ಕಲಬುರಗಿ | ರೈಲ್ವೆ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ರೈಲ್ವೆ ಹಳಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ರೈಲ್ವೆ ಸ್ಟೇಷನ್ ಸಮೀಪದ ಶಹಾಬಾದ್ ಬ್ರಿಡ್ಜ್ ಹತ್ತಿರ ಶನಿವಾರ ನಡೆದಿದೆ.
ಮೃತರನ್ನು ಕಲಬುರಗಿ ನಗರದ ಹೊರವಲಯದ ನಂದಿಕೂರ ಗ್ರಾಮದ ನಿವಾಸಿ ಶರಣಬಸಪ್ಪ ಗುಂಡಪ್ಪ ಉಮ್ಮರ್ಗಿ (32) ಎಂದು ಗುರುತಿಸಲಾಗಿದೆ.
ಮೃತ ಶರಣಬಸಪ್ಪ ತನ್ನ ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ವ್ಯಕ್ತಿಯ ಗುರುತು ಪತ್ತೆ ಹಚ್ಚಿದ ಬಳಿಕ ವೈದ್ಯರಿಂದ ಮೃತದೇಹ ಪರೀಕ್ಷೆ ಮಾಡಿಸಿ, ಮೃತದೇಹವನ್ನು ಮೃತನ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವಾಡಿ ರೈಲ್ವೆ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





