ಕಲಬುರಗಿ | ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ

ಕಲಬುರಗಿ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಕರೆ ನೀಡಿದರು.
ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಪಿ. ಜಿ. ಬಿಲ್ಡಿಂಗ್ ಸಭಾಂಗಣದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಘಟಕಗಳಾದ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ಎನ್. ಸಿ. ಸಿ., ರೆಡ್ ಕ್ರಾಸ್, ರೆಡ್ ರಿಬ್ಬನ್, ಸೌಟ್ಸ್ ಮತ್ತು ಗೈಡ್ಸ್, ಡಾ. ಬಿ. ಆರ್. ಅಂಬೇಡ್ಕರ್ ವೇದಿಕೆ, ಕಾರ್ಯಚಟುವಟಿಕೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಒಂದು ಸಮಯದಲ್ಲಿ ಹೆಣ್ಣು ಮಕ್ಕಳೆಂದರೆ ಕೇವಲ ಅಡುಗೆ ಮನೆಗೆ ಸೀಮಿತವನ್ನಾಗಿ ಮಾಡಲಾಗಿತ್ತು. ಆದರೆ ಸ್ವಾತಂತ್ರ್ಯ ನಂತರ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದರು. ಹಾಗಾಗಿ ಇಂದು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವಿಕಾಸಗೊಳಿಸಲು ಸಂವಿಧಾನದತ್ತವಾಗಿ ನಮಗೆ ಅವಕಾಶಗಳು ದೊರೆತಿವೆ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಶಿವಶರಣ ಗೊಳ್ಳೆ, ಮಹಾನಗರ ಪಾಲಿಕೆಯ ವಲಯ ಒಂದರ ಆಯುಕ್ತ ಗೌತಮ್ ಕಾಂಬಳೆ, ಡಾ.ಟಿ.ವ್ಹಿ ಅಡಿವೇಶ, ಡಾ. ಮಲ್ಲೇಶಪ್ಪ ಎಸ್.ಕುಂಬಾರ, ಡಾ.ವಿಜಯಕುಮಾರ್ ಸಾಲಿಮನಿ, ಡಾ.ರಾಜಕುಮಾರ್ ಸಲಗರ, ಡಾ. ದೌಲಪ್ಪ ಬಿ.ಹೆಚ್, ಡಾ.ರಾಜಶೇಖರ್ ಮಡಿವಾಳ, ಅಜಯಸಿಂಗ್ ತಿವಾರಿ, ಡಾ.ಶ್ರೀಮಂತ ಹೋಳಕರ, ವಿಜಯಲಕ್ಷ್ಮೀ, ಶಿವಾನಂದ ಸ್ವಾಮಿ ಸೇರಿದಂತೆ ಎಲ್ಲಾ ಘಟಕಗಳ ಸಂಯೋಜಕರು, ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.







