Kalaburagi | ಕ್ರೀಡಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಗುರುನಮನ

ಕಲಬುರಗಿ : ಅಥ್ಲೆಟಿಕ್ಸ್ ಗೆಳೆಯರ ಬಳಗ ಹಾಗೂ ಶಿಷ್ಯವೃಂದದ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಹಿರಿಯ ಗುರುಗಳನ್ನು ಗೌರವಿಸುವ ಉದ್ದೇಶದಿಂದ “ಗುರುನಮನ” ಕಾರ್ಯಕ್ರಮವನ್ನು ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಆಮಂತ್ರಣ ನೆಕ್ಸ್ ಹೋಟೆಲ್ನಲ್ಲಿ ರವಿವಾರ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ.ಎಂ.ಎಸ್.ದೇವರಮನಿ, ನಿವೃತ್ತ ಹಿರಿಯ ಅಥ್ಲೆಟಿಕ್ಸ್ ತರಬೇತಿದಾರರಾದ ಡಾ.ವಸಂತ ಕುಮಾರ ಹಾಗೂ ನಿವೃತ್ತ ಹಿರಿಯ ವಾಲಿಬಾಲ್ ತರಬೇತಿದಾರರು ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಂಡೆಪ್ಪ ಗಡ್ಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಶರಣಬಸವೇಶ್ವರ ಪದವಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ. ಎಸ್.ಎಂ. ಹೊಳಿ, “ಕ್ರೀಡಾ ಕ್ಷೇತ್ರದಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ಮಾರ್ಗದರ್ಶನ ಮತ್ತು ಶ್ರಮದಿಂದ ಅನೇಕ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ” ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಪ್ರತಾಪ್ ಸಿಂಗ್ ತಿವಾರಿ ಅವರು ಗುರು-ಶಿಷ್ಯ ಸಂಬಂಧದ ಮಹತ್ವವನ್ನು ವಿವರಿಸಿ, ವ್ಯಕ್ತಿತ್ವ ನಿರ್ಮಾಣದಲ್ಲಿ ಗುರುಗಳ ಮಾರ್ಗದರ್ಶನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಂ.ಎಸ್. ಪಾಸೋಡಿ, ಉದ್ಯಮಿದಾರ ಹಾಗೂ ಕಲಬುರಗಿ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಮೆಹಬೂಬ್ ಪಟೇಲ್, ಜಿಲ್ಲಾ ಒಲಿಂಪಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಸಿ.ಎನ್. ಬಾಬಳಗಾಂವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕ್ರೀಡಾ ಕ್ಷೇತ್ರದ ಗಣ್ಯರು, ತರಬೇತಿದಾರರು, ಹಳೆಯ ಹಾಗೂ ಹಾಲಿ ಕ್ರೀಡಾಪಟುಗಳು ಮತ್ತು ಶಿಷ್ಯರು ಭಾಗವಹಿಸಿ ಗುರುಗಳಿಗೆ ಕೃತಜ್ಞ ನಮನ ಸಲ್ಲಿಸಿದರು.
ಅಥ್ಲೆಟಿಕ್ ತರಬೇತಿದಾರ ನಾಗರಾಜ ಮಾಳಗೆ, ಜಿಲ್ಲಾ ಹ್ಯಾಂಡ್ಬಾಲ್ ಅಸೋಸಿಯೇಷನ್ನ ದತ್ತಾತ್ರೇಯ ಜೇವರ್ಗಿ, ವಾಸುದೇವ ಕುಲಕರ್ಣಿ, ಚಿನ್ನಮ್ಮ, ದೇವರಾಜ, ಸಂಜು ಕುಮಾರ, ಶೇಖರ ಹಿರೇಸೋಮನೂರ್, ಬಸವರಾಜ ಸಜ್ಜನ್, ವಿನೋದ, ಮನೀಶ ತಿವಾರಿ ಹಾಗೂ ಪ್ರವೀಣ ಪುಣೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಧ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ನಾಗರಾಜ ಮಾಳಗೆ ಸ್ವಾಗತ ಕೋರಿದರು. ದತ್ತಾತ್ರೇಯ ಜೇವರ್ಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿದ್ದು ವಂದಿಸಿದರು.






