ಕಲಬುರಗಿ | ಕಣ್ಣಿ ತರಕಾರಿ ಮಾರುಕಟ್ಟೆಯ ಕಟ್ಟಡ ವೀಕ್ಷಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ನಗರದ ಎಂ ಎಸ್ ಕೆ ಮಿಲ್ ಬಳಿ ನಿರ್ಮಾಣವಾಗುತ್ತಿರುವ ಕಣ್ಣಿ ತರಕಾರಿ ಮಾರುಕಟ್ಟೆ ಕಟ್ಟಡ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ತರಕಾರಿ ಮಾರಾಟಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವ ರೀತಿ ಸೌಲಭ್ಯಗಳನ್ನು ಅದರಲ್ಲೂ ಮಹಿಳೆಯರಿಗೆ ಹಾಗೂ ಪುರುಷರಿಗೆ ಶೌಚಾಲಯ ನಿರ್ಮಾಣ, ವಾಹನ ನಿಲುಗಡೆಗೆ ಅಗತ್ಯ ಸ್ಥಳಾವಕಾಶ ಕಲ್ಪಿಸಲು ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಪೊಲೀಸ್ ಕಮೀಷನರ್ ಡಾ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಕಮೀಷನರ್ ಅವಿನಾಶ ಸಿಂಧೆ ಸೇರಿದಂತೆ ಹಲವರಿದ್ದರು.
Next Story





