Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪ್ರತಿಭಾವಂತ 10...

ಕಲಬುರಗಿ | ಪ್ರತಿಭಾವಂತ 10 ವಿದ್ಯಾರ್ಥಿನಿಯರಿಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ಉಚಿತ ಶಿಕ್ಷಣ, ವಸತಿ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ26 July 2026 7:23 PM IST
share
ಕಲಬುರಗಿ | ಪ್ರತಿಭಾವಂತ 10 ವಿದ್ಯಾರ್ಥಿನಿಯರಿಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ಉಚಿತ ಶಿಕ್ಷಣ, ವಸತಿ ಸೌಲಭ್ಯ

ಕಲಬುರಗಿ: ಆರ್ಥಿಕ ಸಂಕಷ್ಟದ ಕಾರಣದಿಂದ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಮೊಟಕುಗೊಳಿಸುವ ಪರಿಸ್ಥಿತಿಯಲ್ಲಿದ್ದ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ 10 ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ಸಂಪೂರ್ಣ ಉಚಿತ ಶಿಕ್ಷಣ ಹಾಗೂ ಉಚಿತ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಮಾನವೀಯ ಸೇವೆಯ ಮಾದರಿಯಾಗಿದೆ.

ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ 8ನೇ ತರಗತಿ ಪೂರ್ಣಗೊಳಿಸಿ, ನಿರಂತರವಾಗಿ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದರೂ ಕುಟುಂಬದ ಆರ್ಥಿಕ ದುಸ್ಥಿತಿಯಿಂದ ಮುಂದಿನ ಶಿಕ್ಷಣದ ಕನಸು ಕೈಚೆಲ್ಲುವ ಹಂತಕ್ಕೆ ಬಂದಿದ್ದ ವಿದ್ಯಾರ್ಥಿನಿಯರಿಗೆ ಸಂಘದ ಅಧ್ಯಕ್ಷೆ ಹಾಗೂ ಶರಣಬಸವೇಶ್ವರ ಸಂಸ್ಥಾನದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಆಶಾಕಿರಣವಾಗಿದ್ದಾರೆ.

ಈ ವಿದ್ಯಾರ್ಥಿನಿಯರ ಸಂಕಷ್ಟವನ್ನು ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯೊಬ್ಬಳ ತಾಯಿಯಾದ ಸವಿತಾ ಅವರು ಡಾ. ದಾಕ್ಷಾಯಿಣಿ ಅವ್ವಾಜಿ ಅವರ ಗಮನಕ್ಕೆ ತಂದಿದ್ದರು. ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿನಿಯರ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ವಿವರಿಸಿ, ಅವರ ವಿದ್ಯಾಭ್ಯಾಸ ಮುಂದುವರಿಸಲು ನೆರವು ನೀಡುವಂತೆ ಮನವಿ ಮಾಡಿದ್ದರು.

ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ 8ನೇ ತರಗತಿವರೆಗೆ ಮಾತ್ರ ಶಿಕ್ಷಣದ ವ್ಯವಸ್ಥೆ ಇರುವುದರಿಂದ 9ನೇ ತರಗತಿಯಿಂದ ವಿದ್ಯಾರ್ಥಿನಿಯರು ಬೇರೆ ಶಾಲೆಗಳಿಗೆ ಸೇರ್ಪಡೆಯಾಗಬೇಕಾಗುತ್ತದೆ. ಆದರೆ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ಈ ವಿದ್ಯಾರ್ಥಿನಿಯರ ಕುಟುಂಬಗಳಿಗೆ ಖಾಸಗಿ ಶಾಲೆಗಳ ವೆಚ್ಚ ಭರಿಸುವುದು ಅಸಾಧ್ಯವಾಗಿದ್ದು, ಸರ್ಕಾರಿ ಶಾಲೆಗಳಿಗೆ ಸೇರುವುದು ಅಥವಾ ಶಿಕ್ಷಣವನ್ನೇ ನಿಲ್ಲಿಸುವ ಪರಿಸ್ಥಿತಿ ಎದುರಾಗಿತ್ತು.

