Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ದಾಸಪರಂಪರೆಗೆ ಜನಮುಖಿ ಆಯಾಮ...

ಕಲಬುರಗಿ | ದಾಸಪರಂಪರೆಗೆ ಜನಮುಖಿ ಆಯಾಮ ನೀಡಿದವರು ಕನಕದಾಸರು: ಡಾ.ಗಾಂಧೀಜಿ ಮೊಳಕೆರೆ

ವಾರ್ತಾಭಾರತಿವಾರ್ತಾಭಾರತಿ8 Nov 2025 10:06 PM IST
share
ಕಲಬುರಗಿ | ದಾಸಪರಂಪರೆಗೆ ಜನಮುಖಿ ಆಯಾಮ ನೀಡಿದವರು ಕನಕದಾಸರು: ಡಾ.ಗಾಂಧೀಜಿ ಮೊಳಕೆರೆ

ಕಲಬುರಗಿ: `ವ್ಯಾಸಕೂಟದ ಸಾಂಪ್ರದಾಯಿಕ ಕಟ್ಟುಪಾಡುಗಳನ್ನು ಮೀರಿ ಗುರು ವ್ಯಾಸರಾಯರ ಸಹಕಾರದೊಂದಿಗೆ ದಾಸಕೂಟದ ಪರಂಪರೆಯಲ್ಲಿ ಶೂದ್ರ ಶಕ್ತಿಯನ್ನು ಅಭಿವ್ಯಕ್ತಿಗೊಳಿಸಿ, ಇಡೀ ದಾಸಪರಂಪರೆಗೆ ಜನಮುಖಿ ಆಯಾಮ ನೀಡಿದವರು ಕನಕದಾಸರು ಎಂದು ಇತಿಹಾಸ ಅಧ್ಯಾಪಕರಾದ ಡಾ.ಗಾಂಧೀಜಿ ಮೊಳಕೆರೆ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಡಾ. ಅಂಬೇಡ್ಕರ್ ಕಲಾ ವಾಣಿಜ್ಯ ಪದವಿ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಕನಕ ಜಯಂತಿಯ ವಿಶೇಷ ಉಪನ್ಯಾಸದಲ್ಲಿ ಡಾ.ಗಾಂಧೀಜಿ ಮೊಳಕೆರೆ ಅವರು ಕನಕದಾಸರ ಬದುಕಿನ ವೃತ್ತಾಂತಗಳನ್ನು ವಿವರಿಸಿದರು.

ಕನ್ನಡ ವಿಭಾಗದ ಪ್ರಾದ್ಯಾಪಕರಾದ ಡಾ.ಅರುಣ್ ಜೋಳದ ಕೂಡ್ಲಿಗಿ ಮಾತನಾಡಿ, `ಕನಕದಾಸರು ವೈದಿಕ ಬ್ರಾಹ್ಮಣ ದಾಸರಿಂದ ಅಸ್ಪೃಶ್ಯತೆಯ ಆಚರಣೆಗೆ ನೊಂದಿದ್ದರು. ಹಾಗಾಗಿಯೆ ಅವರು ತಮ್ಮ ಕೀರ್ತನೆಯಲ್ಲಿ `ಆರಿಗಂಜೆನು ನಾನು’ ಎಂದಿದ್ದಾರೆ. ದಾಸಪರಂಪರೆಯಲ್ಲಿ ಎಲ್ಲರೂ ಹರಿ ಸರ್ವೋತ್ತಮ ಎನ್ನುವ ಕೀರ್ತನೆಯಲ್ಲಿಯೇ ಉಳಿದರೆ ಕನಕದಾಸರು ಕನ್ನಡದ ಬಹಳಮುಖ್ಯ ಕವಿಯಾಗಿ ಹೊರಹೊಮ್ಮಿದರು. ರಾಮಧಾನ್ಯ ಚರಿತೆಯಲ್ಲಿ ಬತ್ತ ಮತ್ತು ರಾಗಿಯ ಶ್ರೇಷ್ಠತೆಯ ವಾಗ್ವಾದವನ್ನು ಹುಟ್ಟುಹಾಕುತ್ತಾರೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಪ್ರೊ.ಸಿದ್ದಪ್ಪ ಎಂ.ಕಾಂತ ಅವರು ಕನಕದಾಸರು ರಾಗಿಯ ಮಹತ್ವ ಸಾರಿದ `ರಾಗಿ ತಂದೀರೆ ಬಿಕ್ಷಕೆ ರಾಗಿ ತಂದೀರೆ’ ಕೀರ್ತನೆಯನ್ನು ವಿಶ್ಲೇಷಣೆ ಮಾಡಿದರು.

ವೇದಿಕೆಯಲ್ಲಿ ಕಾಲೇಜಿನ ಐಕ್ಯುಎಸಿ ಸಂಚಾಲಕರಾದ ಡಾ.ಸಿದ್ದಾರ್ಥ ಮದನಕರ, ಹಿರಿಯ ಪ್ರಾಧ್ಯಾಪಕರಾದ ಡಾ. ನಿರ್ಮಲ ಸಿರಗಾಪುರ, ಶಿಲ್ಪಾ ಲಿಂಗದೆ, ದೊಡ್ಡಲಕ್ಷಿ ಉಪಸ್ಥಿತರಿದ್ದರು.

ಸಮಾಜಶಾಸ್ತ್ರ ಪ್ರಾದ್ಯಾಪಕರಾದ ಡಾ. ಸುದರ್ಶನ ಮದನಕರ ಸ್ವಾಗತಿಸಿದರು. ಡಾ.ಹರ್ಷವರ್ಧನ್ ನಿರೂಪಿಸಿದರು. ಡಾ.ಶಿವಕುಮಾರ್‌ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X