Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಾಹಿತ್ಯದ ಒಡನಾಟವೇ ನಮ್ಮನ್ನು...

ಕಲಬುರಗಿ | ಸಾಹಿತ್ಯದ ಒಡನಾಟವೇ ನಮ್ಮನ್ನು ಮಾನವರನ್ನಾಗಿಸುತ್ತದೆ : ಸಾಹಿತಿ ಕೆ.ನೀಲಾ

ವಾರ್ತಾಭಾರತಿವಾರ್ತಾಭಾರತಿ14 Jan 2026 10:56 AM IST
share
ಕಲಬುರಗಿ | ಸಾಹಿತ್ಯದ ಒಡನಾಟವೇ ನಮ್ಮನ್ನು ಮಾನವರನ್ನಾಗಿಸುತ್ತದೆ : ಸಾಹಿತಿ ಕೆ.ನೀಲಾ
ನಂದಗೂರಿನ ಮಕ್ಕಳಿಂದ 'ಸಾಹಿತಿಗಳೊಂದಿಗೆ ಸಂವಾದ'

ಕಲಬುರಗಿ: "ಸಾಹಿತ್ಯ ಎನ್ನುವುದು ವ್ಯಕ್ತಿಗೆ ಚೇತೋಹಾರಿಯಾದದ್ದು. ಸಾಹಿತ್ಯದ ಒಡನಾಟವೇ ನಮ್ಮನ್ನು ಪರಿಪೂರ್ಣ ಮಾನವರನ್ನಾಗಿಸುತ್ತದೆ," ಎಂದು ಹಿರಿಯ ಸಾಹಿತಿ ಹಾಗೂ ಹೋರಾಟಗಾರ್ತಿ ಕೆ. ನೀಲಾ ಅಭಿಪ್ರಾಯಪಟ್ಟರು.

ಆಳಂದ ತಾಲೂಕಿನ ಗಡಿ ಗ್ರಾಮ ನಂದಗೂರಿನ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕಲಬುರಗಿ ಆಕಾಶವಾಣಿಯಲ್ಲಿ 'ಬಾಲಲೋಕ' ಕಾರ್ಯಕ್ರಮ ನೀಡಲು ಆಗಮಿಸಿದ್ದ ಸಂದರ್ಭದಲ್ಲಿ, ಕೆ. ನೀಲಾ ಅವರ 'ಓದು ಮನೆ' ಗ್ರಂಥಾಲಯಕ್ಕೆ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಸಾಹಿತ್ಯದ ಕುರಿತು ಸಂವಾದ ನಡೆಸಿದರು.

ನೀವೇಕೆ ಬರೆಯುತ್ತೀರಿ? ಬರೆಯುವುದರಿಂದ ನಿಮಗೇನು ಲಾಭ?" ಎಂದು ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ನೀಲಾ ಅವರು, "ನನ್ನೊಳಗಿನ ಅನುಭವಗಳನ್ನು ಹೊರಹಾಕಲು ಬರೆಯುತ್ತೇನೆ. ಬರವಣಿಗೆಯಿಂದ ಸಮಾಜದಲ್ಲಿ ಸ್ವಾಭಿಮಾನ ಹಾಗೂ ಘನತೆಯಿಂದ ಬದುಕಲು ಸಾಧ್ಯವಾಗಿದೆ. ಸಾಹಿತ್ಯವು ವ್ಯಕ್ತಿಯಲ್ಲಿ ಆತ್ಮಬಲ ತುಂಬುವುದಲ್ಲದೆ, ತನ್ನ ಸುತ್ತಲಿನ ಪರಿಸರವನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ," ಎಂದು ವಿವರಿಸಿದರು.

ಈಗಾಗಲೇ ಬರವಣಿಗೆಯಲ್ಲಿ ತೊಡಗಿರುವ ಪ್ರಜ್ಞಾ, ಸ್ನೇಹಾ, ಶ್ವೇತಾ ಹಾಗೂ ಸ್ಫೂರ್ತಿ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬರಹಕ್ಕೆ ಆಯ್ದುಕೊಳ್ಳಬೇಕಾದ ಸಂಗತಿಗಳು, ಪಾತ್ರಗಳ ಸೃಷ್ಟಿ, ಕಾಲ್ಪನಿಕತೆ ಹಾಗೂ ಭಾಷಾ ಬಳಕೆಯ ಬಗ್ಗೆ ಸವಿಸ್ತಾರವಾಗಿ ಮಾರ್ಗದರ್ಶನ ನೀಡಿದರು. "ಅರಿಸ್ಟಾಟಲ್, ಕುವೆಂಪು, ರವೀಂದ್ರನಾಥ ಟ್ಯಾಗೋರ್ ಅಂತಹವರು ಸಾಹಿತ್ಯದ ಸವಿಜೇನನ್ನು ಜಗತ್ತಿಗೆ ಹಂಚಿದವರು. ನಾವು ಸಹ ಆ ಸವಿಯನ್ನು ಸವಿಯಬೇಕು," ಎಂದು ಕಿವಿಮಾತು ಹೇಳಿದರು.

ನಂದಗೂರಿನ ಮಕ್ಕಳು ತಮ್ಮ ಶಾಲಾ ಗ್ರಂಥಾಲಯದ ಪುಸ್ತಕಗಳನ್ನು ಓದಿ 400ಕ್ಕೂ ಹೆಚ್ಚು ಟಿಪ್ಪಣಿಗಳನ್ನು ಬರೆದಿರುವುದನ್ನು ಕೇಳಿ ನೀಲಾ ಅವರು ಮಕ್ಕಳನ್ನು ಅಭಿನಂದಿಸಿದರು. ಈ ಹಿಂದೆ ಇದೇ ಶಾಲೆಯ ಮಕ್ಕಳು 600 ಕವನ ಮತ್ತು 54 ಕಥೆಗಳನ್ನೊಳಗೊಂಡ 'ಅಂಕುರ' ಎಂಬ ಸಂಕಲನ ಪ್ರಕಟಿಸಿದ್ದನ್ನು ಅವರು ಇದೇ ವೇಳೆ ಸ್ಮರಿಸಿದರು.

ಈ ಸಂದರ್ಭದಲ್ಲಿ ಕನ್ನಡ ಉಪಾಧ್ಯಾಯ ರವೀಂದ್ರ ರುದ್ರವಾಡಿ, ಎಸ್‌ಡಿಎಮ್‌ಸಿ ಮಾಜಿ ಅಧ್ಯಕ್ಷ ಸಿದ್ದಲಿಂಗ ಬೆಡ್ದೂರ್ಗೆ, ಆಶಾ ಕಾರ್ಯಕರ್ತೆ ಮಲ್ಲಮ್ಮ ಸಂಗಮೇಶ ಬೆಡ್ದೂರ್ಗೆ ಹಾಗೂ ಡಿವೈಎಫ್‌ಐ ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ್ ಉಪಸ್ಥಿತರಿದ್ದರು.

Tags

KalaburagihumanK.Neela
share
ವಾರ್ತಾಭಾರತಿ
ವಾರ್ತಾಭಾರತಿ
Next Story
X