Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಯುಪಿಎಸ್‌ಸಿ ಪರೀಕ್ಷೆಯಲ್ಲಿ...

ಕಲಬುರಗಿ | ಯುಪಿಎಸ್‌ಸಿ ಪರೀಕ್ಷೆಯಲ್ಲಿ 984ನೇ ರ‍್ಯಾಂಕ್‌ಗಳಿಸಿದ ಮೋಹನ ಪಾಟೀಲ್‌ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ28 April 2025 12:18 PM IST
share
ಕಲಬುರಗಿ | ಯುಪಿಎಸ್‌ಸಿ ಪರೀಕ್ಷೆಯಲ್ಲಿ 984ನೇ ರ‍್ಯಾಂಕ್‌ಗಳಿಸಿದ ಮೋಹನ ಪಾಟೀಲ್‌ಗೆ ಸನ್ಮಾನ

ಕಲಬುರಗಿ : ಇತ್ತೀಚೆಗೆ ಪ್ರಕಟವಾದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 984ನೇ ರ‍್ಯಾಂಕ್ ಪಡೆದ ಕಮಲಾಪೂರ ತಾಲೂಕಿನ ಡೋರ ಜಂಬಗಾ ಗ್ರಾಮದ ಮೋಹನ ಸಂಗಣ್ಣಗೌಡ ಪಾಟೀಲ್‌ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕನ್ನಡ ಭವನದಲ್ಲಿ ರವಿವಾರ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಅದ್ಧೂರಿಯಾಗಿ ಸತ್ಕರಿಸಿ ಅಭಿನಂದಿಸಲಾಯಿತು.

ನೇತೃತ್ವ ವಹಿಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕಲ್ಯಾಣ ಕರ್ನಾಟಕ ಭಾಗದ ಅಪ್ಪಟ ಗ್ರಾಮೀಣ ಪ್ರತಿಭೆ ಇಂದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ಸರಕಾರಿ ಶಾಲೆಯಲ್ಲಿ ಓದಿ ರಾಷ್ಟ್ರ ಮಟ್ಟದ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿರುವ ಮೋಹನ ಪಾಟೀಲ್‌ ಅವರ ಪರಿಶ್ರಮ ನಿಜಕ್ಕೂ ಅಭಿನಂದನಾರ್ಹರು. ಈ ಭಾಗದ ಅಭಿವೃದ್ಧಿ ಕನಸು ನನಸು ಮಾಡುವಲ್ಲಿ ಮೋಹನ ಪಾಟೀಲರು ಉತ್ತಮ ನಾಗರಿಕ ಸೇವೆ ಮಾಡಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಧಕ ಮೋಹನ ಎಸ್.ಪಾಟೀಲ್‌, ಗ್ರಾಮೀಣ ಪ್ರದೇಶದಿಂದ ಬಂದ ನನಗೆ ಯುಪಿಎಸ್‌ಸಿ ಪರೀಕ್ಷೆ ನನ್ನ ಕನಸಾಗಿತ್ತು. ಅದನ್ನು ಸತತ ಅಧ್ಯಯನ ಮತ್ತು ಪರಿಶ್ರಮದ ಮೂಲಕ ಗುರಿ ಮುಟ್ಟಲು ಸಾಧ್ಯವಾಯಿತು. ನನ್ನ ಈ ಸಾಧನೆಗೆ ಗೌರವಿಸಿ ಪ್ರೋತ್ಸಾಹಿಸಿದ್ದಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಚಿರಋಣಿಯಾಗಿರುವೆ ಎಂದರು.

ಇದೇ ಸಂದರ್ಭದಲ್ಲಿ ಮಗನ ಸಾಧನೆಗೆ ಸಂತಸ ವ್ಯಕ್ತಪಡಿಸಿ ಅವರ ತಂದೆಯವರಾದ ಸಂಗಣ್ಣಗೌಡ ಪಾಟೀಲ ರು ಕೂಡ ಮಾತನಾಡಿದರು.

ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಧರ್ಮರಾಜ ಜವಳಿ, ನಂದಿನಿ ಸನಬಾಳ ಮಾತನಾಡಿದರು. ಪ್ರಮುಖರಾದ ಹಣಮಂತಪ್ರಭು, ಬಾಬುರಾವ ಪಾಟೀಲ, ರಾಜೇಂದ್ರ ಮಾಡಬೂಳ, ರವಿಕುಮಾರ ಶಹಾಪುರಕರ್, ಶಿವಲೀಲಾ ಕಲಗುರ್ಕಿ, ಸವಿತಾ ನಾಸಿ, ರಮೇಶ ಡಿ ಬಡಿಗೇರ, ಗಣೇಶ ಚಿನ್ನಾಕಾರ, ದಿನೇಶ ಮದಕರಿ, ಮಹೇಶ ಚಿಂತನಪಳ್ಳಿ, ಮಧೂಸೂಧನ ಚಿಂತನಪಳ್ಳಿ, ಪ್ರಭವ ಪಟ್ಟಣಕರ್, ಮಲ್ಲಿನಾಥ ಸಂಗಶೆಟ್ಟಿ, ಚಂದ್ರಕಾoತ ಸೂರನ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದಿದ್ದರು.

ಪ್ರತಿನಿತ್ಯ ನಮ್ಮ ಕನ್ನಡ ಭಾಷೆಯ ಬಳಕೆ ಪ್ರೋತ್ಸಾಹಿಸಬೇಕು. ಪಾಲಕರೂ ಕೂಡ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವಂತಾಗಲಿ. ಕನ್ನಡ ಕೇವಲ ಭಾಷೆಯಲ್ಲ. ನದು ನಮ್ಮ ಸ್ವಾಭಿಮಾನದ ಸಂಕೇತವೂ ಹೌದು. ನಮ್ಮ ಉಸಿರು ಕನ್ನಡವಾಗಬೇಕು. ಕನ್ನಡ ಭಾಷೆ ಮತ್ತು ಸಂಸ್ಕೃತಿ ಅತ್ಯಂತ ಶ್ರೀಮಂತವಾದುದು. ನಾನು ಕೂಡ ಕನ್ನಡ ಸಾಹಿತ್ಯ ನನ್ನ ವಿದ್ಯಾಭ್ಯಾಸದಲ್ಲಿ ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡಿದ್ದೇನೆ. ಆದ್ಧರಿಂದಲೇ ಈ ಸಾಧನೆ ಮಾಡಲು ಸಾಧ್ಯವಾಯಿತು.

ಮೋಹನ ಸಂಗಣ್ಣಗೌಡ ಪಾಟೀಲ, (ಯುಪಿಎಸ್‌ಸಿ ತೇರ್ಗಡೆಯಾದ ಅಭ್ಯರ್ಥಿ)



share
ವಾರ್ತಾಭಾರತಿ
ವಾರ್ತಾಭಾರತಿ
Next Story
X