯಲ್ಲಿ ಹೋಗದಂತೆ ಮುನ್ನಚರಿಕೆ ಕ್ರಮಗೊಳ್ಳುವುದು.

► ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ, ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆ ವಹಿಸುವುದು.

► ಜಲಾಶಯದಿಂದ ನೀರು ಬಿಡುವ ಬಗ್ಗೆ ಮಾಹಿತಿ ಬಂದ ಕೂಡಲೇ ನದಿ ಪಾತ್ರದಲ್ಲಿರುವ ಗ್ರಾಮಗಳ ಸಾರ್ವಜನಿಕರಿಗೆ ಮುಂಚಿತವಾಗಿ ತಿಳುವಳಿಕೆ ನೀಡಲು ಡಂಗುರದ ಮೂಲಕ ಪ್ರಚಾರ ಮಾಡಲು ಮತ್ತು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವುದು.

► ಅತಿವೃಷ್ಠಿಯಿಂದ ನೀರು ತುಂಬಿ ಸಂಚಾರಕ್ಕೆ ಅಡ್ಡಿಯಾಗಿರುವ ಸೇತುವೆಗಳಿಗೆ ಬ್ಯಾರಿಕೇಡ್ ಗಳನ್ನು ಅಳವಡಿಸುವುದು ಮತ್ತು ಜನರು ಅಂತಹ ಸೇತುವೆಗಳ ಮೇಲೆ ಸಂಚರಿಸದಂತೆ ನಿಗಾ ವಹಿಸುವುದು.

► ಪ್ರವಾಹಕ್ಕೆ ಸಿಲುಕಿ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಮುಂಜಾಗರೂಕತೆಯಾಗಿ ಡಂಗೂರ ಸಾರುವುದು, ಮೈಕ್ ಮೂಲಕ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮವಹಿಸುವುದು.

►ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಅಧಿಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಹಾಗೂ ತುರ್ತು ಪರಿಹಾರ ನೀಡಲು ನಿಯಮಾನುಸಾರ ಕ್ರಮ ವಹಿಸಬೇಕು.

ಬೆಳೆವಿಮೆ:

2025ರ ಮುಂಗಾರು ಹಂಗಾಮಿನಲ್ಲಿ 3.01 ಲಕ್ಷ ರೈತ ಬಾಂಧವರು ನೊಂದಣಿ ಮಾಡಿಸಿದ್ದು, ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿರುವ ಕಾರಣಕ್ಕೆ ಇಲ್ಲಿಯವರೆಗೆ 1.78 ಲಕ್ಷ ರೈತ ಬಾಂದವರು ಸ್ಥಳೀಯ ವಿಪತ್ತು ಅಡಿಯಲ್ಲಿ ಶೇ.59ರಷ್ಟು ರೈತ ಬಾಂಧವರು ದೂರು ಸಲ್ಲಿಸಿರುವ ಪ್ರಯುಕ್ತ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಹಾನಿ ಸಮಿಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಕೆಲವೇ ದಿವಸಗಳಲ್ಲಿ ಬೆಳೆ ಹಾನಿಯಾದ ರೈತ ಬಾಂಧವರಿಗೆ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನದಿಗಳಿಂದ ಅಧಿಕ ನೀರು ಹೊರಕ್ಕೆ:

ಮಹಾರಾಷ್ಟ್ರ ರಾಜ್ಯದ ಉಜ್ಜನಿ ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ 1.84 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಈ ನೀರು ಅಫಜಲಪೂರ ತಾಲ್ಲೂಕಿನ ಭೀಮಾ ಸೊನ್ನ ಬ್ಯಾರೇಜಿಗೆ ಇಂದು ಬಂದು ತಲುಪುತ್ತದೆ.

