ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ 47ನೇ ಜನ್ಮದಿನ ನಿಮಿತ್ತ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ನಡೆದಿದ್ದು, ಶಿಬಿರದಲ್ಲಿ ಪಾಲ್ಗೊಂಡ 37 ಜನರಿಗೆ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಬಸವೇಶ್ವರ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಿತು ಎಂದು ಕೆಕೆಆರ್ಟಿಸಿ ಅಧ್ಯಕ್ಷ ಹಾಗೂ ಹೆಚ್ಕೆಇ ಶಿಕ್ಷಣ ಮಂಡಳಿ ನಿರ್ದೇಶಕರಾದ ಅರುಣಕುಮಾರ್ ಎಂ. ವೈ.ಪಾಟೀಲ್ ಹೇಳಿದರು.
ಅಫಜಲಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ ಅಂಗವಾಗಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರದ ಹಿನ್ನಲೆ ಒಟ್ಟು 426 ಸಾರ್ವಜನಿಕರು ತಪಾಸಣೆ ಮಾಡಿಸಿದ್ದು, 116 ಜನರಿಗೆ ಶಸ್ತ್ರ ಚಿಕೆತ್ಸೆ ಅವಶ್ಯಕತೆಯಿದೆ ಎಂದು ವೈದ್ಯರು ಹೇಳಿದರು. ವೈದ್ಯರ ಸಲಹೆ ಮೇರೆಗೆ 3 ಹಂತದಲ್ಲಿ ಶಸ್ತ್ರ ಚಿಕಿತ್ಸೆ ನೀಡಲು ಬಸವೇಶ್ವರ ಆಸ್ಪತ್ರೆಯ ವೈದ್ಯರು ನಿರ್ಧಾರ ಮಾಡಿದ್ದಾರೆ ಎಂದು ಪಾಟೀಲ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಡಾ.ಕಿರಣ್ ದೇಶಮುಖ್, ಡಾ ಶರಣಬಸಪ್ಪ ಹರವಾಳ, ನಾಗಣ್ಣ ಘಂಟಿ, ಅನಿಲ್ ಮಾರಗೊಳ, ಸಾಯಿನಾಥ್ ಪಾಟೀಲ್, ಡಾ ಗುರು ಪಾಟೀಲ್, ನೇತ್ರಾ ವಿಭಾಗದ ಮುಖ್ಯಸ್ಥ ಡಾ. ಸುಮಿತ್ ದೇಶಪಾಂಡೆ, ಶ್ರೀಮತಿ ನಾಗವೇಣಿ ಗುಬ್ಬೇವಾಡ ಎಂ.ಆರ್.ಎo.ಸಿ ಶರಣಗೌಡ ಪಾಟೀಲ್, ಡಾ. ಮಲ್ಲಿಕಾರ್ಜುನ ತೆಗನೂರ, ಯುವ ಕಾಂಗ್ರೆಸ್ ಅಧ್ಯಕ್ಷ ಅಣ್ಣವೀರ ಮಠಪತಿ, ಪ್ರವೀಣ್ ಕಲ್ಲೂರ್ ಉಪಸ್ಥಿತರಿದ್ದರು





