Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಅತಿವೃಷ್ಟಿಯಿಂದಾಗಿ ಅಪಾರ...

ಕಲಬುರಗಿ| ಅತಿವೃಷ್ಟಿಯಿಂದಾಗಿ ಅಪಾರ ಹಾನಿ; ಅಧ್ಯಯನ ತಂಡ ಕಳುಹಿಸುವಂತೆ ಬಿ.ಆರ್.ಪಾಟೀಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Aug 2025 8:52 PM IST
share
ಕಲಬುರಗಿ| ಅತಿವೃಷ್ಟಿಯಿಂದಾಗಿ ಅಪಾರ ಹಾನಿ; ಅಧ್ಯಯನ ತಂಡ ಕಳುಹಿಸುವಂತೆ ಬಿ.ಆರ್.ಪಾಟೀಲ್ ಆಗ್ರಹ

ಕಲಬುರಗಿ: ಈ ವರ್ಷ ಉತ್ತರ ಕರ್ನಾಟಕದಲ್ಲಿ ವಾಡಿಕೆಯಂತೆ 280 ಮಿಮಿ ಮಳೆಯಾಗಬೇಕಿತ್ತು, ಆದರೆ 318 ಮಿಮಿ ನಷ್ಟು ಹೆಚ್ಚಾಗಿದೆ, ಅದರಂತೆ ಕಲಬುರಗಿಯಲ್ಲಿ 62 ಮಿಮಿ ನಷ್ಟು ಆಗಬೇಕಾಗಿದ್ದ ಮಳೆ 108 ಮಿಮಿನಷ್ಟು ಹೆಚ್ಚಾಗಿ ಹಳ್ಳ, ಕೊಳ್ಳ, ನದಿಗಳು ತುಂಬಿ ಮನೆಗಳಿಗೆ ನೀರು ನುಗ್ಗಿ ಅಪಾರ ನಷ್ಟವಾಗಿದೆ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ಶಾಸಕ ಬಿ.ಆರ್.ಪಾಟೀಲ್‌ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಿಂದ ಕೇಂದ್ರದ ಕ್ಯಾಬಿನೆಟ್ ದರ್ಜೆ ಸಚಿವರಾಗಿರುವ ಪ್ರಹ್ಲಾದ್‌ ಜೋಶಿ ಅವರು ಕೇವಲ ತಮ್ಮ ಮತ ಕ್ಷೇತ್ರವಾಗಿರುವ ಹುಬ್ಬಳ್ಳಿ ಧಾರವಾಡಗೆ ಮಾತ್ರ ಸೀಮಿತವಾಗಿದ್ದಾರೆ, ಸಂಪುಟ ಸಚಿವರಾಗಿ ಪಾರ್ಲಿಮೆಂಟ್‌ನಲ್ಲಿ ಧ್ವನಿಯೆತ್ತಿ ಮಳೆಯಿಂದಾಗಿರುವ ಹಾನಿಯ ಕುರಿತು ಮಾತನಾಡಿ ಪರಿಹಾರ ಕಂಡುಕೊಳ್ಳದಿರುವುದು ಖಂಡನೀಯ, ಕೂಡಲೇ ಅತೀವೃಷ್ಟಿಯಾಗಿರುವ ಕುರಿತಾಗಿ ಸಮೀಕ್ಷೆಗೆ ಅಧ್ಯಯನ ತಂಡ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಿಂದ 17 ಬಿಜೆಪಿ ಸಂಸದರಿದ್ದರೂ ಕೇಂದ್ರ ಸರಕಾರದ ಮುಂದೆ ತುಟಿಬಿಚ್ಚದಿರುವುದು ನೋಡಿದರೆ ಜನರ ಬಗ್ಗೆ ಅವರ ಕಾಳಜಿ ಇಲ್ಲದಿರುವುದು ಗೊತ್ತಾಗುತ್ತದೆ, ಅಲ್ಲದೆ ಇವರೆಲ್ಲ ನಿಷ್ಕ್ರಿಯ ಸಂಸದರಾಗಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಸೋಮಣ್ಣನವರು ಸಹ ಸಚಿವರಾಗಿದ್ದರೂ ರಾಜ್ಯದ ಜನರ ನೋವಿಗೆ ಸ್ಪಂದಿಸುವ ವ್ಯವದಾನವಿಲ್ಲದ ಬಿಜೆಪಿಯ ಸಂಸದ ಸಚಿವರ ವಿರುದ್ದ ಬೇಸರ ವ್ಯಕ್ತಪಡಿಸಿದರು.

ವಾಡಿಕೆಗಿಂತ ಈ ಬಾರಿ ಶೇ. 50ರಷ್ಟು ಮಳೆ ಹೆಚ್ಚಾಗಿ ರೈತರ ಅಲ್ಪಾವಧಿ ಬೆಳೆಗಳಾದ ಉದ್ದು, ಹೆಸರು ಸೇರಿದಂತೆ ವಿವಿಧ ಬೆಳೆಗಳು ಕೆಸರಿನ ಮಧ್ಯೆ ಸಿಲುಕಿಕೊಂಡಿವೆ, ಇದರಿಂದ ಇಳುವರಿ ಬರುವ ಯಾವುದೇ ಲಕ್ಷಣಗಳಿಲ್ಲ, ಜೊತೆಗೆ ವಾಣಿಜ್ಯ ಬೆಳೆ ತೊಗರಿಯ ಸ್ಥಿತಿಯಂತು ಅಷ್ಟಕ್ಕಷ್ಟೇ ಆಗಿದೆ. ಹಾಗಾಗಿ ರಾಜ್ಯ ಸರಕಾರ ಸಚಿವರ ತಂಡವನ್ನು ಕೇಂದ್ರ ಸರಕಾರದ ಸಚಿವರ ಭೇಟಿ ಮಾಡಿ ವಾಸ್ತವ ಸ್ಥಿತಿಗತಿಯನ್ನು ವಿವರಿಸಿ ಅನುದಾನವನ್ನು ತರಲು ಪ್ರಯತ್ನಿಸಬೇಕೆಂದು ಆಗ್ರಹಿಸಿದರು.

ಮಳೆಯಿಂದ ಹಾನಿಯಾದ ಪ್ರದೇಶಗಳ ಜನರಿಗೆ ಎನ್‌ಡಿಆರ್‌ಎಫ್‌ ನಿಯಮದಂತೆ ತಾತ್ಕಾಲಿಕವಾಗಿ ಕೇವಲ 5 ಸಾವಿರ ರೂ. ಪರಿಹಾರ ನೀಡಬಹುದು, ಆದರೆ ಹೆಚ್ಚಿನ ನಷ್ಟ ಸಂಭವಿಸಿದ್ದಲ್ಲಿ ಜನರು ಸಂಕಷ್ಟ ಪಡುವ ತಾಪತ್ರಯವಿದೆ, ಹಾಗಾಗಿ ಕೇಂದ್ರ ಸರಕಾರ ಕಳೆದ ಬಾರಿ ಬರಬೇಕಾಗಿರುವ ಹಣ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಡ ಹೇರಿದರು.

ಸುದ್ದಿಗೋಷ್ಠಿಯಲ್ಲಿ ಶಿವಶರಣಪ್ಪ ಮೂಳೆಗಾಂವ, ಜಗನ್ನಾಥ ದೇಶಮುಖ, ರಾಜಶೇಖರ ಯಂಕಂಚಿ ಇದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X