Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಿಪಿಐ(ಎಂ) ಪಕ್ಷದ ಜಿಲ್ಲಾ...

ಕಲಬುರಗಿ | ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿಯಾಗಿ ಕೆ.ನೀಲಾ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ26 Nov 2024 10:01 PM IST
share
ಕಲಬುರಗಿ | ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿಯಾಗಿ ಕೆ.ನೀಲಾ ಪುನರಾಯ್ಕೆ

ಕಲಬುರಗಿ: ಸಿಪಿಐ(ಎಂ) ಪಕ್ಷದ ಕಲಬುರಗಿಯ ಜಿಲ್ಲಾ ಕಾರ್ಯದರ್ಶಿಯಾಗಿ ಕೆ.ನೀಲಾ ಅವರನ್ನು ಪುನರಾಯ್ಕೆ ಮಾಡಲಾಗಿದೆ.

ನ.24, 25ರಂದು ಎರಡು ದಿನಗಳ ಕಾಲ ನಡೆದ ಕಲಬುರಗಿ ಜಿಲ್ಲಾ ಸಮ್ಮೇಳನದಲ್ಲಿ 17ಸದಸ್ಯರ ಜಿಲ್ಲಾ ಸಮಿತಿಯು ಇವರನ್ನು ಮತ್ತೆ ಆಯ್ಕೆ ಮಾಡಿದೆ. ಅವರ ಜೊತೆ ಆರು ಜನರನ್ನು ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರನ್ನಾಗಿ ನೇಮಿಸಲಾಯಿತು.

ಕಾ.ಶ್ರೀಮಂತ ಬಿರಾದಾರ, ಕಾ.ಭೀಮಶೆಟ್ಟಿ ಯಂಪಳ್ಳಿ, ಕಾ.ಶರಣಬಸವ ಮಮಶೆಟ್ಟಿ, ಕಾ.ಗೌರಮ್ಮ ಮತ್ತು ಕಾ.ಸುಧಾಮ ಧನ್ನಿ ಇವರು ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಆಯ್ಕೆಯಾದರು. ಕಾ.ಶಾಂತಾ ಘಂಟಿ, ಕಾ.ಸುಭಾಷ ಹೊಸಮನಿ, ಕಾ.ಮಲ್ಲಮ್ಮ ಕೋಡ್ಲಿ, ಕಾ.ಚಂದಮ್ಮ ಗೋಳಾ, ಕಾ.ಶೇಕಮ್ಮ, ಕಾ.ನಾಗಯ್ಯ ಸ್ವಾಮಿ, ಕಾ.ಪಾಂಡುರಂಗ ಮಾವಿನಕರ್, ಕಾ.ಶಿವಶರಣ ಧನ್ನೂರ, ಕಾ.ಪ್ರಭು ಪ್ಯಾರಾಬುದ್ದಿ, ಕಾ.ಸಲ್ಮಾನ ಖಾನ್, ಕಾ.ಗುರು ಚಾಂದಕವಠೆ ಇವರನ್ನು ಜಿಲ್ಲಾ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಎರಡು ದಿನಗಳ ಈ ಸಮ್ಮೇಳನದಲ್ಲಿ ಮರಳು ನೀತಿಯ ಕಗ್ಗಂಟು ನಿಯಮಾವಳಿಗಳ ಅಡ್ಡಿ ವಿರೋಧಿಸಿ, ದಲಿತರ ಮೇಲಿನ ದೌರ್ಜನ್ಯ ಖಂಡಿಸಿ, ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ, ಸಾರ್ವತ್ರಿಕವಾಗಿ ಎಲ್ಲ ಕಾರ್ಮಿಕರಿಗೂ ಮಾಸಿಕ ರೂ.31,000 ವೇತನ ಜಾರಿಗೆ ಆಗ್ರಹಿಸಿ, ರೈತರ ಬೆಳೆಗಳಿಗೆ ಎಂಎಸ್ ಪಿ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸಿ, ಭೂಮಿಯ ಪ್ರಶ್ನೆಯನ್ನು ಬಗೆಹರಿಸಿ ರೈತರ ಕೈಯಲ್ಲಿ ಕೃಷಿ ಭೂಮಿ ಉಳಿಸಲು ಒತ್ತಾಯಿಸಿ, ಅನುಚ್ಛೇದ 371 ಜೆ ಕಾಯ್ದೆಯಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣ ಒದಗಿಸಲು ಆಗ್ರಹಿಸಿ, ದೇವದಾಸಿ ಮಹಿಳೆಯರಿಗೆ ಭೂಮಿ ವಸತಿ ವಿತರಿಸಲು ಆಗ್ರಹಿಸಿ, ದೇವದಾಸಿಯರ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವಸತಿ ಶಾಲೆ ಒದಗಿಸಲು ಆಗ್ರಹಿಸಿ, ಜಿಲ್ಲೆಯಲ್ಲಿ ಸೌಹಾರ್ದ ಪರಂಪರೆಗೆ ಧಕ್ಕೆಯಾಗದಂತೆ ಕ್ರಮವಹಿಸಲು ಆಗ್ರಹಿಸಿ, ಉದ್ಯೋಗ ಖಾತ್ರಿ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಒತ್ತಾಯಿಸಿ, ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಪೌರ ಕಾರ್ಮಿಕರ ಕೆಲಸ ಖಾಯಮ್ಮಾತಿಗೆ ಒತ್ತಾಯಿಸಿ, ಸರಕಾರಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಸಿ, ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಆಗ್ರಹಿಸಿ, ಜಿಲ್ಲೆಯಲ್ಲಿರುವ ಎಲ್ಲ ವಸತಿಹೀನರಿಗೆ ಮನೆಗಳನ್ನು ವಿತರಿಸಲು ಆಗ್ರಹಿಸಲು ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ರಾಜ್ಯ ಸಮ್ಮೇಳನವು ಡಿ.29, 30 ಮತ್ತು 31ರಂದು ತುಮಕೂರಿನಲ್ಲಿ ನಡೆಯಲಿದ್ದು, ಜಿಲ್ಲೆಯಿಂದ 12 ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ರ್‍ಯಾಲಿಗೆ ಜಿಲ್ಲೆಯಿಂದ ಜನರು ಭಾಗವಹಿಸುವರು ಎಂದು ಕಾರ್ಯದರ್ಶಿ ಕೆ.ನೀಲಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X