ಈಗಾಗಲೇ ಸೊನ್ನ ಬ್ಯಾರೇಜ್ ನಿಂದ 2.80 ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ, ಉಜ್ಜನಿ ಮತ್ತು ಸಿನಾ ಜಲಾಶಯದ ನೀರು ಬಂದ ನಂತರ ಸೊನ್ನ ಬ್ಯಾರೇಜಿನಿಂದ ಇನ್ನೂ ಹೆಚ್ಚಿನ ಗೇಟ್ಗಳ ಮೂಲಕ ಭೀಮಾ ನದಿಗೆ ನೀರು ಹರಿಬಿಡಲಾಗುವುದು ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಬೆಣ್ಣೆತೋರಾ ಜಲಾಶಯದಿಂದ 12,000 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ಮಳೆಯ ಮುನ್ಸೂಚನೆ ಇರುವ ಕಾರಣ ಜಲಾಶಯದ ಒಳಹರಿವು ಹೆಚ್ಚಾಗುವ ಸಾಧ್ಯತೆ ಯಾವುದೇ ಸಮಯದಲ್ಲಿ ಜಲಾಶಯದಿಂದ ಇನ್ನು ಹೆಚ್ಚಿನ ನೀರು ನದಿಗೆ ಹರಿಸಲಾಗುವುದು. ಆದ್ದರಿಂದ ಮುಂದಿನ ದಿನಗಳಲ್ಲಿ ಸೊನ್ನ ಮತ್ತು ಬೆಣ್ಣತ್ತೋರ ಬ್ಯಾರೇಜ್ ಕೆಳಗಡೆ ಇರುವ ನದಿ ಪಾತ್ರದ ಜನರು ಮುಂಜಾಗರೂಕತೆವಹಸಿಲು ಸೂಚಿಸುವಂತೆ ಜಿಲ್ಲೆ, ತಾಲೂಕು, ಹೋಬಳಿ, ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

ಮಳೆಯಿಂದ ಮೃತರಾದವರ ಕುಟುಂಬಗಳ ಅವಲಂಬಿತರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಆಗಬೇಕು, ಆಸ್ಪತ್ರೆಗಳಲ್ಲಿ ಅವಶ್ಯ ಔಷಧಿಗಳಳು, ಒ.ಆರ್.ಎಸ್. ಫಸ್ಟ್ಎಯ್ಡ್ ಸಾಮಗ್ರಿಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮನೆ ಕಳೆದುಕೊಂಡಿರುವ ನಿರಾಶ್ರಿತರನ್ನು ಆಯಾ ಗ್ರಾಮಗಳ ಪರಿಮಿತಿಯೊಳಗಿನ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಬೇಕು, ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ವಾಸ ಮಾಡುವವರನ್ನು ಸಹ ಕಾಳಜಿ ಕೇಂದ್ರಗಳಲ್ಲಿರಿಸಬೇಕು, ಬಿ.ಇ.ಒಗಳು ತೊಂದರೆಗೀಡಾದ ಗ್ರಾಮಗಳಿಗೆ ಭೇಟಿ ಕಟ್ಟಡಗಳು ಶಿಥಿಲವಾಗಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು, ಹೊಳೆ ಹರಿಯುವ ಹಾಗೂ ನೀರು ನಿಂತ ಸ್ಥಳಗಳತ್ತ ಮಕ್ಕಳನ್ನು ಕಳುಹಿಸದಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು, ಪ್ರವಾಹಕ್ಕೆ ತುತ್ತಾಗಿರುವ ನದಿ ಹಾಗೂ ಹೊಳೆಗಳತ್ತ ಹೋಗದಂತೆ ಗ್ರಾಮಸ್ಥರು ಜಾಗ್ರತೆವಹಿಸಬೇಕು ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರವಾಹ ಸಂದರ್ಭದಲ್ಲಿ ರಕ್ಷಣೆ ಕಾರ್ಯಗಳನ್ನು ಕೈಗೊಳ್ಳಲ್ಲು 20 ಅಧಿಕಾರಿಗಳ ಒಳಗೊಂಡ ಪರಿಣಿತ 1 NDRF ತಂಡವನ್ನು ವಾಡಿ ಗ್ರಾಮದಲ್ಲಿ ಇರಿಸಲಾಗಿದೆ.

ಪ್ರವಾಹ ಸಂದರ್ಭದಲ್ಲಿ ರಕ್ಷಣೆ ಕಾರ್ಯಗಳನ್ನು ಕೈಗೊಳ್ಳಲ್ಲು ಒಂದು SDRF ತಂಡವನ್ನು ಕಲಬುರಗಿಯಲ್ಲಿ ಇರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X