Kalaburagi | ರಿಟೇಲ್ ಆಪರೇಷನ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚಳ: ಡಾ. ಅಬ್ದುಲ್ ರೆಹಮಾನ್

ಕಲಬುರಗಿ: ರಿಟೇಲ್ ಆಪರೇಷನ್ ಕ್ಷೇತ್ರವು ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಅತ್ಯಂತ ಬೇಡಿಕೆಯ ವೃತ್ತಿಪರ ಕ್ಷೇತ್ರವಾಗಿದ್ದು, ಜಾಗತಿಕ ಮಟ್ಟದಲ್ಲಿಯೂ ಈ ಕ್ಷೇತ್ರಕ್ಕೆ ಉತ್ತಮ ಅವಕಾಶಗಳಿವೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಅಬ್ದುಲ್ ರೆಹಮಾನ್ ಎಂ. ಹೇಳಿದರು.
ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ಬಿ.ಕಾಂ. ರಿಟೇಲ್ ಆಪರೇಷನ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಪ್ರೆಂಟಿಸ್ಶಿಪ್ ಸಂದರ್ಶನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಅಪ್ರೆಂಟಿಸ್ಶಿಪ್ಗಳಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಉದ್ಯಮ ಕ್ಷೇತ್ರದ ನೈಜ ಅನುಭವ ನೀಡುವುದರ ಜೊತೆಗೆ ಭವಿಷ್ಯದ ವೃತ್ತಿಜೀವನ ರೂಪಿಸಿಕೊಳ್ಳಲು ನೆರವಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಿಲಯನ್ಸ್ ಇಂಡಸ್ಟ್ರೀಸ್ನ ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ಫಾಲೇಶ್ವರಿ ಪಿ. ಬೆಳ್ಳಾರಿ, ಟಾಟಾ ಕ್ರೋಮಾದ ಮಾನವ ಸಂಪನ್ಮೂಲ ಅಧಿಕಾರಿ ಶರಣಪ್ಪ ಕಂದಗೂಳ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ನ ಸ್ಟೋರ್ ಮ್ಯಾನೇಜರ್ ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿನ ಅವಕಾಶಗಳು, ಅಗತ್ಯ ಕೌಶಲ್ಯಗಳು ಹಾಗೂ ಉದ್ಯಮದ ನಿರೀಕ್ಷೆಗಳ ಕುರಿತು ಮಾಹಿತಿ ನೀಡಿದರು.
ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಸವಿತಾ ತಿವಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೃತ್ತಿಪರ ಕೌಶಲ್ಯ ಅಭಿವೃದ್ಧಿಗೆ ಮಹಾವಿದ್ಯಾಲಯವು ನಿರಂತರವಾಗಿ ಉದ್ಯೋಗಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಶಶಿಕಾಂತ ಕೊಳ್ಳಿ ನೆರವೇರಿಸಿದರು. ಡಾ. ಸಫಿಯಾ ಬೇಗಂ ಕಾರ್ಯಕ್ರಮ ನಿರೂಪಿಸಿದರೆ, ಡಾ. ಸುಜಾತ ದೊಡ್ಡಮನಿ ವಂದನಾರ್ಪಣೆ ಸಲ್ಲಿಸಿದರು.
ವೇದಿಕೆಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಡಾ. ರಾಜಕುಮಾರ ಸಲಗರ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಶ್ರೀಮಂತ ಹೊಳ್ಕರ್, ಐಕ್ಯೂಎಸಿ ಸಂಯೋಜಕ ಮಹೇಶ್, ಸಿಬ್ಬಂದಿ ಕಾರ್ಯದರ್ಶಿ ಡಾ. ರವೀಂದ್ರಕುಮಾರ ಭಂಡಾರಿ ಹಾಗೂ ಸಾಂಸ್ಕೃತಿಕ ಸಂಚಾಲಕ ಡಾ. ಬಲಭೀಮ ಸಾಂಗ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಜಾತ ದೊಡ್ಡಮನಿ, ಸಂಯೋಜಕ ಶಶಿಕಾಂತ ಕೊಳ್ಳಿ, ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ಎಂ. ಹುಗ್ಗಿ, ಡಾ. ಅರುಣಕುಮಾರ ಸಲಗರ, ಡಾ. ಸವಿತಾ ಪಾಟೀಲ, ಡಾ. ಸಫಿಯಾ ಬೇಗಂ, ಡಾ. ರವಿ ಬೌದ್ಧೆ ಸೇರಿದಂತೆ ಮಹಾವಿದ್ಯಾಲಯದ ಬೋಧಕ ವೃಂದ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.






