Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಮೌಲ್ಯಾಮಾಪನ ಪರೀಕ್ಷೆಗೆ...

ಕಲಬುರಗಿ| ಮೌಲ್ಯಾಮಾಪನ ಪರೀಕ್ಷೆಗೆ ಹಾಜರಾದ 500ಕ್ಕೂ ಹೆಚ್ಚಿನ ಅಭ್ಯರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ10 Aug 2025 6:57 PM IST
share
ಕಲಬುರಗಿ| ಮೌಲ್ಯಾಮಾಪನ ಪರೀಕ್ಷೆಗೆ ಹಾಜರಾದ 500ಕ್ಕೂ ಹೆಚ್ಚಿನ ಅಭ್ಯರ್ಥಿಗಳು

ಕಲಬುರಗಿ: ನಿಪುಣ ಕರ್ನಾಟಕ ಅಡಿಯಲ್ಲಿ ಸ್ಟೆಮ್ ಅಭ್ಯರ್ಥಿಗಳಿಗೆ ಶನಿವಾರ ಕಲಬುರಗಿ-ಶಹಾಬಾದ್‌ ರಸ್ತೆಯ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಸಂಸ್ಥೆಯಲ್ಲಿ ಸೈಕೋಮೆಟ್ರಿಕ್‌ ಅಸೆಸ್ಮೆಂಟ್ ಮತ್ತು ಟೆಕ್ನಿಕಲ್‌ ಅಸೆಸ್ಮೆಂಟ್ ಆನ್‌ಲೈನ್ ಮೌಲ್ಯಮಾಪನ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಸುಮಾರು 500 ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿದ್ದರು.

ರಾಜ್ಯದ ಟೈಯರ್ 2 ಮತ್ತು ಟೈಯರ್ 3 ನಗರಗಳಲ್ಲಿ ಪದವೀಧರರಲ್ಲಿ ಹೆಚ್ಚುತ್ತಿರುವ ಉದ್ಯೋಗಾವಕಾಶದ ಅಂತರವನ್ನು ಪರಿಹರಿಸಲು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಈ ಪರೀಕ್ಷೆ ನಡೆಸಲಾಗಿದ್ದು, ಅನ್‌ಸ್ಟಾಪ್‌ ಸಂಸ್ಥೆ‌ ಸಂಪೂರ್ಣ ಪರೀಕ್ಷೆಯ ನಿರ್ವಹಣೆ ಕೈಗೊಂಡಿತ್ತು.

ರಾಜ್ಯದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಐ.ಟಿ.ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರ ವಿಶೇಷ ಕಾಳಜಿಯಿಂದ ಕಳೆದ ಏಪ್ರಿಲ್ ಮಾಹೆಯಲ್ಲಿ ಕಲಬುರಗಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಭೌತಿಕವಾಗಿ ಹಾಜರಾದ 10 ಸಾವಿರ ಅಭ್ಯರ್ಥಿಗಳ ಪೈಕಿ ಆಯ್ದ 2,500 ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಪದವೀಧರರನ್ನು ಗುರಿಯಾಗಿಸಿ ರಾಜ್ಯದಲ್ಲಿಯೆ ಪ್ರಾಯೋಗಿಕವಾಗಿ ಕಲಬುರಗಿಯಲ್ಲಿ‌ ಮೊದಲ ಬಾರಿಗೆ ಈ ಮೌಲ್ಯಾಮಾಪನ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ನಂತರ ಅವರ ಕೌಶಲ್ಯ ಕೊರತೆಯನ್ನು ಪತ್ತೆ ಹಚ್ಚಿ ಅಗತ್ಯ ಕೌಶಲ್ಯ ನೀಡಿ ಅವರನ್ನು ಉದ್ಯೋಗಕ್ಕೆ ಸಿದ್ಧರನ್ನಾಗಿ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ.

