Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶಾಸಕರು ಕ್ಷೇತ್ರದ ರೈತರ...

Kalaburagi | ಶಾಸಕರು ಕ್ಷೇತ್ರದ ರೈತರ ಸಮಸ್ಯೆ ಪರಿಹರಿಸಲಿ: ದತ್ತಾತ್ರೇಯ ಪಾಟೀಲ ರೇವೂರ

ವಾರ್ತಾಭಾರತಿವಾರ್ತಾಭಾರತಿ25 Aug 2026 10:17 PM IST
share
Kalaburagi | ಶಾಸಕರು ಕ್ಷೇತ್ರದ ರೈತರ ಸಮಸ್ಯೆ ಪರಿಹರಿಸಲಿ: ದತ್ತಾತ್ರೇಯ ಪಾಟೀಲ ರೇವೂರ

ಕಲಬುರಗಿ: ರಾಜ್ಯದ ರೈತರ ಬೆಳೆಹಾನಿ ಕುರಿತು ಮಳೆಗಾಲದ ಅಧಿವೇಶನದಲ್ಲಿ ಚರ್ಚಿಸಲು ವಿರೋಧ ಪಕ್ಷದವರಿಗೆ ಮನವಿ ಮಾಡಿರುವ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ನಡೆ ರೈತಪರ ಕಾಳಜಿಗಿಂತ ರಾಜಕೀಯ ಭೂಟಾಟಿಕೆಯಂತೆ ಕಾಣುತ್ತಿದೆ ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಟೀಕಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ ಬಗ್ಗೆ ಕಾಳಜಿ ವ್ಯಕ್ತಪಡಿಸುವ ಶಾಸಕರಿಗೆ ತಮ್ಮ ಕ್ಷೇತ್ರದ ರೈತರ ಸಮಸ್ಯೆಗಳ ಬಗ್ಗೆ ಏಕೆ ಕಾಳಜಿ ಇಲ್ಲ ಎಂದು ಪ್ರಶ್ನಿಸಿದರು.

ರಾಜ್ಯ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ರೈತರು ಬರಗಾಲ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ವರ್ಷದ ಬೆಳೆ ವಿಮೆ ಹಣವೇ ಅನೇಕ ರೈತರಿಗೆ ಸಮರ್ಪಕವಾಗಿ ತಲುಪಿಲ್ಲ. ಕ್ಷೇತ್ರದ ರೈತರಿಗೆ ಸರ್ಕಾರದಿಂದ ಯಾವ ರೀತಿಯ ನೆರವು ದೊರಕುವಂತೆ ಶಾಸಕರು ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಅವಧಿಯಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಬಡ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಎಷ್ಟು ಕೊಳವೆಬಾವಿಗಳನ್ನು ಕೊರೆಸಿ, ಎಷ್ಟು ರೈತರಿಗೆ ಮೋಟಾರ್ ಅಳವಡಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ ಎಂಬುದನ್ನು ಶಾಸಕರು ಬಹಿರಂಗಪಡಿಸಬೇಕು ಎಂದು ರೇವೂರ ಒತ್ತಾಯಿಸಿದರು.

ತಮ್ಮ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ರೈತರ ಅನುಕೂಲಕ್ಕಾಗಿ ಬೆಣ್ಣೆತೊರಾ ಬ್ಯಾರೇಜ್‌ನಿಂದ ವಿವಿಧ ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಸುಮಾರು 200 ಕೋಟಿ ರೂ. ಅನುದಾನದಲ್ಲಿ ಆರಂಭವಾದ ಈ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬವಾಗಿರುವುದಕ್ಕೆ ಕಾರಣವೇನು ಎಂಬುದನ್ನು ಶಾಸಕರು ಕ್ಷೇತ್ರದ ರೈತರಿಗೆ ತಿಳಿಸಬೇಕು ಎಂದು ಹೇಳಿದರು.

ದರಿಯಾಪುರ–ಕೋಟನೂರ ಪ್ರದೇಶದಲ್ಲಿ ಅಟಲ್‌ಜಿ ಲೇಔಟ್‌ ನಿರ್ಮಾಣಕ್ಕಾಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿರುವ ರೈತರ ಜಮೀನಿಗೆ ಸರ್ಕಾರದಿಂದ ಇದುವರೆಗೆ ಎಷ್ಟು ಪರಿಹಾರ ನೀಡಲಾಗಿದೆ ಎಂಬುದನ್ನೂ ಶಾಸಕರು ಸ್ಪಷ್ಟಪಡಿಸಬೇಕು ಎಂದು ರೇವೂರ ಆಗ್ರಹಿಸಿದರು.

ಲಭ್ಯವಿರುವ ಸರ್ಕಾರಿ ಮಾಹಿತಿಯ ಪ್ರಕಾರ ಸುಮಾರು 26 ರೈತರಿಂದ 150 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಅವರಿಗೆ ಸುಮಾರು 293 ಕೋಟಿ ರೂ. ಪರಿಹಾರ ನೀಡಬೇಕಿದೆ. ಈ ಪೈಕಿ ಇದುವರೆಗೆ ಎಷ್ಟು ಮೊತ್ತವನ್ನು ಪಾವತಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಜಪ್ತಿಗೂ ಆದೇಶವಾಗಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು.

ಕ್ಷೇತ್ರದ ರೈತರು ಕಳೆದುಕೊಂಡ ಜಮೀನಿಗೆ ಸೂಕ್ತ ಪರಿಹಾರ ದೊರಕಿಸುವಲ್ಲಿ ವಿಫಲರಾಗಿರುವ ಶಾಸಕರು ಸದನದಲ್ಲಿ ರಾಜ್ಯದ ರೈತರ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ರೇವೂರ ವ್ಯಂಗ್ಯವಾಡಿದರು.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನಗರೋತ್ಥಾನ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಸುಮಾರು 9 ತಿಂಗಳು ಕಳೆದರೂ ಕಾಮಗಾರಿಗಳು ಆರಂಭವಾಗಿಲ್ಲ. ಕಾಮಗಾರಿಗಳು ಆರಂಭವಾಗದಿರುವುದಕ್ಕೆ ಕಾರಣವೇನು ಎಂಬುದನ್ನು ಶಾಸಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.

ರೈತರ ಹಾಗೂ ನಗರದ ಜನರ ಸಮಸ್ಯೆಗಳನ್ನು ಮೊದಲು ಪರಿಹರಿಸುವತ್ತ ಶಾಸಕರು ಗಮನಹರಿಸಬೇಕು. ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ರೈತಪರ ಹೇಳಿಕೆ ನೀಡುವುದರಿಂದ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿಶಾಲ ದರ್ಗಿ, ದಯಾಘನ್ ಧಾರವಾಡಕರ್, ರಾಜು ವಾಡೇಕರ್, ಶಿವಯೋಗಿ ನಾಗನಹಳ್ಳಿ, ಅವಿನಾಶ್ ಕುಲಕರ್ಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X