ಕಲಬುರಗಿ| ಕತ್ತು ಹಿಸುಕಿ ವೃದ್ಧೆಯ ಕೊಲೆ : ಪ್ರಕರಣ ದಾಖಲು

ಕಲಬುರಗಿ: ಕತ್ತು ಬಿಗಿದು ವೃದ್ಧೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಕಮಲಾಪುರ ತಾಲೂಕಿನ ಧಮ್ಮೂರ ಪುನರ್ವಸತಿ ಕೇಂದ್ರದಲ್ಲಿ ಬುಧವಾರ ರಾತ್ರಿ ನಡೆದಿದೆ.
ರಾಧಾಬಾಯಿ ಅಣ್ಣಪ್ಪ ಮೇಲಕೇರಿ (70) ಕೊಲೆಯಾದ ವೃದ್ಧೆ ಎಂದು ಗುರುತಿಸಲಾಗಿದೆ.
ಧಮ್ಮೂರ ಪುನರ್ವಸತಿ ಕೇಂದ್ರದಲ್ಲಿನ ಮನೆಯಲ್ಲಿ ಕೊಲೆ ನಡೆದಿದೆ. ಈ ಕುರಿತು ರಾಧಾಭಾಯಿ ಪುತ್ರ ಮಲ್ಲಿಕಾರ್ಜುನ ಪೊಲೀಸರಿಗೆ ದೂರು ನೀಡಿದ್ದಾರೆ. ವೃದ್ಧೆಯ ಕತ್ತಿನಲ್ಲಿ ಗಾಯಗಳು ಕಂಡು ಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಡಿವೈಎಸ್ಪಿ ಲೋಕೇಶ್ವರ ಪೂಜಾರಿ, ಪಿಎಸ್ಐ ಬಸವರಾಜ ಚಿತ್ರಕೋಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಹಾಗಾoವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