ಸಾಂಪ್ರದಾಯಿಕ ಕೌಶಲ್ಯ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಪ್ರತಿಯೊಬ್ಬ ಅಭ್ಯರ್ಥಿಯ ಅರ್ಹತೆ, ಸಂವಹನ, ಡಿಜಿಟಲ್ ಸಾಕ್ಷರತೆ ಮತ್ತು ನಡವಳಿಕೆಯ ಸಿದ್ಧತೆಯನ್ನು ಗಮನದಲ್ಲಿಟ್ಟುಕೊಂಡು ಇಲ್ಲಿ 90 ನಿಮಿಷಗಳ ಕಾಲ ಮೌಲ್ಯಮಾಪನ ಮಾಡಲಾಗುತ್ತದೆ. ಈ ಉಪಕ್ರಮವು ವಿದ್ಯಾರ್ಥಿಗಳಿಗೆ ಫಲಿತಾಂಶಗಳನ್ನು ಸುಧಾರಿಸುವುದಲ್ಲದೆ, ಉದ್ಯೋಗದಾತರಿಗೆ ಉದ್ಯೋಗ-ಸಿದ್ಧ ಅಭ್ಯರ್ಥಿಗಳನ್ನು ಸಜ್ಜುಗೊಳಿಸುತ್ತದೆ ಮತ್ತು ಶಿಕ್ಷಣ ಸಂಸ್ಥೆಗಳು ನಿಜವಾದ ಉದ್ಯಮದ ಬೇಡಿಕೆಗಳೊಂದಿಗೆ ತರಬೇತಿಯನ್ನು ಹೊಂದಿಸಲು ಸಹಾಯ ಮಾಡುತ್ತದೆ.

ಆ.10 ರಂದು‌ ಸಹ ಬೆಳಿಗ್ಗೆ 10 ರಿಂದ‌ ಸಂಜೆ‌ 6 ಗಂಟೆ ವರೆಗೆ ನಾಲ್ಕು ಸ್ಲಾಟ್ ಗಳಲ್ಲಿ ಮೌಲ್ಯಾಮಾಪನ ಪರೀಕ್ಷೆ ನಡೆಯಲಿದ್ದು, ಬಿ.ಎಸ್.ಸಿ, ಎಂ.ಸಿ.ಎ, ಬಿ.ಕಾಂ, ಇಂಜಿನೀಯರಿಂಗ್, ಡಿಪ್ಲೋಮಾ ಪಧವಿಧರರು ಭಾಗವಹಿಸಲು

https://unstop.com/o/xvCVUWP/?ref=KalaburgiAssessment, https://unstop.com, www.karnatakadigital.in ಅಂತರ್ಜಾಲದ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೊಂದಣಿ ಮಾಡಿಕೊಳ್ಳದವರು ಸಹ ನೇರವಾಗಿ ಸಂಸ್ಥೆಗೆ ಅವಧಿಗೆ ಮುನ್ನ ಬಂದು ನೋಂದಣಿ ಮಾಡಿಕೊಂಡು ಪರೀಕ್ಷೆಯಲ್ಲಿ ಹಾಜರಾಗಬಹುದಾಗಿದೆ.

ಡಿ.ಸಿ.,ಮೇಯರ್‌ ಭೇಟಿ:

ಶನಿವಾರ ಪರೀಕ್ಷೆ ನಡೆದ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಸಂಸ್ಥೆಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ವರ್ಷಾ ಜಾನೆ ಭೇಟಿ ನೀಡಿ ಪರೀಕ್ಷೆ ಪ್ರಕ್ರಿಯೆ ವೀಕ್ಷಿಸಿದರು. ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಝೀಮ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗುಬಾಯಿ, ಪ್ರಮುಖರಾದ ಡಾ.ಕಿರಣ ದೇಶಮುಖ,‌ ಶಿಬಾ‌ ಮೆಹತಾ ಸೇರಿದಂತೆ ಮುಂತಾದವರು ಇದ್ದರು.

ಇನ್ನೂ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಕಲಬುರಗಿ ತಹಶೀಲ್ದಾರ್‌ ಆನಂದಶೀಲ ಅವರು ಪರೀಕ್ಷೆ ಸೂಸೂತ್ರವಾಗಿ ನಡೆಯಲು ಮಾರ್ಗದರ್ಶನ ನೀಡುತ್ತಾ ಪರೀಕ್ಷೆಯ ಸಂಪೂರ್ಣ ಮೇಲುಸ್ತುವಾರಿ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X