ವಿದ್ಯಾರ್ಥಿನಿಯರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿದ ಡಾ. ದಾಕ್ಷಾಯಿಣಿ ಅವ್ವಾಜಿ ಅವರು, ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ ಅವರ ಸಮ್ಮುಖದಲ್ಲಿ ವಿದ್ಯಾರ್ಥಿನಿಯರೊಂದಿಗೆ ಹಾಗೂ ಅವರ ಪೋಷಕರೊಂದಿಗೆ ವೈಯಕ್ತಿಕವಾಗಿ ಮಾತುಕತೆ ನಡೆಸಿ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ತಿಳಿದುಕೊಂಡರು. ಬಳಿಕ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಪ್ರಥಮ ಪುಣ್ಯಸ್ಮರಣೆಯ ಅಂಗವಾಗಿ ಆರಂಭಿಸಿರುವ ವಿಶೇಷ ಯೋಜನೆಯಡಿ ಈ ಹತ್ತು ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣ ಹಾಗೂ ಉಚಿತ ವಸತಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿದರು.

ಈ ಕುರಿತು ಮಾತನಾಡಿದ ಡಾ. ದಾಕ್ಷಾಯಿಣಿ ಅವ್ವಾಜಿ ಅವರು, ಆರ್ಥಿಕವಾಗಿ ಹಿಂದುಳಿದ ವರ್ಗದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಪ್ರತಿವರ್ಷವೂ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಸ್ಮರಣಾರ್ಥ ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ನೀಡಲಾಗುವುದು ಎಂದು ತಿಳಿಸಿದರು.

ಈ ವಿದ್ಯಾರ್ಥಿನಿಯರ ಕುಟುಂಬಗಳು ಕೃಷಿ ಕೂಲಿ ಕಾರ್ಮಿಕರು, ಹೋಟೆಲ್‌ಗಳಲ್ಲಿ ಸಾಮಾನ್ಯ ಕಾರ್ಮಿಕರು, ಆಟೋರಿಕ್ಷಾ ಚಾಲಕರು ಹಾಗೂ ದಿನಗೂಲಿ ಕೆಲಸಗಾರರ ಕುಟುಂಬಗಳಾಗಿವೆ. ಕೆಲವು ವಿದ್ಯಾರ್ಥಿನಿಯರು ವಿಧವಾ ತಾಯಂದಿರ ಮಕ್ಕಳಾಗಿದ್ದು, ಅವರ ತಾಯಂದಿರು ಮನೆ ಕೆಲಸ ಮಾಡಿ ಕುಟುಂಬವನ್ನು ನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ವಿದ್ಯಾರ್ಥಿನಿಯರಿಗೆ ಮಹಾದೇವಿ ಬಾಲಕಿಯರ ಪ್ರೌಢಶಾಲೆಯ 9ನೇ ತರಗತಿಯಲ್ಲಿ ಪ್ರವೇಶ ಕಲ್ಪಿಸಲಾಗಿದ್ದು, ಅಪ್ಪಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿ ವಾಸದ ವ್ಯವಸ್ಥೆ ಮಾಡಲಾಗಿದೆ. ಉಚಿತ ಶಿಕ್ಷಣ ಮತ್ತು ವಸತಿಯೊಂದಿಗೆ ಸಮವಸ್ತ್ರ, ಪಠ್ಯಪುಸ್ತಕಗಳು, ಪುಸ್ತಕಗಳು ಸೇರಿದಂತೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. ಅಲ್ಲದೆ ವಸತಿ ನಿಲಯದಿಂದ ಶಾಲೆಗೆ ಹಾಗೂ ಶಾಲೆಯಿಂದ ವಸತಿ ನಿಲಯಕ್ಕೆ ಸುರಕ್ಷಿತ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X